<p><strong>ಬೆಂಗಳೂರು:</strong> ‘28ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆ ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಇದೇ 18ರಿಂದ ಮೂರು ದಿನ ನಡೆಯಲಿದೆ’ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಈ ಶೃಂಗಸಭೆಯಲ್ಲಿ 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ತಂತ್ರಜ್ಞಾನ ಮತ್ತು ಉದ್ಯಮವನ್ನು ಒಂದೇ ವೇದಿಕೆಗೆ ತರುವ ಜಾಗತಿಕ ಕಾರ್ಯಕ್ರಮ ಇದಾಗಿದ್ದು, ಈ ಬಾರಿ ಕ್ವಾಂಟಮ್ ಕಂಪ್ಯೂಟಿಂಗ್, ಎಐ, ಸ್ಪೇಸ್ಟೆಕ್, ಹೆಲ್ತ್ ಟೆಕ್ಗೆ ವಿಶೇಷ ಗಮನ ನೀಡಲಾಗುವುದು’ ಎಂದರು.</p>.<p>‘20ರಂದು ಫ್ಯೂಚರ್ ಮೇಕರ್ಸ್ ಕಾನ್ಕ್ಲೇವ್ ನಡೆಯಲಿದ್ದು, 10 ಸಾವಿರಕ್ಕೂ ಹೆಚ್ಚಿನ ಉದ್ಯಮಿಗಳು, ಹೂಡಿಕೆದಾರರು, ಸ್ಟಾರ್ಟ್ ಅಪ್ ಸಂಸ್ಥಾಪಕರು ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆವಿಷ್ಕಾರ ಮಾಡಿರುವವರು ಪಾಲ್ಗೊಳ್ಳಲಿದ್ದಾರೆ’ ಎಂದು ವಿವರಿಸಿದರು.</p>.<p><strong>ಹೊಸ ನೀತಿ:</strong> ‘ಸ್ಟಾರ್ಟ್ ಅಪ್ ಐಟಿ ಸ್ಪೇಸ್ ಟೆಕ್ಗೆ ಹೊಸ ನೀತಿ ತರಲು ನಿರ್ಧರಿಸಲಾಗಿದೆ. ಒಟ್ಟಾರೆ, ಈ ಬಾರಿ ನೀತಿಗಳನ್ನು ಜಾಗತಿಕ ದೃಷ್ಟಿಕೋನದಲ್ಲೇ ರೂಪಿಸಲಾಗಿದೆ. ಮಾಹಿತಿ ತಂತ್ರಜ್ಞಾನ, ಸ್ಟಾರ್ಟ್ ಅಪ್, ಸ್ಪೇಸ್ ಟೆಕ್ನಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಈ ನೀತಿಯ ಮೂಲಕ ಕರ್ನಾಟಕದಲ್ಲಿರುವ ಇನ್ನಷ್ಟು ಅವಕಾಶಗಳ ಅರಿವು ಮೂಡಿಸಲು ಪ್ರಯತ್ನಿಸಲಾಗುವುದು’ ಎಂದರು.</p>.<p><strong>₹600 ಕೋಟಿ ಹೂಡಿಕೆ:</strong> ‘ಕರ್ನಾಟಕವನ್ನು ಭಾರತದ ಡೀಪ್ ಟೆಕ್ ರಾಜಧಾನಿಯಾಗಿ ರೂಪಿಸುವ ಉದ್ದೇಶದಿಂದ ಸರ್ಕಾರ ₹ 600 ಕೋಟಿ ಹೂಡಿಕೆಗೆ ಬದ್ಧವಾಗಿದೆ. ಇದರಲ್ಲಿ ಎಐ, ಕ್ವಾಂಟಮ್ ಕಂಪ್ಯೂಟಿಂಗ್, ರೋಬೋಟಿಕ್ಸ್ ಹಾಗೂ ಸುಸ್ಥಿರತೆ ಆಧಾರಿತ ಆವಿಷ್ಕಾರಗಳಿಗೂ ಪ್ರೋತ್ಸಾಹ ನೀಡಲಾಗುವುದು’ ಎಂದೂ ಅವರು ತಿಳಿಸಿದರು.</p>.<p>ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ, ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಸಂಕನೂರ್ ಇದ್ದರು.</p>.<p><strong>ಶೃಂಗಸಭೆಯ ವಿಶೇಷತೆ</strong> </p><p>* ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅವಕಾಶಗಳ ಹುಡುಕಾಟಕ್ಕೆ ಅವಕಾಶ. ಕೌಶಲಯುತ ಮಾನವ ಸಂಪನ್ಮೂಲ ಶಕ್ತಿಯ ಅನಾವರಣ </p><p>* ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೂಡಿಕೆದಾರರು ಮತ್ತು ನವೋದ್ಯಮಗಳಿಗೆ ಸೇತುವೆಯಾಗಿ ವೇದಿಕೆ </p><p>* ಬೆಂಗಳೂರು ಬಿಟ್ಟು ಇತರ ನಗರಗಳಲ್ಲಿ ಹೊಸದಾಗಿ ರಚಿಸುವ ಕ್ಲಸ್ಟರ್ಗಳಲ್ಲಿ ಅವಕಾಶಗಳನ್ನು ಕಲ್ಪಿಸುವ ಮೂಲಕ ಉದ್ಯೋಗ ಸೃಷ್ಟಿಗೆ ಪ್ರೋತ್ಸಾಹ </p><p>* ಮುಂದಿನ ಐದು ವರ್ಷಗಳಲ್ಲಿ 50 ಲಕ್ಷಕ್ಕಿಂತ ಹೆಚ್ಚಿನ ಉದ್ಯೋಗ ಸೃಷ್ಟಿಯ ಗುರಿ </p><p>* ನೆರೆ ರಾಜ್ಯಗಳು ವಿವಿಧ ವಿನಾಯಿತಿ ನೀಡಿ ಹೂಡಿಕೆದಾರರನ್ನು ಸೆಳೆಯುತ್ತಿರುವುದರಿಂದ ಪೈಪೋಟಿ ನೀಡಲು ಮುಕ್ತ ಅವಕಾಶ ಕಲ್ಪಿಸುವುದು </p><p>* ನವೋದ್ಯಮಗಳಿಗೆ ಆರ್ಥಿಕ ನೆರವು ವಿನಾಯಿತಿಗಳು ಪ್ಲಗ್ ಎಂಡ್ ಪ್ಲೇನಂಥ ಸೌಲಭ್ಯಗಳನ್ನು ಪ್ರಕಟಿಸುವುದು. ಆ ಮೂಲಕ ಈ ಕ್ಷೇತ್ರದ ಬೆಳವಣಿಗೆಗೆ ಪೂರಕ ಪರಿಸರಕ್ಕೆ ಒತ್ತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘28ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆ ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಇದೇ 18ರಿಂದ ಮೂರು ದಿನ ನಡೆಯಲಿದೆ’ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಈ ಶೃಂಗಸಭೆಯಲ್ಲಿ 60 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ತಂತ್ರಜ್ಞಾನ ಮತ್ತು ಉದ್ಯಮವನ್ನು ಒಂದೇ ವೇದಿಕೆಗೆ ತರುವ ಜಾಗತಿಕ ಕಾರ್ಯಕ್ರಮ ಇದಾಗಿದ್ದು, ಈ ಬಾರಿ ಕ್ವಾಂಟಮ್ ಕಂಪ್ಯೂಟಿಂಗ್, ಎಐ, ಸ್ಪೇಸ್ಟೆಕ್, ಹೆಲ್ತ್ ಟೆಕ್ಗೆ ವಿಶೇಷ ಗಮನ ನೀಡಲಾಗುವುದು’ ಎಂದರು.</p>.<p>‘20ರಂದು ಫ್ಯೂಚರ್ ಮೇಕರ್ಸ್ ಕಾನ್ಕ್ಲೇವ್ ನಡೆಯಲಿದ್ದು, 10 ಸಾವಿರಕ್ಕೂ ಹೆಚ್ಚಿನ ಉದ್ಯಮಿಗಳು, ಹೂಡಿಕೆದಾರರು, ಸ್ಟಾರ್ಟ್ ಅಪ್ ಸಂಸ್ಥಾಪಕರು ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆವಿಷ್ಕಾರ ಮಾಡಿರುವವರು ಪಾಲ್ಗೊಳ್ಳಲಿದ್ದಾರೆ’ ಎಂದು ವಿವರಿಸಿದರು.</p>.<p><strong>ಹೊಸ ನೀತಿ:</strong> ‘ಸ್ಟಾರ್ಟ್ ಅಪ್ ಐಟಿ ಸ್ಪೇಸ್ ಟೆಕ್ಗೆ ಹೊಸ ನೀತಿ ತರಲು ನಿರ್ಧರಿಸಲಾಗಿದೆ. ಒಟ್ಟಾರೆ, ಈ ಬಾರಿ ನೀತಿಗಳನ್ನು ಜಾಗತಿಕ ದೃಷ್ಟಿಕೋನದಲ್ಲೇ ರೂಪಿಸಲಾಗಿದೆ. ಮಾಹಿತಿ ತಂತ್ರಜ್ಞಾನ, ಸ್ಟಾರ್ಟ್ ಅಪ್, ಸ್ಪೇಸ್ ಟೆಕ್ನಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಈ ನೀತಿಯ ಮೂಲಕ ಕರ್ನಾಟಕದಲ್ಲಿರುವ ಇನ್ನಷ್ಟು ಅವಕಾಶಗಳ ಅರಿವು ಮೂಡಿಸಲು ಪ್ರಯತ್ನಿಸಲಾಗುವುದು’ ಎಂದರು.</p>.<p><strong>₹600 ಕೋಟಿ ಹೂಡಿಕೆ:</strong> ‘ಕರ್ನಾಟಕವನ್ನು ಭಾರತದ ಡೀಪ್ ಟೆಕ್ ರಾಜಧಾನಿಯಾಗಿ ರೂಪಿಸುವ ಉದ್ದೇಶದಿಂದ ಸರ್ಕಾರ ₹ 600 ಕೋಟಿ ಹೂಡಿಕೆಗೆ ಬದ್ಧವಾಗಿದೆ. ಇದರಲ್ಲಿ ಎಐ, ಕ್ವಾಂಟಮ್ ಕಂಪ್ಯೂಟಿಂಗ್, ರೋಬೋಟಿಕ್ಸ್ ಹಾಗೂ ಸುಸ್ಥಿರತೆ ಆಧಾರಿತ ಆವಿಷ್ಕಾರಗಳಿಗೂ ಪ್ರೋತ್ಸಾಹ ನೀಡಲಾಗುವುದು’ ಎಂದೂ ಅವರು ತಿಳಿಸಿದರು.</p>.<p>ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ, ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಸಂಕನೂರ್ ಇದ್ದರು.</p>.<p><strong>ಶೃಂಗಸಭೆಯ ವಿಶೇಷತೆ</strong> </p><p>* ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅವಕಾಶಗಳ ಹುಡುಕಾಟಕ್ಕೆ ಅವಕಾಶ. ಕೌಶಲಯುತ ಮಾನವ ಸಂಪನ್ಮೂಲ ಶಕ್ತಿಯ ಅನಾವರಣ </p><p>* ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೂಡಿಕೆದಾರರು ಮತ್ತು ನವೋದ್ಯಮಗಳಿಗೆ ಸೇತುವೆಯಾಗಿ ವೇದಿಕೆ </p><p>* ಬೆಂಗಳೂರು ಬಿಟ್ಟು ಇತರ ನಗರಗಳಲ್ಲಿ ಹೊಸದಾಗಿ ರಚಿಸುವ ಕ್ಲಸ್ಟರ್ಗಳಲ್ಲಿ ಅವಕಾಶಗಳನ್ನು ಕಲ್ಪಿಸುವ ಮೂಲಕ ಉದ್ಯೋಗ ಸೃಷ್ಟಿಗೆ ಪ್ರೋತ್ಸಾಹ </p><p>* ಮುಂದಿನ ಐದು ವರ್ಷಗಳಲ್ಲಿ 50 ಲಕ್ಷಕ್ಕಿಂತ ಹೆಚ್ಚಿನ ಉದ್ಯೋಗ ಸೃಷ್ಟಿಯ ಗುರಿ </p><p>* ನೆರೆ ರಾಜ್ಯಗಳು ವಿವಿಧ ವಿನಾಯಿತಿ ನೀಡಿ ಹೂಡಿಕೆದಾರರನ್ನು ಸೆಳೆಯುತ್ತಿರುವುದರಿಂದ ಪೈಪೋಟಿ ನೀಡಲು ಮುಕ್ತ ಅವಕಾಶ ಕಲ್ಪಿಸುವುದು </p><p>* ನವೋದ್ಯಮಗಳಿಗೆ ಆರ್ಥಿಕ ನೆರವು ವಿನಾಯಿತಿಗಳು ಪ್ಲಗ್ ಎಂಡ್ ಪ್ಲೇನಂಥ ಸೌಲಭ್ಯಗಳನ್ನು ಪ್ರಕಟಿಸುವುದು. ಆ ಮೂಲಕ ಈ ಕ್ಷೇತ್ರದ ಬೆಳವಣಿಗೆಗೆ ಪೂರಕ ಪರಿಸರಕ್ಕೆ ಒತ್ತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>