<p>ಬೆಂಗಳೂರು: ‘ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿಗಾಗಿ ಮಾಡಿರುವ ವರ್ಗೀಕರಣದಿಂದ ಬಂಜಾರ, ಭೋವಿ, ಕೊರಚ, ಕೊರಮ ಸೇರಿ ಹಲವು ಸೂಕ್ಷ್ಮ ಸಮುದಾಯಗಳಿಗೆ ಅನ್ಯಾಯವಾಗಿದೆ. ಇದನ್ನು ಕೂಡಲೇ ಸರಿಪಡಿಸಬೇಕು’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಒತ್ತಾಯಿಸಿದ್ದಾರೆ.</p>.<p>ಬಂಜಾರ, ಭೋವಿ, ಕೊರಚ, ಕೊರಮ ಸೇರಿ ಹಲವು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಹಲವು ಸಮುದಾಯಗಳ ಮುಖಂಡರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮತ್ತು ಸರ್ದಾರ್ ಸೇವಾಲಾಲ್ ಸ್ವಾಮೀಜಿ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಸಿದರು.</p>.<p>‘ಇದೇ 24ರಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಲಾಗಿದೆ. ಯಾರನ್ನೋ ಓಲೈಸುವ ಸಲುವಾಗಿ ಸೂಕ್ಷ್ಮ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ. ಇದನ್ನು ನಾವು ವಿರೋಧಿಸುತ್ತೇವೆ’ ಎಂದು ಸಭೆಯ ನಂತರ ಅವರು ತಿಳಿಸಿದ್ದಾರೆ.</p>.<p>ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಒಕ್ಕೂಟವು, ‘ಒಂದೇ ಸ್ವರೂಪದ ಜಾತಿ ಸಮುದಾಯಗಳನ್ನು, ಒಂದೇ ಪ್ರವರ್ಗಕ್ಕೆ ಸೇರಿಸಬೇಕಿತ್ತು. ಆದರೆ ‘ಸಿ’ ಪ್ರವರ್ಗದಲ್ಲಿ ಎಡಗೈ ಸಮುದಾಯದ ಒಂಬತ್ತು ಜಾತಿಗಳು ಮತ್ತು ಬಲಗೈ ಸಮುದಾಯದ 16 ಜಾತಿಗಳನ್ನೂ ಸೇರಿಸಲಾಗಿದೆ. ಈ ಪ್ರಮಾದವನ್ನು ಸರಿಪಡಿಸಬೇಕು. ಅತಿ ಹಿಂದುಳಿದಿರುವ 64 ಜಾತಿಗಳು ಇರುವ ಪ್ರವರ್ಗ ‘ಸಿ’ಗೆ ಶೇ 5ರಷ್ಟು ಒಳಮೀಸಲಾತಿ ಒದಗಿಸಬೇಕು. ನ್ಯಾಯಬದ್ಧವಾಗಿ ‘ಸಿ’ ಪ್ರವರ್ಗವನ್ನೇ ಮೊದಲ ಗುಂಪನ್ನಾಗಿ ಘೋಷಿಸಬೇಕು. ನೇಮಕಾತಿ ರೋಸ್ಟರ್ ಬಿಂದುವಿನಲ್ಲಿ ಈ ಸಮುದಾಯಗಳಿಗೆ ಅನ್ಯಾಯವಾಗಬಾರದು’ ಎಂದು ಒತ್ತಾಯಿಸಿದೆ.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಈ ವಿಷಯವನ್ನು ಮನವರಿಕೆ ಮಾಡಿಕೊಡಲಾಗುವುದು. ಇಲ್ಲದಿದ್ದಲ್ಲಿ ಕಾನೂನು ಹೋರಾಟ ನಡೆಸಲಾಗುವುದು’ ಎಂದು ತಿಳಿಸಿದೆ.</p>.<p>ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವ ನಾಯ್ಕ, ಕರ್ನಾಟಕ ಕೊರಚ ಮಹಾಸಭಾದ ಅಧ್ಯಕ್ಷ ಆದರ್ಶ ಯಲ್ಲಪ್ಪ, ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಕಾರ್ಯಾಧ್ಯಕ್ಷ ರಾಘವೇಂದ್ರ ನಾಯ್ಕ, ಮಾಜಿ ಶಾಸಕ ಭೀಮಾನಾಯ್ಕ್ ಸೇರಿ ಹಲವು ಸಮುದಾಯಗಳ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-44-1212056249</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿಗಾಗಿ ಮಾಡಿರುವ ವರ್ಗೀಕರಣದಿಂದ ಬಂಜಾರ, ಭೋವಿ, ಕೊರಚ, ಕೊರಮ ಸೇರಿ ಹಲವು ಸೂಕ್ಷ್ಮ ಸಮುದಾಯಗಳಿಗೆ ಅನ್ಯಾಯವಾಗಿದೆ. ಇದನ್ನು ಕೂಡಲೇ ಸರಿಪಡಿಸಬೇಕು’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಒತ್ತಾಯಿಸಿದ್ದಾರೆ.</p>.<p>ಬಂಜಾರ, ಭೋವಿ, ಕೊರಚ, ಕೊರಮ ಸೇರಿ ಹಲವು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಹಲವು ಸಮುದಾಯಗಳ ಮುಖಂಡರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮತ್ತು ಸರ್ದಾರ್ ಸೇವಾಲಾಲ್ ಸ್ವಾಮೀಜಿ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಸಿದರು.</p>.<p>‘ಇದೇ 24ರಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಲಾಗಿದೆ. ಯಾರನ್ನೋ ಓಲೈಸುವ ಸಲುವಾಗಿ ಸೂಕ್ಷ್ಮ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ. ಇದನ್ನು ನಾವು ವಿರೋಧಿಸುತ್ತೇವೆ’ ಎಂದು ಸಭೆಯ ನಂತರ ಅವರು ತಿಳಿಸಿದ್ದಾರೆ.</p>.<p>ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಒಕ್ಕೂಟವು, ‘ಒಂದೇ ಸ್ವರೂಪದ ಜಾತಿ ಸಮುದಾಯಗಳನ್ನು, ಒಂದೇ ಪ್ರವರ್ಗಕ್ಕೆ ಸೇರಿಸಬೇಕಿತ್ತು. ಆದರೆ ‘ಸಿ’ ಪ್ರವರ್ಗದಲ್ಲಿ ಎಡಗೈ ಸಮುದಾಯದ ಒಂಬತ್ತು ಜಾತಿಗಳು ಮತ್ತು ಬಲಗೈ ಸಮುದಾಯದ 16 ಜಾತಿಗಳನ್ನೂ ಸೇರಿಸಲಾಗಿದೆ. ಈ ಪ್ರಮಾದವನ್ನು ಸರಿಪಡಿಸಬೇಕು. ಅತಿ ಹಿಂದುಳಿದಿರುವ 64 ಜಾತಿಗಳು ಇರುವ ಪ್ರವರ್ಗ ‘ಸಿ’ಗೆ ಶೇ 5ರಷ್ಟು ಒಳಮೀಸಲಾತಿ ಒದಗಿಸಬೇಕು. ನ್ಯಾಯಬದ್ಧವಾಗಿ ‘ಸಿ’ ಪ್ರವರ್ಗವನ್ನೇ ಮೊದಲ ಗುಂಪನ್ನಾಗಿ ಘೋಷಿಸಬೇಕು. ನೇಮಕಾತಿ ರೋಸ್ಟರ್ ಬಿಂದುವಿನಲ್ಲಿ ಈ ಸಮುದಾಯಗಳಿಗೆ ಅನ್ಯಾಯವಾಗಬಾರದು’ ಎಂದು ಒತ್ತಾಯಿಸಿದೆ.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಈ ವಿಷಯವನ್ನು ಮನವರಿಕೆ ಮಾಡಿಕೊಡಲಾಗುವುದು. ಇಲ್ಲದಿದ್ದಲ್ಲಿ ಕಾನೂನು ಹೋರಾಟ ನಡೆಸಲಾಗುವುದು’ ಎಂದು ತಿಳಿಸಿದೆ.</p>.<p>ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವ ನಾಯ್ಕ, ಕರ್ನಾಟಕ ಕೊರಚ ಮಹಾಸಭಾದ ಅಧ್ಯಕ್ಷ ಆದರ್ಶ ಯಲ್ಲಪ್ಪ, ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಕಾರ್ಯಾಧ್ಯಕ್ಷ ರಾಘವೇಂದ್ರ ನಾಯ್ಕ, ಮಾಜಿ ಶಾಸಕ ಭೀಮಾನಾಯ್ಕ್ ಸೇರಿ ಹಲವು ಸಮುದಾಯಗಳ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-44-1212056249</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>