<p><strong>ಬೆಂಗಳೂರು:</strong> ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿ ಹಾಸನ ವ್ಯಾಪ್ತಿಯಲ್ಲಿನ ಕಾಮಗಾರಿಗಳ ಸಮಸ್ಯೆಗಳ ಕುರಿತು ಸಂಸದರು, ಅಧಿಕಾರಿಗಳು ಮತ್ತು ಗುತ್ತಿಗೆದಾರರ ಜತೆ ಶುಕ್ರವಾರ ಸಭೆ ನಡೆಸಿದರು.</p>.<p>‘ಹಾಸನ ಬೈಪಾಸ್ 10 ಕಿ.ಮೀ ಉದ್ದವಿದ್ದು, ಇದರ ವ್ಯಾಪ್ತಿಯಲ್ಲಿ ಬರುವ ರೈಲ್ವೇ ಓವರ್ ಬ್ರಿಡ್ಜ್ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಮೇ ತಿಂಗಳ ಒಳಗೆ ರಸ್ತೆಗಳನ್ನು ಸಂಚಾರಕ್ಕೆ ಮುಕ್ತಗೊಳಿಸಬೇಕು’ ಎಂದು ಅವರು ಸೂಚಿಸಿದರು.</p>.<p>ಸಕಲೇಶಪುರದ ಸಮೀಪ ದೋಣಿಗಾಲ್ ಬಳಿ ಉಳಿದಿರುವ 600 ಮೀಟರ್ ರಸ್ತೆಯನ್ನು ತುರ್ತಾಗಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಕಳೆದ ಬಾರಿ ಸಕಲೇಶಪುರದಿಂದ ಮಾರ್ನಳ್ಳಿ ಮಧ್ಯೆ ಹಲವು ಕಡೆ ಭೂಕುಸಿತ ಉಂಟಾಗಿತ್ತು. ಈ ಸಂಬಂಧಿತ ಕಾಮಗಾರಿಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮೋದನೆ ನೀಡಿದೆ. ಹೀಗಾಗಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿ ಹಾಸನ ವ್ಯಾಪ್ತಿಯಲ್ಲಿನ ಕಾಮಗಾರಿಗಳ ಸಮಸ್ಯೆಗಳ ಕುರಿತು ಸಂಸದರು, ಅಧಿಕಾರಿಗಳು ಮತ್ತು ಗುತ್ತಿಗೆದಾರರ ಜತೆ ಶುಕ್ರವಾರ ಸಭೆ ನಡೆಸಿದರು.</p>.<p>‘ಹಾಸನ ಬೈಪಾಸ್ 10 ಕಿ.ಮೀ ಉದ್ದವಿದ್ದು, ಇದರ ವ್ಯಾಪ್ತಿಯಲ್ಲಿ ಬರುವ ರೈಲ್ವೇ ಓವರ್ ಬ್ರಿಡ್ಜ್ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಮೇ ತಿಂಗಳ ಒಳಗೆ ರಸ್ತೆಗಳನ್ನು ಸಂಚಾರಕ್ಕೆ ಮುಕ್ತಗೊಳಿಸಬೇಕು’ ಎಂದು ಅವರು ಸೂಚಿಸಿದರು.</p>.<p>ಸಕಲೇಶಪುರದ ಸಮೀಪ ದೋಣಿಗಾಲ್ ಬಳಿ ಉಳಿದಿರುವ 600 ಮೀಟರ್ ರಸ್ತೆಯನ್ನು ತುರ್ತಾಗಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಕಳೆದ ಬಾರಿ ಸಕಲೇಶಪುರದಿಂದ ಮಾರ್ನಳ್ಳಿ ಮಧ್ಯೆ ಹಲವು ಕಡೆ ಭೂಕುಸಿತ ಉಂಟಾಗಿತ್ತು. ಈ ಸಂಬಂಧಿತ ಕಾಮಗಾರಿಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮೋದನೆ ನೀಡಿದೆ. ಹೀಗಾಗಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>