<p><strong>ಬೆಂಗಳೂರು:</strong> ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಜಿಬಿಎ) ಐದು ನಗರ ಪಾಲಿಕೆಗಳಿಗೆ ಸದ್ಯದಲ್ಲೇ ಚುನಾವಣೆ ಘೋಷಣೆಯಾಗುವುದು ಖಚಿತವಾದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸಭೆ ನಡೆಸಿದರು.</p>.<p>ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಭಾನುವಾರ ನಡೆದ ಸಭೆ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಕೂಡಾ ಇದ್ದರು.</p>.<p>ಇತ್ತೀಚೆಗೆ ರಾಜ್ಯ ಚುನಾವಣಾ ಆಯುಕ್ತರು ಜಿ.ಎಸ್. ಸಂಗ್ರೇಶಿ ಅವರು ಜೂನ್ ಮಧ್ಯದಲ್ಲಿ ಜಿಬಿಎ ನಗರ ಪಾಲಿಕೆಗಳ ಚುನಾವಣೆ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ.ಸುರ್ಜೇವಾಲಾ ಜೊತೆ ನಡೆದ ಸಭೆಯಲ್ಲಿ ಚುನಾವಣೆ ಮುಂದೂಡಲು ಸರ್ಕಾರದ ಮುಂದಿರುವ ಆಯ್ಕೆಗಳ ಬಗ್ಗೆ ಪರಿಶೀಲನೆ ನಡೆಸಿದರು ಎಂದು ಗೊತ್ತಾಗಿದೆ.</p>.<p>ಯಾವುದಾದರೂ ಕಾರಣ ನೀಡಿ ಸುಪ್ರೀಂ ಕೋರ್ಟ್ ಎದುರು ಹೆಚ್ಚುವರಿ ಕಾಲಾವಕಾಶ ನೀಡಲು ಅವಕಾಶಗಳಿ ವೆಯೇ ಎಂಬ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ಅಲ್ಲದೆ, ಯಾವಾಗ ಚುನಾವಣೆ ಘೋಷಣೆಯಾದರೂ ಪಕ್ಷ ಸಂಪೂರ್ಣವಾಗಿ ಚುನಾವಣೆ ಸಜ್ಜಾಗಿರಬೇಕು ಎಂದು ನಿರ್ಧರಿಸಲಾಗಿದೆ.</p>.<p>ಎಸ್ಐಆರ್ ಬಗ್ಗೆಯೂ ಚರ್ಚೆ: ಸಭೆಯಲ್ಲಿ ಎಸ್ಐಆರ್ ಹಾಗೂ ಅದರ ಪರಿಣಾಮಗಳ ಕುರಿತು ಬಗ್ಗೆಯೂ ಚರ್ಚಿಸಲಾಗಿದೆ. ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಸ್ಐಆರ್ ಬಗ್ಗೆ ವಿವಿಧ ಸಂಘಟನೆಗಳ ಜೊತೆ ಸಭೆ ನಡೆದಿತ್ತು. ಆ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಆಧರಿಸಿ ಎಸ್ಐಆರ್ ಬಗ್ಗೆ ರಾಜ್ಯ ಸರ್ಕಾರ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂಬ ಕುರಿತುಪ್ರಾಥಮಿಕವಾಗಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-4-1959942634</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಜಿಬಿಎ) ಐದು ನಗರ ಪಾಲಿಕೆಗಳಿಗೆ ಸದ್ಯದಲ್ಲೇ ಚುನಾವಣೆ ಘೋಷಣೆಯಾಗುವುದು ಖಚಿತವಾದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸಭೆ ನಡೆಸಿದರು.</p>.<p>ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಭಾನುವಾರ ನಡೆದ ಸಭೆ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಕೂಡಾ ಇದ್ದರು.</p>.<p>ಇತ್ತೀಚೆಗೆ ರಾಜ್ಯ ಚುನಾವಣಾ ಆಯುಕ್ತರು ಜಿ.ಎಸ್. ಸಂಗ್ರೇಶಿ ಅವರು ಜೂನ್ ಮಧ್ಯದಲ್ಲಿ ಜಿಬಿಎ ನಗರ ಪಾಲಿಕೆಗಳ ಚುನಾವಣೆ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ.ಸುರ್ಜೇವಾಲಾ ಜೊತೆ ನಡೆದ ಸಭೆಯಲ್ಲಿ ಚುನಾವಣೆ ಮುಂದೂಡಲು ಸರ್ಕಾರದ ಮುಂದಿರುವ ಆಯ್ಕೆಗಳ ಬಗ್ಗೆ ಪರಿಶೀಲನೆ ನಡೆಸಿದರು ಎಂದು ಗೊತ್ತಾಗಿದೆ.</p>.<p>ಯಾವುದಾದರೂ ಕಾರಣ ನೀಡಿ ಸುಪ್ರೀಂ ಕೋರ್ಟ್ ಎದುರು ಹೆಚ್ಚುವರಿ ಕಾಲಾವಕಾಶ ನೀಡಲು ಅವಕಾಶಗಳಿ ವೆಯೇ ಎಂಬ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ಅಲ್ಲದೆ, ಯಾವಾಗ ಚುನಾವಣೆ ಘೋಷಣೆಯಾದರೂ ಪಕ್ಷ ಸಂಪೂರ್ಣವಾಗಿ ಚುನಾವಣೆ ಸಜ್ಜಾಗಿರಬೇಕು ಎಂದು ನಿರ್ಧರಿಸಲಾಗಿದೆ.</p>.<p>ಎಸ್ಐಆರ್ ಬಗ್ಗೆಯೂ ಚರ್ಚೆ: ಸಭೆಯಲ್ಲಿ ಎಸ್ಐಆರ್ ಹಾಗೂ ಅದರ ಪರಿಣಾಮಗಳ ಕುರಿತು ಬಗ್ಗೆಯೂ ಚರ್ಚಿಸಲಾಗಿದೆ. ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಸ್ಐಆರ್ ಬಗ್ಗೆ ವಿವಿಧ ಸಂಘಟನೆಗಳ ಜೊತೆ ಸಭೆ ನಡೆದಿತ್ತು. ಆ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಆಧರಿಸಿ ಎಸ್ಐಆರ್ ಬಗ್ಗೆ ರಾಜ್ಯ ಸರ್ಕಾರ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂಬ ಕುರಿತುಪ್ರಾಥಮಿಕವಾಗಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-4-1959942634</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>