<p><strong>ಬೆಂಗಳೂರು</strong>: ‘ಬಿವಿಕೆ ಅಯ್ಯಂಗಾರ್ ರಸ್ತೆಯ 1 ಕಿ.ಮೀ. ಅಂತರದಲ್ಲಿ 400 ಗುಂಡಿಗಳಿವೆ. ಗುಂಡಿ ಮುಚ್ಚಲು ಸರ್ಕಾರ ಬಿಡುಗಡೆ ಮಾಡುತ್ತಿರುವ ಹಣ ಎಲ್ಲಿ ಹೋಗುತ್ತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಪ್ರಶ್ನಿಸಿದರು.</p>.<p>ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ನಿಯೋಗವು ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿತು.</p>.<p>ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ, ‘ಬೆಂಗಳೂರು ಮಾತ್ರವಲ್ಲ. ಇಡೀ ರಾಜ್ಯದ ಎಲ್ಲ ಕಡೆಗಳಲ್ಲಿನ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ. ಗುಂಡಿ ಮುಚ್ಚುವ ನೆಪದಲ್ಲಿ ಜನರ ತೆರಿಗೆ ಹಣ ಲೂಟಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಮಾತೆತ್ತಿದರೆ, ‘ಹಣ ಬಿಡುಗಡೆ ಮಾಡಿದ್ದೇವೆ’ ಎನ್ನುತ್ತಾರೆ. ಹಾಗಿದ್ದಲ್ಲಿ ಆ ಹಣ ಎಲ್ಲಿಗೆ ಹೋಯಿತು. ಹೀಗೆ ಸುಳ್ಳು ಹೇಳುವುದನ್ನು ಬಿಟ್ಟು, ಗುಂಡಿಗಳನ್ನು ಮುಚ್ಚಿ. ರಸ್ತೆಗಳಿಗೆ ಡಾಂಬರು ಹಾಕಿ’ ಎಂದರು.</p>.<p>‘ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಬೆಂಗಳೂರಿನಲ್ಲಿ ಜನರ ಮಧ್ಯೆಯೇ ₹7 ಕೋಟಿ ದರೋಡೆ ಮಾಡಿದ್ದಾರೆ. ಎರಡೂವರೆ ವರ್ಷದಲ್ಲಿ ಇವರ ಸಾಧನೆ ಏನೂ ಇಲ್ಲ. ಬೆಂಗಳೂರನ್ನು ಗಾರ್ಬೇಜ್ ಸಿಟಿ, ದರೋಡೆ ನಗರ ಮಾಡಿದ್ದಷ್ಟೇ ಇವರ ಸಾಧನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಎರಡೂವರೆ ವರ್ಷದ ಅವಧಿಯಲ್ಲಿ ಸರ್ಕಾರದ ವಿರುದ್ಧ ಆರೋಪಗಳ ಕುರಿತಾದ ಪೋಸ್ಟರ್ಗಳನ್ನು ಬಿಡುಗಡೆ ಮಾಡಿದರು. ಸಂಸದರಾದ ಪಿ.ಸಿ.ಮೋಹನ್, ಗೋವಿಂದ ಕಾರಜೋಳ ಅವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬಿವಿಕೆ ಅಯ್ಯಂಗಾರ್ ರಸ್ತೆಯ 1 ಕಿ.ಮೀ. ಅಂತರದಲ್ಲಿ 400 ಗುಂಡಿಗಳಿವೆ. ಗುಂಡಿ ಮುಚ್ಚಲು ಸರ್ಕಾರ ಬಿಡುಗಡೆ ಮಾಡುತ್ತಿರುವ ಹಣ ಎಲ್ಲಿ ಹೋಗುತ್ತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಪ್ರಶ್ನಿಸಿದರು.</p>.<p>ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ನಿಯೋಗವು ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿತು.</p>.<p>ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ, ‘ಬೆಂಗಳೂರು ಮಾತ್ರವಲ್ಲ. ಇಡೀ ರಾಜ್ಯದ ಎಲ್ಲ ಕಡೆಗಳಲ್ಲಿನ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ. ಗುಂಡಿ ಮುಚ್ಚುವ ನೆಪದಲ್ಲಿ ಜನರ ತೆರಿಗೆ ಹಣ ಲೂಟಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಮಾತೆತ್ತಿದರೆ, ‘ಹಣ ಬಿಡುಗಡೆ ಮಾಡಿದ್ದೇವೆ’ ಎನ್ನುತ್ತಾರೆ. ಹಾಗಿದ್ದಲ್ಲಿ ಆ ಹಣ ಎಲ್ಲಿಗೆ ಹೋಯಿತು. ಹೀಗೆ ಸುಳ್ಳು ಹೇಳುವುದನ್ನು ಬಿಟ್ಟು, ಗುಂಡಿಗಳನ್ನು ಮುಚ್ಚಿ. ರಸ್ತೆಗಳಿಗೆ ಡಾಂಬರು ಹಾಕಿ’ ಎಂದರು.</p>.<p>‘ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಬೆಂಗಳೂರಿನಲ್ಲಿ ಜನರ ಮಧ್ಯೆಯೇ ₹7 ಕೋಟಿ ದರೋಡೆ ಮಾಡಿದ್ದಾರೆ. ಎರಡೂವರೆ ವರ್ಷದಲ್ಲಿ ಇವರ ಸಾಧನೆ ಏನೂ ಇಲ್ಲ. ಬೆಂಗಳೂರನ್ನು ಗಾರ್ಬೇಜ್ ಸಿಟಿ, ದರೋಡೆ ನಗರ ಮಾಡಿದ್ದಷ್ಟೇ ಇವರ ಸಾಧನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಎರಡೂವರೆ ವರ್ಷದ ಅವಧಿಯಲ್ಲಿ ಸರ್ಕಾರದ ವಿರುದ್ಧ ಆರೋಪಗಳ ಕುರಿತಾದ ಪೋಸ್ಟರ್ಗಳನ್ನು ಬಿಡುಗಡೆ ಮಾಡಿದರು. ಸಂಸದರಾದ ಪಿ.ಸಿ.ಮೋಹನ್, ಗೋವಿಂದ ಕಾರಜೋಳ ಅವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>