<p><strong>ನವದೆಹಲಿ:</strong> ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆದ್ದಾರಿಯ ಸುರಕ್ಷತಾ ಪರಿಶೀಲನೆಗಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಸ್ತೆ ಸುರಕ್ಷತಾ ತಜ್ಞರ ಸಮಿತಿ ರಚಿಸಿದೆ.</p>.<p>‘ಸುರಕ್ಷಿತ ಪ್ರಯಾಣ ಉತ್ತೇಜಿಸುವ ಮೂಲಕ ಕರ್ನಾಟಕದ ಜನರಿಗೆ ಕಾರಿಡಾರ್ನ ಸೇವೆಯನ್ನು ಖಚಿತಪಡಿಸುವುದು ಈ ಸಮಿತಿ ರಚನೆಯ ಉದ್ದೇಶ. ಸಮಿತಿಯು ಪ್ರಸ್ತುತ ಹೆದ್ದಾರಿ ಪ್ರವಾಸದಲ್ಲಿದ್ದು, ಜುಲೈ 20ರೊಳಗೆ ಅಧ್ಯಯನ ಪೂರ್ಣಗೊಳಿಸಲಿದೆ. ಬಳಿಕ ಸಮಿತಿಯು ವರದಿಯನ್ನು 10 ದಿನಗಳಲ್ಲಿ ಸಲ್ಲಿಸಲಿದೆ’ ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ಪ್ರಕಟಣೆ ತಿಳಿಸಿದೆ. </p>.<p>118 ಕಿ.ಮೀ. ಉದ್ದದ ಎಕ್ಸ್ಪ್ರೆಸ್ವೇಯಲ್ಲಿ ಈ ವರ್ಷದ ಮಾರ್ಚ್ನಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಈ ಹೆದ್ದಾರಿಯು ವಾಣಿಜ್ಯ ಚಟುವಟಿಕೆ ಉತ್ತೇಜಿಸುತ್ತಿದೆ ಮತ್ತು ಪ್ರದೇಶದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ. ಹೆದ್ದಾರಿಯು ಕರ್ನಾಟಕದ ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಕೇವಲ 75 ನಿಮಿಷಗಳಿಗೆ ಇಳಿಸಿದೆ ಎಂದು ಸಚಿವಾಲಯ ಹೇಳಿದೆ. </p>.<p>ಈ ಕಾರಿಡಾರ್ನಲ್ಲಿ 4 ರೈಲು ಮೇಲ್ಸೇತುವೆಗಳು, 9 ಪ್ರಮುಖ ಸೇತುವೆಗಳು, 40 ಸಣ್ಣ ಸೇತುವೆಗಳು, 89 ಅಂಡರ್ಪಾಸ್ಗಳು ಇವೆ. ಸಂಚಾರ ದಟ್ಟಣೆ ಕಡಿಮೆ ಮಾಡಲು ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬೈಪಾಸ್ಗಳನ್ನು ನಿರ್ಮಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆದ್ದಾರಿಯ ಸುರಕ್ಷತಾ ಪರಿಶೀಲನೆಗಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಸ್ತೆ ಸುರಕ್ಷತಾ ತಜ್ಞರ ಸಮಿತಿ ರಚಿಸಿದೆ.</p>.<p>‘ಸುರಕ್ಷಿತ ಪ್ರಯಾಣ ಉತ್ತೇಜಿಸುವ ಮೂಲಕ ಕರ್ನಾಟಕದ ಜನರಿಗೆ ಕಾರಿಡಾರ್ನ ಸೇವೆಯನ್ನು ಖಚಿತಪಡಿಸುವುದು ಈ ಸಮಿತಿ ರಚನೆಯ ಉದ್ದೇಶ. ಸಮಿತಿಯು ಪ್ರಸ್ತುತ ಹೆದ್ದಾರಿ ಪ್ರವಾಸದಲ್ಲಿದ್ದು, ಜುಲೈ 20ರೊಳಗೆ ಅಧ್ಯಯನ ಪೂರ್ಣಗೊಳಿಸಲಿದೆ. ಬಳಿಕ ಸಮಿತಿಯು ವರದಿಯನ್ನು 10 ದಿನಗಳಲ್ಲಿ ಸಲ್ಲಿಸಲಿದೆ’ ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ಪ್ರಕಟಣೆ ತಿಳಿಸಿದೆ. </p>.<p>118 ಕಿ.ಮೀ. ಉದ್ದದ ಎಕ್ಸ್ಪ್ರೆಸ್ವೇಯಲ್ಲಿ ಈ ವರ್ಷದ ಮಾರ್ಚ್ನಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಈ ಹೆದ್ದಾರಿಯು ವಾಣಿಜ್ಯ ಚಟುವಟಿಕೆ ಉತ್ತೇಜಿಸುತ್ತಿದೆ ಮತ್ತು ಪ್ರದೇಶದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ. ಹೆದ್ದಾರಿಯು ಕರ್ನಾಟಕದ ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಕೇವಲ 75 ನಿಮಿಷಗಳಿಗೆ ಇಳಿಸಿದೆ ಎಂದು ಸಚಿವಾಲಯ ಹೇಳಿದೆ. </p>.<p>ಈ ಕಾರಿಡಾರ್ನಲ್ಲಿ 4 ರೈಲು ಮೇಲ್ಸೇತುವೆಗಳು, 9 ಪ್ರಮುಖ ಸೇತುವೆಗಳು, 40 ಸಣ್ಣ ಸೇತುವೆಗಳು, 89 ಅಂಡರ್ಪಾಸ್ಗಳು ಇವೆ. ಸಂಚಾರ ದಟ್ಟಣೆ ಕಡಿಮೆ ಮಾಡಲು ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬೈಪಾಸ್ಗಳನ್ನು ನಿರ್ಮಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>