<p><strong>ಬೆಂಗಳೂರು:</strong> ಅತ್ತಿಗುಪ್ಪೆ ನಿಲ್ದಾಣದಲ್ಲಿ ಮೆಟ್ರೊ ರೈಲು ಚಲಿಸುತ್ತಿದ್ದ ಸಂದರ್ಭದಲ್ಲಿ ಹಳಿಗೆ ಬಿದ್ದು ಧ್ರುವ್ ಠಕ್ಕರ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>‘ಮಹಾರಾಷ್ಟ್ರದ ಧ್ರುವ್, ಸರ್ಕಾರಿ ಕಾಲೇಜಿನಲ್ಲಿ ಎಲ್ಎಲ್ಬಿ ಮೊದಲ ವರ್ಷದಲ್ಲಿ ಓದುತ್ತಿದ್ದರು. ಗುರುವಾರ ನಿಲ್ದಾಣಕ್ಕೆ ಬಂದಿದ್ದ ಇವರು, ಪ್ಲಾಟ್ಫಾರ್ಮ್ನಲ್ಲಿ ನಿಂತಿದ್ದರು. ರೈಲು ಬರುತ್ತಿದ್ದಂತೆ ಅದರ ಎದುರು ಹಳಿ ಮೇಲೆ ಜಿಗಿದಿದ್ದರು’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>