ಭಾನುವಾರ, 3 ಆಗಸ್ಟ್ 2025
×
ADVERTISEMENT
ADVERTISEMENT

Bengaluru Stampede | ದುರಂತಕ್ಕೆ ಸರ್ಕಾರವೇ ಹೊಣೆ: ಟೀಕೆಗಳ ಸುರಿಮಳೆ

Published : 4 ಜೂನ್ 2025, 23:30 IST
Last Updated : 4 ಜೂನ್ 2025, 23:30 IST
ಫಾಲೋ ಮಾಡಿ
Comments
ಸಂಭ್ರಮದ ವೇಳೆ ನಡೆದ ಸಾವಿನ ಘಟನೆ ದಿಗ್ಭ್ರಮೆ ಮೂಡಿಸಿದೆ. ಬೇಜವಾಬ್ದಾರಿ ಸರ್ಕಾರದಿಂದ ಸಂಭ್ರಮೋತ್ಸವಕ್ಕೆ ಸೂತಕದ ಛಾಯೆ ಆವರಿಸಿದೆ.
–ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ
ಆಟಗಾರರ ಅಭಿನಂದನಾ ಸಮಾರಂಭ, ತೆರೆದ ವಾಹನದ ಮೆರವಣಿಗೆ ಪೂರ್ವ ನಿರ್ಧರಿತವಾಗಿದ್ದರೂ, ಸರ್ಕಾರ ಸಂಪೂರ್ಣ ವಿಫಲವಾಗಿದೆ.
–ವಿ. ಸೋಮಣ್ಣ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ
ಸಂಭ್ರಮಾಚರಣೆ ಮೊದಲೇ ಆಯೋಜನೆ ಆಗಿತ್ತು. ಆದರೂ ಭದ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಇದು ನಿರ್ಲಕ್ಷ್ಯಕ್ಕೆ ಸಾಕ್ಷಿ, ಅಭಿಮಾನಿಗಳ ಸಾವಿಗೆ ಸರ್ಕಾರವೇ ಹೊಣೆ.
–ಶೋಭಾ ಕರಂದ್ಲಾಜೆ, ಕೇಂದ್ರ ಸಚಿವೆ
ಸಮಾರಂಭವನ್ನು ಸರ್ಕಾರವು ಪೂರ್ವಸಿದ್ಧತೆ, ಭದ್ರತೆ ಜೊತೆ ಆಯೋಜಿಸಬಹುದಿತ್ತು. ಅಸಮರ್ಥ ಆಡಳಿತದಿಂದ ಅಮಾಯಕರು ಸಾವನ್ನಪ್ಪಿದ್ದಾರೆ.
–ಅರವಿಂದ ಬೆಲ್ಲದ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ
ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ನೈತಿಕ ಹೊಣೆ ಹೊರಬೇಕು. ಮೃತರ ಕುಟುಂಬದವರಿಗೆ ಸರ್ಕಾರ ₹25 ಲಕ್ಷ ಪರಿಹಾರ ನೀಡಬೇಕು.
–ಮಹೇಶ ಟೆಂಗಿನಕಾಯಿ, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT