<p><strong>ಬಳ್ಳಾರಿ:</strong> ‘ಚಿನ್ನಸ್ವಾಮಿ ಕ್ರಿಕೆಟ್ ಮೈದಾನದ ಬಳಿ ನಡೆದ ದುರಂತಕ್ಕೆ ಡಿ.ಕೆ ಶಿವಕುಮಾರ್ ಅವರ ಬಾಲಿಶ ನಡವಳಿಕೆ, ಮುಖ್ಯಮಂತ್ರಿ ಮತ್ತು ಸಚಿವರ ಸೆಲ್ಫಿ–ರೀಲ್ಸ್ ಹುಚ್ಚು, ಸರ್ಕಾರದ ವೈಫಲ್ಯವೇ ಕಾರಣ’ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ. </p><p>ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ ಸಿಎಂ, ಸಚಿವರೆಲ್ಲರೂ ವರ್ಕ್ಫ್ರಂ ಹೋಂ ಮಾಡುತ್ತಿದ್ದಾರೆ. ಅವರ ನಿರ್ಲಕ್ಷ್ಯ, ಪ್ರಚಾರಪ್ರಿಯತೆಯೇ ಘಟನೆಗೆ ಕಾರಣ. ಸಿಎಂ ಸಿದ್ದರಾಮಯ್ಯ ಅವರನ್ನು ಎ–1 ಆರೋಪಿ ಮಾಡಬೇಕು. ಡಿಸಿಎಂ ಡಿ.ಕೆ ಶಿಕುಮಾರ್ ಎ–2, ಗೃಹ ಸಚಿವ ಪರಮೇಶ್ವರ ಅವರನ್ನು ಎ–3 ಆರೋಪಿಯನ್ನಾಗಿ ಮಾಡಿ, ಎಫ್ಐಆರ್ ದಾಖಲಿಸಬೇಕು. ಈ ಕೂಡಲೇ ಬಂಧಿಸಬೇಕು’ ಎಂದು ಒತ್ತಾಯಿಸಿದರು. </p><p>‘ಘಟನೆಯನ್ನು ನ್ಯಾಯಾಧೀಶರಿಂದ ತನಿಖೆ ಮಾಡಿಸುವುದಾಗಿ, ಸಿಐಡಿಗೆ ವಹಿಸುವುದಾಗಿ ಸಿಎಂ ಹೇಳಿದ್ದಾರೆ. ಈ ತನಿಖೆಗಳಿಂದ ಸತ್ಯಾಂಶ ಹೊರಬರಲು ಸಾಧ್ಯವೇ? ಘಟನೆಯನ್ನು ಸಿಬಿಐ ಮೂಲಕ ತನಿಖೆ ಮಾಡಿಸಬೇಕು’ ಎಂದರು. </p><p>‘ಆಟಗಾರರ ಸನ್ಮಾನ ಕಾರ್ಯಕ್ರಮದಲ್ಲಿ ಸರ್ಕಾರ ರಾಜ್ಯಪಾಲರನ್ನು ಅಪಮಾನಿಸಿದೆ. ಸಾಂವಿಧಾನಿಕ ಹುದ್ದೆಯಲ್ಲಿರುವವರನ್ನು ಅನಗತ್ಯವಾಗಿ 20 ನಿಮಿಷ ಕಾಯಿಸಿ ಅಪಚಾರ ಮಾಡಲಾಗಿದೆ. ಇತಿಹಾಸದಲ್ಲೇ ಹೀಗೆ ಆಗಿಲ್ಲ’ ಎಂದು ಆಕ್ರೋಶಗೊಂಡರು. </p><p>‘ಸಿಎಂ, ಸಚಿವರು, ಶಾಸಕರು, ಅಧಿಕಾರಿಗಳ ಮಕ್ಕಳ ಸೆಲ್ಫಿಗಾಗಿ ವಿಶೇಷ ವಿಮಾನದಲ್ಲಿ ಆಟಗಾರರನ್ನು ಕರೆಸಿಕೊಂಡ ಸರ್ಕಾರ 11 ಮಂದಿಯ ದುರಂತ ಸಾವಿಗೆ ಕಾರಣವಾಗಿದೆ. ಈ ಪಾಪದ ಹೊಣೆ ಹೊತ್ತು ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಬೇಕು. ಈ ಬಗ್ಗೆ ಚರ್ಚಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಬೇಕು. ಮೃತರ ಕುಟುಂಬಕ್ಕೆ ಕನಿಷ್ಠ ₹1 ಕೋಟಿ ಪರಿಹಾರ ಕೊಡಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ‘ಚಿನ್ನಸ್ವಾಮಿ ಕ್ರಿಕೆಟ್ ಮೈದಾನದ ಬಳಿ ನಡೆದ ದುರಂತಕ್ಕೆ ಡಿ.ಕೆ ಶಿವಕುಮಾರ್ ಅವರ ಬಾಲಿಶ ನಡವಳಿಕೆ, ಮುಖ್ಯಮಂತ್ರಿ ಮತ್ತು ಸಚಿವರ ಸೆಲ್ಫಿ–ರೀಲ್ಸ್ ಹುಚ್ಚು, ಸರ್ಕಾರದ ವೈಫಲ್ಯವೇ ಕಾರಣ’ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ. </p><p>ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ ಸಿಎಂ, ಸಚಿವರೆಲ್ಲರೂ ವರ್ಕ್ಫ್ರಂ ಹೋಂ ಮಾಡುತ್ತಿದ್ದಾರೆ. ಅವರ ನಿರ್ಲಕ್ಷ್ಯ, ಪ್ರಚಾರಪ್ರಿಯತೆಯೇ ಘಟನೆಗೆ ಕಾರಣ. ಸಿಎಂ ಸಿದ್ದರಾಮಯ್ಯ ಅವರನ್ನು ಎ–1 ಆರೋಪಿ ಮಾಡಬೇಕು. ಡಿಸಿಎಂ ಡಿ.ಕೆ ಶಿಕುಮಾರ್ ಎ–2, ಗೃಹ ಸಚಿವ ಪರಮೇಶ್ವರ ಅವರನ್ನು ಎ–3 ಆರೋಪಿಯನ್ನಾಗಿ ಮಾಡಿ, ಎಫ್ಐಆರ್ ದಾಖಲಿಸಬೇಕು. ಈ ಕೂಡಲೇ ಬಂಧಿಸಬೇಕು’ ಎಂದು ಒತ್ತಾಯಿಸಿದರು. </p><p>‘ಘಟನೆಯನ್ನು ನ್ಯಾಯಾಧೀಶರಿಂದ ತನಿಖೆ ಮಾಡಿಸುವುದಾಗಿ, ಸಿಐಡಿಗೆ ವಹಿಸುವುದಾಗಿ ಸಿಎಂ ಹೇಳಿದ್ದಾರೆ. ಈ ತನಿಖೆಗಳಿಂದ ಸತ್ಯಾಂಶ ಹೊರಬರಲು ಸಾಧ್ಯವೇ? ಘಟನೆಯನ್ನು ಸಿಬಿಐ ಮೂಲಕ ತನಿಖೆ ಮಾಡಿಸಬೇಕು’ ಎಂದರು. </p><p>‘ಆಟಗಾರರ ಸನ್ಮಾನ ಕಾರ್ಯಕ್ರಮದಲ್ಲಿ ಸರ್ಕಾರ ರಾಜ್ಯಪಾಲರನ್ನು ಅಪಮಾನಿಸಿದೆ. ಸಾಂವಿಧಾನಿಕ ಹುದ್ದೆಯಲ್ಲಿರುವವರನ್ನು ಅನಗತ್ಯವಾಗಿ 20 ನಿಮಿಷ ಕಾಯಿಸಿ ಅಪಚಾರ ಮಾಡಲಾಗಿದೆ. ಇತಿಹಾಸದಲ್ಲೇ ಹೀಗೆ ಆಗಿಲ್ಲ’ ಎಂದು ಆಕ್ರೋಶಗೊಂಡರು. </p><p>‘ಸಿಎಂ, ಸಚಿವರು, ಶಾಸಕರು, ಅಧಿಕಾರಿಗಳ ಮಕ್ಕಳ ಸೆಲ್ಫಿಗಾಗಿ ವಿಶೇಷ ವಿಮಾನದಲ್ಲಿ ಆಟಗಾರರನ್ನು ಕರೆಸಿಕೊಂಡ ಸರ್ಕಾರ 11 ಮಂದಿಯ ದುರಂತ ಸಾವಿಗೆ ಕಾರಣವಾಗಿದೆ. ಈ ಪಾಪದ ಹೊಣೆ ಹೊತ್ತು ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಬೇಕು. ಈ ಬಗ್ಗೆ ಚರ್ಚಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಬೇಕು. ಮೃತರ ಕುಟುಂಬಕ್ಕೆ ಕನಿಷ್ಠ ₹1 ಕೋಟಿ ಪರಿಹಾರ ಕೊಡಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>