ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

Bengaluru stampede | RCB ಅಭಿಮಾನಿಗಳ ಸಾವಿಗೆ ಸಿದ್ದರಾಮಯ್ಯ ಕಾರಣ: ಎಚ್‌ಡಿಕೆ

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹ ಸಚಿವ ರಾಜೀನಾಮೆಗೆ ವಿಪಕ್ಷಗಳ ಆಗ್ರಹ
Published : 6 ಜೂನ್ 2025, 16:02 IST
Last Updated : 6 ಜೂನ್ 2025, 16:02 IST
ಫಾಲೋ ಮಾಡಿ
Comments
ಸಿದ್ದರಾಮಯ್ಯ, ಶಿವಕುಮಾರ್, ಪರಮೇಶ್ವರ ನಿಜವಾದ ಆರೋಪಿಗಳು. ಈ ಮೂವರನ್ನು ಕ್ರಮವಾಗಿ ಎ1, ಎ2, ಎ3 ಆಗಿಸಿ ಎಫ್‌ಐಆರ್‌ ದಾಖಲಿಸಬೇಕು.
-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ಮ್ಯಾಜಿಸ್ಟೀರಿಯಲ್‌ ತನಿಖೆಗೆ ಆದೇಶ. ಆಮೇಲೆ ಕುನ್ಹಾ ರಿಂದ ಮತ್ತು ಸಿಐಡಿಯಿಂದಲೂ ತನಿಖೆಯಂತೆ. ಯಾವುದೂ ಬೇಡ. ಸುಪ್ರಿಂ ಕೋರ್ಟ್‌ ಸಿಜೆಐ ಅವರಿಂದ ತನಿಖೆಯಾಗಬೇಕು.
-ಆರ್‌.ಅಶೋಕ, ವಿಧಾನಸಭೆಯ ವಿರೋಧ ಪಕ್ಷದ ನಾಯಕ
ಪಹಲ್ಗಾಮ್ ಘಟನೆಯಲ್ಲೂ ಅಮಾಯಕರು ಸತ್ತಿರಲಿಲ್ಲವೆ? ಅದೂ ಕೇಂದ್ರ ಸರ್ಕಾರದ ವೈಫಲ್ಯವಲ್ಲವೆ? ಪ್ರಧಾನಿ ನರೇಂದ್ರ ಮೋದಿ ಅವರಿಂದ ಯಾಕೆ ರಾಜೀನಾಮೆ ಕೇಳಲಿಲ್ಲ? ದುರಂತದಲ್ಲೂ ರಾಜಕೀಯ ಮಾಡುವುದು ಬಿಜೆಪಿಯ ಕೆಟ್ಟ ಚಾಳಿ. ಕಾಲ್ತುಳಿತದ ದುರಂತವನ್ನು ಪಹಲ್ಗಾಮ್ ಘಟನೆಗೆ ಹೋಲಿಸಲಾರೆ. ‘ಆಪರೇಷನ್ ಸಿಂಧೂರ’ ಯಾಕೆ ನಿಲ್ಲಿಸಿದರು ಎಂಬ ಪ್ರಶ್ನೆಗೆ ಬಿಜೆಪಿಯವರು ಇಲ್ಲಿಯವರೆಗೆ ಉತ್ತರ ಕೊಟ್ಟಿದ್ದಾರಾ?
–ಮಧು ಬಂಗಾರಪ್ಪ, ಶಿಕ್ಷಣ ಸಚಿವ
ರಾಜ್ಯದಲ್ಲಿ ಏನೇ ಆದರೂ ಅದಕ್ಕೆ ಡಿ.ಕೆ. ಶಿವಕುಮಾರ್ ಮಾತ್ರ ಕಾರಣ. ವಿರೋಧ ಪಕ್ಷದವರಿಗೆ ಅವರನ್ನು ಟಾರ್ಗೆಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ. ಎಚ್.ಡಿ. ಕುಮಾರಸ್ವಾಮಿ ಡ್ರಾಮಾ ಮಾಸ್ಟರ್. ಯಾವ ಸಂದರ್ಭದಲ್ಲಿ ಯಾವ ಡ್ರಾಮಾ ಮಾಡಬೇಕು, ವಿಷಯಗಳನ್ನು ಯಾವ ರೀತಿ ತಿರುಚಬೇಕು ಎನ್ನುವುದು ಅವರಿಗೆ ಚೆನ್ನಾಗಿ ಗೊತ್ತಿದೆ. ನಟ ರಾ.ರಾಜಕುಮಾರ್ ನಿಧನರಾದಾಗಲೂ ಅವಘಡ ಸಂಭವಿಸಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಎಚ್‌ಡಿಕೆ ರಾಜೀನಾಮೆ ಕೊಟ್ಟಿದ್ರಾ?
–ಡಿ.ಕೆ. ಸುರೇಶ್‌, ಮಾಜಿ ಸಂಸದ
ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿಲ್ಲ. ಆದರೆ, ಅನುಮತಿ ಇಲ್ಲದೆ ಕಾರ್ಯಕ್ರಮಕ್ಕೆ ಅವಕಾಶ ನೀಡಿರುವುದಕ್ಕೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರವೇ ನೇರ ಹೊಣೆ ಅಲ್ಲ. ಉತ್ತರ ಪ್ರದೇಶದಲ್ಲಿ ನಡೆದ ಕುಂಭಮೇಳದ ಕಾಲ್ತುಳಿತದಲ್ಲಿ ಪ್ರವಾಸಿಗರು ಸತ್ತರು. ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರು, ಸೈನಿಕರೂ ಸತ್ತರು. ಅದಕ್ಕೆಲ್ಲ ಕೇಂದ್ರ ಸರ್ಕಾರವೇ ಹೊಣೆಯೇ?
–ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ
ಕಾಲ್ತುಳಿತ ದುರ್ಘಟನೆಗೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಅವರ ಅಮಾನತು ನಿರ್ಧಾರವನ್ನು ಯಾವ ಆಧಾರದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ತಿಳಿದಿಲ್ಲ. ಅವರು ಉತ್ತಮ ಅಧಿಕಾರಿ, ಭ್ರಷ್ಟಾಚಾರ ವಿರೋಧಿ.
–ಬಿ.ಕೆ ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ
ಘಟನೆ ಗೊತ್ತಾದ ತಕ್ಷಣ ಸಿದ್ದರಾಮಯ್ಯ ಆಸ್ಪತ್ರೆಗೆ ಹೋದರು. ಡಿ.ಕೆ.ಶಿವಕುಮಾರ್‌ ನೆರವಿಗೆ ಧಾವಿಸಿದರು. ಶಿವಕುಮಾರ್ ಅವರು ಭಾವುಕರಾಗಿ ಕಣ್ಣೀರು ಹಾಕಿದ್ದನ್ನೂ ಗೇಲಿ ಮಾಡುವ ಬಿಜೆಪಿಯವರ ನಡೆ ನಾಚಿಕೆಗೇಡು. ​ಈ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು.
ಎಚ್‌.ಕೆ.ಪಾಟೀಲ, ಪ್ರವಾಸೋದ್ಯಮ ಸಚಿವ
ಮೃತಪಟ್ಟ ಆರ್‌ಸಿಬಿ ಅಭಿಮಾನಿಗಳ ಕುಟುಂಬಗಳಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮತ್ತು ಆರ್‌ಸಿಬಿ ತಂಡದ ಆಡಳಿತ ಮಂಡಳಿ ತಲಾ ₹1 ಕೋಟಿ ಪರಿಹಾರ ನೀಡಬೇಕು.
–ಲಕ್ಷ್ಮೀ ಹೆಬ್ಬಾಳಕರ, ಸಚಿವೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಆರ್‌ಸಿಬಿ ಆಟಗಾರರೊಂದಿಗೆ ಫೋಟೊ ತೆಗೆಸಿಕೊಂಡರೆ, ವಿಜಯದಲ್ಲಿ ತಮ್ಮ ಪಾಲು ಸಿಗುತ್ತದೆಂಬ ಜನಪ್ರಿಯತೆಯ ಭ್ರಮೆಯೇ ಕಾಲ್ತುಳಿತದ ಅನಾಹುತಕ್ಕೆ ಕಾರಣ.ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು
–ಪ್ರಲ್ಹಾದ ಜೋಶಿ, ಕೇಂದ್ರ ಸಚಿವ
ಆರ್‌ಸಿಬಿ ಕ್ರಿಕೆಟ್ ತಂಡದ ಸಂಭ್ರಮಾಚರಣೆ ವೇಳೆ ನಡೆದ ದುರಂತಕ್ಕೆ ಮುಖ್ಯಮಂತ್ರಿ ಮತ್ತು ಸಚಿವರ ಸೆಲ್ಫಿ–ರೀಲ್ಸ್ ಹುಚ್ಚು ಅಲ್ಲದೇ ಸರ್ಕಾರದ ವೈಫಲ್ಯವೂ ಕಾರಣ. ಪ್ರಚಾರಪ್ರಿಯತೆ ಮತ್ತು ನಿರ್ಲಕ್ಷ್ಯದಿಂದ ಅವಘಡ ನಡೆದಿದೆ.
–ಬಿ. ಶ್ರೀರಾಮುಲು, ಮಾಜಿ ಸಚಿವ
ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ದುರಂತಕ್ಕೆ ಸಿಎಂ, ಡಿಸಿಎಂ, ಗೃಹ ಸಚಿವರ ಬೇಜವಾಬ್ದಾರಿ ಕಾರಣ. ತಮ್ಮ ತಪ್ಪು ಮುಚ್ಚಿಕೊಳ್ಳಲು ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
–ಬಿ.ಎಲ್.ಸಂತೋಷ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT