<p><strong>ಬೆಂಗಳೂರು:</strong> ರೈಲು ಪ್ರಯಾಣಿಕರನ್ನು ಪರಿಚಯಿಸಿಕೊಂಡು ಟೀ ಹಾಗೂ ಜ್ಯೂಸ್ನಲ್ಲಿ ಮತ್ತುಬರುವ ಔಷಧ ಬೆರೆಸಿ ಕೊಟ್ಟು ಪ್ರಜ್ಞೆ ತಪ್ಪಿದ ಬಳಿಕ ಕಳ್ಳತನ ಮಾಡುತ್ತಿದ್ದ ಬಿಹಾರದ ಇಬ್ಬರನ್ನು ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.</p><p>ಮೊಹಮ್ಮದ್ ಸಫಾರ್ ಹಾಗೂ ಸತರ್ಮ್ ಬಂಧಿತರು.</p><p>ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಿಹಾರದ ಕೃಷ್ಣಕುಮಾರ್ ಅವರಿಗೆ ಮತ್ತುಬರುವ ಔಷಧ ನೀಡಿ ಅವರ ಬ್ಯಾಗ್, ಮೊಬೈಲ್ ಹಾಗೂ ನಗದು ಕಳ್ಳತನ ಮಾಡಿಕೊಂಡು ಆರೋಪಿಗಳು ಪರಾರಿ ಆಗಿದ್ದರು ಎಂದು ಪೊಲೀಸರು ಹೇಳಿದರು.</p><p>ಕುಮಾರ್ ಅವರು ನಗರದಿಂದ ಪಟ್ನಾದ ದಾನಾಪುರಕ್ಕೆ ಪ್ರಯಾಣಿಸಲು ರೈಲು ಹತ್ತಿದ್ದರು. ಪಕ್ಕದಲ್ಲೇ ಬಂದು ಕುಳಿತ್ತಿದ್ದ ಆರೋಪಿಗಳು ‘ನಾವೂ ಬಿಹಾರದವರು’ ಎಂಬುದಾಗಿ ಪರಿಚಯಿಸಿಕೊಂಡಿದ್ದರು. ಸ್ವಲ್ಪ ಹೊತ್ತಿನ ಬಳಿಕ ‘ಟೀ ಕುಡಿಯೋಣ’ ಎಂದು ಕೇಳಿದ್ದರು. ಕುಮಾರ ಅವರೂ ಒಪ್ಪಿದ್ದರು. </p><p>ಆರೋಪಿಗಳ ಪೈಕಿ ಒಬ್ಬಾತ ರೈಲಿನಿಂದ ಕೆಳಕ್ಕೆ ಇಳಿದು ಹೋಗಿ ಮತ್ತುಬರುವ ಔಷಧ ಬೆರೆಸಿದ್ದ ಟೀತಂದು ಕೊಟ್ಟಿದ್ದ. ಟೀ ಕುಡಿದ ಮೇಲೆ ಕುಮಾರ್ ಅವರು ಪ್ರಜ್ಞೆ ತಪ್ಪಿದ್ದರು. ಆಗ, ₹ 4 ಸಾವಿರ ನಗದು, ಬ್ಯಾಗ್ ಹಾಗೂ ಚಿನ್ನದ ಸರವನ್ನು ಕಳ್ಳತನ ಮಾಡಿಕೊಂಡು ಪರಾರಿ ಆಗಿದ್ದರು ಎಂದು ರೈಲ್ವೆ ಪೊಲೀಸರುಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರೈಲು ಪ್ರಯಾಣಿಕರನ್ನು ಪರಿಚಯಿಸಿಕೊಂಡು ಟೀ ಹಾಗೂ ಜ್ಯೂಸ್ನಲ್ಲಿ ಮತ್ತುಬರುವ ಔಷಧ ಬೆರೆಸಿ ಕೊಟ್ಟು ಪ್ರಜ್ಞೆ ತಪ್ಪಿದ ಬಳಿಕ ಕಳ್ಳತನ ಮಾಡುತ್ತಿದ್ದ ಬಿಹಾರದ ಇಬ್ಬರನ್ನು ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.</p><p>ಮೊಹಮ್ಮದ್ ಸಫಾರ್ ಹಾಗೂ ಸತರ್ಮ್ ಬಂಧಿತರು.</p><p>ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಿಹಾರದ ಕೃಷ್ಣಕುಮಾರ್ ಅವರಿಗೆ ಮತ್ತುಬರುವ ಔಷಧ ನೀಡಿ ಅವರ ಬ್ಯಾಗ್, ಮೊಬೈಲ್ ಹಾಗೂ ನಗದು ಕಳ್ಳತನ ಮಾಡಿಕೊಂಡು ಆರೋಪಿಗಳು ಪರಾರಿ ಆಗಿದ್ದರು ಎಂದು ಪೊಲೀಸರು ಹೇಳಿದರು.</p><p>ಕುಮಾರ್ ಅವರು ನಗರದಿಂದ ಪಟ್ನಾದ ದಾನಾಪುರಕ್ಕೆ ಪ್ರಯಾಣಿಸಲು ರೈಲು ಹತ್ತಿದ್ದರು. ಪಕ್ಕದಲ್ಲೇ ಬಂದು ಕುಳಿತ್ತಿದ್ದ ಆರೋಪಿಗಳು ‘ನಾವೂ ಬಿಹಾರದವರು’ ಎಂಬುದಾಗಿ ಪರಿಚಯಿಸಿಕೊಂಡಿದ್ದರು. ಸ್ವಲ್ಪ ಹೊತ್ತಿನ ಬಳಿಕ ‘ಟೀ ಕುಡಿಯೋಣ’ ಎಂದು ಕೇಳಿದ್ದರು. ಕುಮಾರ ಅವರೂ ಒಪ್ಪಿದ್ದರು. </p><p>ಆರೋಪಿಗಳ ಪೈಕಿ ಒಬ್ಬಾತ ರೈಲಿನಿಂದ ಕೆಳಕ್ಕೆ ಇಳಿದು ಹೋಗಿ ಮತ್ತುಬರುವ ಔಷಧ ಬೆರೆಸಿದ್ದ ಟೀತಂದು ಕೊಟ್ಟಿದ್ದ. ಟೀ ಕುಡಿದ ಮೇಲೆ ಕುಮಾರ್ ಅವರು ಪ್ರಜ್ಞೆ ತಪ್ಪಿದ್ದರು. ಆಗ, ₹ 4 ಸಾವಿರ ನಗದು, ಬ್ಯಾಗ್ ಹಾಗೂ ಚಿನ್ನದ ಸರವನ್ನು ಕಳ್ಳತನ ಮಾಡಿಕೊಂಡು ಪರಾರಿ ಆಗಿದ್ದರು ಎಂದು ರೈಲ್ವೆ ಪೊಲೀಸರುಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>