<p><strong>ಬೆಂಗಳೂರು</strong>: ‘ಸರ್ಕಾರಿ ಉದ್ದಿಮೆಗಳು ಹಾಗೂ ನಿಗಮಗಳು ತಮ್ಮ ಉತ್ಪನ್ನಗಳ ಮೇಲೆ ಕನ್ನಡ ಕಡೆಗಣಿಸುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಕನ್ನಡ ಗೆಳೆಯರ ಬಳಗ ಆಗ್ರಹಿಸಿದೆ.</p><p>‘ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆ.ಎಸ್.ಡಿ.ಎಲ್) ತನ್ನ ಉತ್ಪನ್ನಗಳ ಮೇಲೆ ಕನ್ನಡ ಅಕ್ಷರ ಕಂಡೂ ಕಾಣದಂತೆ ಸಣ್ಣದಾಗಿ ಮುದ್ರಿಸುತ್ತಿದೆ. ಇದು ಕನ್ನಡಕ್ಕೆ ಮಾಡುತ್ತಿರುವ ಅವಮಾನವಾಗಿದೆ. ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ತನ್ನ ನೋಟ್ ಬುಕ್ ಹೊರತುಪಡಿಸಿ ಬೇರೆ ಉತ್ಪನ್ನಗಳ ಮೇಲೆ ವಿವರವನ್ನು ಕನ್ನಡದಲ್ಲಿ ಮುದ್ರಿಸುತ್ತಿಸಿಲ್ಲ’ ಎಂದು ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ ಬೇಸರ ವ್ಯಕ್ತಪಡಿಸಿದ್ದಾರೆ.</p><p>‘ಇಲ್ಲಿರುವ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಕನ್ನಡ ಬಳಕೆ ಆಗುತ್ತಿದೆಯೇ ಎನ್ನುವುದನ್ನು ಯಾರೂ ಪರಿಶೀಲಿಸುತ್ತಿಲ್ಲ. ರಾಜ್ಯ ಸರ್ಕಾರದ ಕೆಲವು ಫಲಕಗಳಲ್ಲೂ ಕನ್ನಡ ಸರಿಯಾಗಿ ಬಳಕೆಯಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-4-870379276</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸರ್ಕಾರಿ ಉದ್ದಿಮೆಗಳು ಹಾಗೂ ನಿಗಮಗಳು ತಮ್ಮ ಉತ್ಪನ್ನಗಳ ಮೇಲೆ ಕನ್ನಡ ಕಡೆಗಣಿಸುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಕನ್ನಡ ಗೆಳೆಯರ ಬಳಗ ಆಗ್ರಹಿಸಿದೆ.</p><p>‘ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆ.ಎಸ್.ಡಿ.ಎಲ್) ತನ್ನ ಉತ್ಪನ್ನಗಳ ಮೇಲೆ ಕನ್ನಡ ಅಕ್ಷರ ಕಂಡೂ ಕಾಣದಂತೆ ಸಣ್ಣದಾಗಿ ಮುದ್ರಿಸುತ್ತಿದೆ. ಇದು ಕನ್ನಡಕ್ಕೆ ಮಾಡುತ್ತಿರುವ ಅವಮಾನವಾಗಿದೆ. ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ತನ್ನ ನೋಟ್ ಬುಕ್ ಹೊರತುಪಡಿಸಿ ಬೇರೆ ಉತ್ಪನ್ನಗಳ ಮೇಲೆ ವಿವರವನ್ನು ಕನ್ನಡದಲ್ಲಿ ಮುದ್ರಿಸುತ್ತಿಸಿಲ್ಲ’ ಎಂದು ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ ಬೇಸರ ವ್ಯಕ್ತಪಡಿಸಿದ್ದಾರೆ.</p><p>‘ಇಲ್ಲಿರುವ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಕನ್ನಡ ಬಳಕೆ ಆಗುತ್ತಿದೆಯೇ ಎನ್ನುವುದನ್ನು ಯಾರೂ ಪರಿಶೀಲಿಸುತ್ತಿಲ್ಲ. ರಾಜ್ಯ ಸರ್ಕಾರದ ಕೆಲವು ಫಲಕಗಳಲ್ಲೂ ಕನ್ನಡ ಸರಿಯಾಗಿ ಬಳಕೆಯಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-4-870379276</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>