ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ
ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಆದರೆ ಗುರುವಾರ ಮಾಧ್ಯಮಗಳಲ್ಲಿ ಸರ್ಕಾರದ ಸಾಧನೆಯ ಕುರಿತು ಜಾಹಿರಾತು ಪ್ರಕಟಿಸಿ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ಅಶೋಕ ದೂರಿದ್ದಾರೆ. ‘ಒಂದು ವೇಳೆ ವಾಲ್ಮೀಕಿ ಜಯಂತಿಗೆ ಶುಭಾಶಯ ಕೋರುವ ಉದ್ದೇಶ ಮಾತ್ರ ಇದಿದ್ದರೆ ಸರ್ಕಾರದ ಸಾಧನೆಗಳು ಮುಖ್ಯಮಂತ್ರಿ ಉಪಮುಖ್ಯಮಂತ್ರಿಯ ಭಾವಚಿತ್ರಗಳಿಲ್ಲದೇ ಕೇವಲ ಶುಭಾಶಯ ಕೋರುವ ಜಾಹಿರಾತು ಪ್ರಕಟಿಸಬಹುದಿತ್ತು. ಆದರೆ ಸರ್ಕಾರ ಉದ್ದೇಶಪೂರ್ವಕವಾಗಿಯೇ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದೆ. ಇದನ್ನು ಚುನಾವಣಾ ಆಯೋಗದ ಗಮನಕ್ಕೆ ತರಲಾಗುವುದು’ ಎಂದು ತಿಳಿಸಿದ್ದಾರೆ.