<p><strong>ಬೆಂಗಳೂರು</strong>: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) 1998ರಿಂದ 2024ರ ಅವಧಿಯಲ್ಲಿ ಸಿ, ಬಿ ಮತ್ತು ಎ ಗ್ರೂಪ್ ಅಧಿಕಾರಿ ಹಾಗೂ ಸಿಬ್ಬಂದಿ ನೇಮಕಾತಿಯಲ್ಲಿ ನಡೆದಿರುವ ಭ್ರಷ್ಟಾಚಾರ, ಪರೀಕ್ಷಾ ಅವ್ಯವಹಾರಗಳ ಬಗ್ಗೆ ಉನ್ನತಮಟ್ಟದ ಸಂಸ್ಥೆಗಳಿಂದ ತನಿಖೆ ನಡೆಸಬೇಕು ಎಂದು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ(ಆಕ್ಸಾ) ಆಗ್ರಹಿಸಿದೆ.</p>.<p>ಅಕ್ರಮದಲ್ಲಿ ಭಾಗಿಯಾದವರಿಗೆ ಶಿಕ್ಷೆ ಕೊಡಿಸಬೇಕು ಮತ್ತು ಆಯ್ಕೆ ಪಟ್ಟಿಯನ್ನು ರದ್ದುಪಡಿಸಿ ಬಡ ಪ್ರತಿಭಾವಂತ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದೆ. ಈ ಸಂಬಂಧ ಮನವಿಯನ್ನು ರಾಷ್ಟ್ರಪತಿ, ರಾಜ್ಯಪಾಲ, ಸಿಬಿಐ ನಿರ್ದೇಶಕ, ಲೋಕಾಯುಕ್ತ ನ್ಯಾಯ ಮೂರ್ತಿ, ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಗೆ ಕಳುಹಿಸಿದೆ.</p>.<p>ಕೆಪಿಎಸ್ಸಿಯ ಯಾವುದೇ ನೇಮಕಾತಿ ಯಲ್ಲಿ ಪಿ.ಸಿ.ಹೋಟಾ ಸಮಿತಿಯ ಶಿಫಾರಸು ಪಾಲಿಸದ ಕಾರಣ ಎಲ್ಲಾ ನೇಮಕಾತಿಗಳನ್ನು ಅಮಾನತ್ತಿನಲ್ಲಿ ಇರಿಸಬೇಕು. ಪರೀಕ್ಷಾ ಅಕ್ರಮದಲ್ಲಿ ಭಾಗಿ ಯಾಗಿರುವ ಸಿಬ್ಬಂದಿ, ಅಧಿಕಾರಿಗಳು, ಸದಸ್ಯರನ್ನು ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದೆ.</p>.<p>ಆಯ್ಕೆ ಪಟ್ಟಿ ರದ್ದುಪಡಿಸದಿದ್ದರೆ ಕೆಪಿಎಸ್ಸಿಗೆ ಮುತ್ತಿಗೆ ಹಾಕುವ ಚಳವಳಿ ನಡೆಸಲಾಗುವುದು ಎಂದು ನಿರುದ್ಯೋಗಿ ಅಭ್ಯರ್ಥಿಗಳು ಎಚ್ಚರಿಕೆ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-4-1723948341</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) 1998ರಿಂದ 2024ರ ಅವಧಿಯಲ್ಲಿ ಸಿ, ಬಿ ಮತ್ತು ಎ ಗ್ರೂಪ್ ಅಧಿಕಾರಿ ಹಾಗೂ ಸಿಬ್ಬಂದಿ ನೇಮಕಾತಿಯಲ್ಲಿ ನಡೆದಿರುವ ಭ್ರಷ್ಟಾಚಾರ, ಪರೀಕ್ಷಾ ಅವ್ಯವಹಾರಗಳ ಬಗ್ಗೆ ಉನ್ನತಮಟ್ಟದ ಸಂಸ್ಥೆಗಳಿಂದ ತನಿಖೆ ನಡೆಸಬೇಕು ಎಂದು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ(ಆಕ್ಸಾ) ಆಗ್ರಹಿಸಿದೆ.</p>.<p>ಅಕ್ರಮದಲ್ಲಿ ಭಾಗಿಯಾದವರಿಗೆ ಶಿಕ್ಷೆ ಕೊಡಿಸಬೇಕು ಮತ್ತು ಆಯ್ಕೆ ಪಟ್ಟಿಯನ್ನು ರದ್ದುಪಡಿಸಿ ಬಡ ಪ್ರತಿಭಾವಂತ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದೆ. ಈ ಸಂಬಂಧ ಮನವಿಯನ್ನು ರಾಷ್ಟ್ರಪತಿ, ರಾಜ್ಯಪಾಲ, ಸಿಬಿಐ ನಿರ್ದೇಶಕ, ಲೋಕಾಯುಕ್ತ ನ್ಯಾಯ ಮೂರ್ತಿ, ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಗೆ ಕಳುಹಿಸಿದೆ.</p>.<p>ಕೆಪಿಎಸ್ಸಿಯ ಯಾವುದೇ ನೇಮಕಾತಿ ಯಲ್ಲಿ ಪಿ.ಸಿ.ಹೋಟಾ ಸಮಿತಿಯ ಶಿಫಾರಸು ಪಾಲಿಸದ ಕಾರಣ ಎಲ್ಲಾ ನೇಮಕಾತಿಗಳನ್ನು ಅಮಾನತ್ತಿನಲ್ಲಿ ಇರಿಸಬೇಕು. ಪರೀಕ್ಷಾ ಅಕ್ರಮದಲ್ಲಿ ಭಾಗಿ ಯಾಗಿರುವ ಸಿಬ್ಬಂದಿ, ಅಧಿಕಾರಿಗಳು, ಸದಸ್ಯರನ್ನು ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದೆ.</p>.<p>ಆಯ್ಕೆ ಪಟ್ಟಿ ರದ್ದುಪಡಿಸದಿದ್ದರೆ ಕೆಪಿಎಸ್ಸಿಗೆ ಮುತ್ತಿಗೆ ಹಾಕುವ ಚಳವಳಿ ನಡೆಸಲಾಗುವುದು ಎಂದು ನಿರುದ್ಯೋಗಿ ಅಭ್ಯರ್ಥಿಗಳು ಎಚ್ಚರಿಕೆ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-4-1723948341</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>