<p><strong>ಬೆಂಗಳೂರು:</strong> ಬೆಂಗಳೂರು–ಮಂಗಳೂರು ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ನಿರ್ಮಾಣ ಕುರಿತಂತೆ ಯೂರೋಪಿಯನ್ ಬ್ಯುಸಿನೆಸ್ ಅಂಡ್ ಟೆಕ್ನಾಲಜಿ ಸಂಸ್ಥೆಯ ನಿಯೋಗ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಗುರುವಾರ ಚರ್ಚೆ ನಡೆಸಿತು.</p><p>ಈ ಹೈಸ್ಪೀಡ್ ಕಾರಿಡಾರ್ ನಿರ್ಮಾಣದಿಂದ ಮಂಗಳೂರು ಅಭಿವೃದ್ಧಿಯ ಜತೆಗೆ ಮಾರ್ಗ ಮಧ್ಯೆ ಬರುವ ಇತರ ಎಲ್ಲ ನಗರಗಳ ಅಭಿವೃದ್ಧಿಗೂ ಸಹಕಾರಿಯಾಗಲಿದೆ. 6 ರಿಂದ 8 ಪಥಗಳ ಈ ಕಾರಿಡಾರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ಮಾತುಕತೆ ನಡೆಯಿತು ಎಂದು ದಿನೇಶ್ ಗುಂಡೂರಾವ್ ಸುದ್ದಿಗಾರರಿಗೆ ತಿಳಿಸಿದರು.</p><p>ಈ ಯೋಜನೆಯಿಂದ ಮಂಗಳೂರು ಮಾತ್ರವಲ್ಲದೇ, ಇತರ ನಗರಗಳಿಗೂ ಹೆಚ್ಚಿನ ಬಂಡವಾಳ ಹರಿದು ಬರಲಿದ್ದು, ಈ ಎಲ್ಲ ನಗರಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಮಂಗಳೂರು ಬಂದರಿಗೂ ಇದು ಸಂಪರ್ಕ ಕಲ್ಪಿಸುವುದರಿಂದ ವ್ಯಾಪಾರ– ಉದ್ಯಮಗಳ ಬೆಳವಣಿಗೆಗೂ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.</p><p>ಕಾರಿಡಾರ್ನ ಸಾಗಿ ಹೋಗುವ ನಕಾಶೆ ಸಮೇತ ಹೆಚ್ಚಿನ ಮಾಹಿತಿಯೊಂದಿಗೆ ಚರ್ಚಿಸುವ ಅಗತ್ಯವಿದೆ. ಈ ವಿಚಾರವಾಗಿ ಲೋಕೋಪಯೋಗಿ ಸಚಿವರು ಮತ್ತು ಮುಖ್ಯಮಂತ್ರಿ ಅವರ ಜತೆ ಮಾತುಕತೆ ನಡೆಸುವುದಾಗಿಯೂ ದಿನೇಶ್ ಭರವಸೆ ನೀಡಿದರು.</p><p>ಮಂಗಳೂರು ಸುಸ್ಥಿರ ಅಭಿವೃದ್ಧಿಗೆ ಸಹಾಯಕವಾಗುವ ಇಂತಹ ಯೋಜನೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸಲಿದೆ. ಇಂತಹ ಯೋಜನೆಗಳ ಅನುಷ್ಠಾನಕ್ಕೆ ಖಾಸಗಿ ಸಹಭಾಗಿತ್ವವೂ ಬೇಕಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು–ಮಂಗಳೂರು ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ನಿರ್ಮಾಣ ಕುರಿತಂತೆ ಯೂರೋಪಿಯನ್ ಬ್ಯುಸಿನೆಸ್ ಅಂಡ್ ಟೆಕ್ನಾಲಜಿ ಸಂಸ್ಥೆಯ ನಿಯೋಗ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಗುರುವಾರ ಚರ್ಚೆ ನಡೆಸಿತು.</p><p>ಈ ಹೈಸ್ಪೀಡ್ ಕಾರಿಡಾರ್ ನಿರ್ಮಾಣದಿಂದ ಮಂಗಳೂರು ಅಭಿವೃದ್ಧಿಯ ಜತೆಗೆ ಮಾರ್ಗ ಮಧ್ಯೆ ಬರುವ ಇತರ ಎಲ್ಲ ನಗರಗಳ ಅಭಿವೃದ್ಧಿಗೂ ಸಹಕಾರಿಯಾಗಲಿದೆ. 6 ರಿಂದ 8 ಪಥಗಳ ಈ ಕಾರಿಡಾರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ಮಾತುಕತೆ ನಡೆಯಿತು ಎಂದು ದಿನೇಶ್ ಗುಂಡೂರಾವ್ ಸುದ್ದಿಗಾರರಿಗೆ ತಿಳಿಸಿದರು.</p><p>ಈ ಯೋಜನೆಯಿಂದ ಮಂಗಳೂರು ಮಾತ್ರವಲ್ಲದೇ, ಇತರ ನಗರಗಳಿಗೂ ಹೆಚ್ಚಿನ ಬಂಡವಾಳ ಹರಿದು ಬರಲಿದ್ದು, ಈ ಎಲ್ಲ ನಗರಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಮಂಗಳೂರು ಬಂದರಿಗೂ ಇದು ಸಂಪರ್ಕ ಕಲ್ಪಿಸುವುದರಿಂದ ವ್ಯಾಪಾರ– ಉದ್ಯಮಗಳ ಬೆಳವಣಿಗೆಗೂ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.</p><p>ಕಾರಿಡಾರ್ನ ಸಾಗಿ ಹೋಗುವ ನಕಾಶೆ ಸಮೇತ ಹೆಚ್ಚಿನ ಮಾಹಿತಿಯೊಂದಿಗೆ ಚರ್ಚಿಸುವ ಅಗತ್ಯವಿದೆ. ಈ ವಿಚಾರವಾಗಿ ಲೋಕೋಪಯೋಗಿ ಸಚಿವರು ಮತ್ತು ಮುಖ್ಯಮಂತ್ರಿ ಅವರ ಜತೆ ಮಾತುಕತೆ ನಡೆಸುವುದಾಗಿಯೂ ದಿನೇಶ್ ಭರವಸೆ ನೀಡಿದರು.</p><p>ಮಂಗಳೂರು ಸುಸ್ಥಿರ ಅಭಿವೃದ್ಧಿಗೆ ಸಹಾಯಕವಾಗುವ ಇಂತಹ ಯೋಜನೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸಲಿದೆ. ಇಂತಹ ಯೋಜನೆಗಳ ಅನುಷ್ಠಾನಕ್ಕೆ ಖಾಸಗಿ ಸಹಭಾಗಿತ್ವವೂ ಬೇಕಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>