<p><strong>ಬೆಂಗಳೂರು</strong>: ‘ಬೆಂಗಳೂರು ಕೌಶಲ ಶೃಂಗಸಭೆ 2025’ ಅನ್ನು ನವೆಂಬರ್ 4 ರಿಂದ 6 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ್ ಪಾಟೀಲ ತಿಳಿಸಿದರು.</p>.<p>ಇದೇ ಮೊದಲ ಬಾರಿಗೆ ಈ ಶೃಂಗಸಭೆ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಈ ಶೃಂಗಸಭೆಯ ಮೂಲಕ ಯುವ ಸಮುದಾಯಕ್ಕೆ ಮುಖ್ಯವಾಗಿ ಮಹಿಳೆಯರು, ಗ್ರಾಮೀಣ ಸಮುದಾಯಗಳು ಮತ್ತು ಅಂಗವಿಕಲರಿಗೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗಿದೆ. ಕೌಶಲದ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ನಮ್ಮ ಸರ್ಕಾರ ಅವಕಾಶಗಳ ಬೃಹತ್ ವೇದಿಕೆ ಒದಗಿಸುತ್ತಿದೆ’ ಎಂದು ಪಾಟೀಲ ವಿವರಿಸಿದರು.</p>.<p>ಕೈಗಾರಿಕೆ, ಶೈಕ್ಷಣಿಕ, ತರಬೇತಿ ಮತ್ತು ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಯುವ ಸಮೂಹವನ್ನು ಬೆಳೆಸಲು ಹಾಗೂ ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಶೃಂಗಸಭೆ ಹೊಂದಿದೆ ಎಂದರು.</p>.<p>ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಜಂಟಿ ಸಹಯೋಗದೊಂದಿಗೆ ಶೃಂಗಸಭೆಯನ್ನು ಆಯೋಜಿಸಲಾಗುವುದು ಎಂದು ಶರಣಪ್ರಕಾಶ್ ಪಾಟೀಲ ಹೇಳಿದರು.</p>.<p>‘ಮುಂಬರುವ ದಿನಗಳಲ್ಲಿ ಕೌಶಲ ನೀತಿ ರೂಪಿಸಲಾಗುತ್ತದೆ. ಕರ್ನಾಟಕದಲ್ಲಿ ಮಾನವ ಸಂಪನ್ಮೂಲ ಅಗಾಧವಾಗಿದೆ. ಅದಕ್ಕೆ ಸ್ಪಷ್ಟ ರೂಪ, ಕೌಶಲ ತರಬೇತಿ ನೀಡಿದರೆ ನಮ್ಮ ರಾಜ್ಯ ಮತ್ತು ನಮ್ಮ ರಾಜಧಾನಿ ಅತ್ಯಂತ ವೇಗವಾಗಿ ಬೆಳೆಯುವ ವಿಶ್ವಾಸವಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬೆಂಗಳೂರು ಕೌಶಲ ಶೃಂಗಸಭೆ 2025’ ಅನ್ನು ನವೆಂಬರ್ 4 ರಿಂದ 6 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ್ ಪಾಟೀಲ ತಿಳಿಸಿದರು.</p>.<p>ಇದೇ ಮೊದಲ ಬಾರಿಗೆ ಈ ಶೃಂಗಸಭೆ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಈ ಶೃಂಗಸಭೆಯ ಮೂಲಕ ಯುವ ಸಮುದಾಯಕ್ಕೆ ಮುಖ್ಯವಾಗಿ ಮಹಿಳೆಯರು, ಗ್ರಾಮೀಣ ಸಮುದಾಯಗಳು ಮತ್ತು ಅಂಗವಿಕಲರಿಗೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗಿದೆ. ಕೌಶಲದ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ನಮ್ಮ ಸರ್ಕಾರ ಅವಕಾಶಗಳ ಬೃಹತ್ ವೇದಿಕೆ ಒದಗಿಸುತ್ತಿದೆ’ ಎಂದು ಪಾಟೀಲ ವಿವರಿಸಿದರು.</p>.<p>ಕೈಗಾರಿಕೆ, ಶೈಕ್ಷಣಿಕ, ತರಬೇತಿ ಮತ್ತು ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಯುವ ಸಮೂಹವನ್ನು ಬೆಳೆಸಲು ಹಾಗೂ ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಶೃಂಗಸಭೆ ಹೊಂದಿದೆ ಎಂದರು.</p>.<p>ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಜಂಟಿ ಸಹಯೋಗದೊಂದಿಗೆ ಶೃಂಗಸಭೆಯನ್ನು ಆಯೋಜಿಸಲಾಗುವುದು ಎಂದು ಶರಣಪ್ರಕಾಶ್ ಪಾಟೀಲ ಹೇಳಿದರು.</p>.<p>‘ಮುಂಬರುವ ದಿನಗಳಲ್ಲಿ ಕೌಶಲ ನೀತಿ ರೂಪಿಸಲಾಗುತ್ತದೆ. ಕರ್ನಾಟಕದಲ್ಲಿ ಮಾನವ ಸಂಪನ್ಮೂಲ ಅಗಾಧವಾಗಿದೆ. ಅದಕ್ಕೆ ಸ್ಪಷ್ಟ ರೂಪ, ಕೌಶಲ ತರಬೇತಿ ನೀಡಿದರೆ ನಮ್ಮ ರಾಜ್ಯ ಮತ್ತು ನಮ್ಮ ರಾಜಧಾನಿ ಅತ್ಯಂತ ವೇಗವಾಗಿ ಬೆಳೆಯುವ ವಿಶ್ವಾಸವಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>