<p><strong>ಬೆಂಗಳೂರು:</strong> ‘ವಿಶ್ವಕರ್ಮ ಸಮುದಾಯವು ವಿಶ್ವಧರ್ಮ ಸಮುದಾಯವಾಗಿದೆ. ಮನುಷ್ಯನ ಬದುಕಿಗೆ ಅಗತ್ಯವಿರುವ ಎಲ್ಲ ಸಂಗತಿಗಳನ್ನು ವಿಶ್ವಕರ್ಮ ಸಮುದಾಯ ಒದಗಿಸುತ್ತದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಣ್ಣಿಸಿದರು.</p>.<p>ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಧು-ವರರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ಬಾಗಿಲು, ನೇಗಿಲು ವಿಶ್ವಕರ್ಮ ಸಮುದಾಯದ ಕೊಡುಗೆಯಾಗಿದೆ. ವಿಶ್ವದ ಯಾವುದೇ ದೇಶಕ್ಕೆ ಹೋದರೂ ಅಲ್ಲಿನ ಪ್ರತಿಮೆಗಳಿಂದ ಹಿಡಿದು, ಆಭರಣ ವಿನ್ಯಾಸ ಎಲ್ಲವೂ ವಿಶ್ವಕರ್ಮರ ಕೈಯಲ್ಲಿ ಅರಳುವ ಕಲೆಗಳಾಗಿವೆ. ಭೂಮಿಯನ್ನು ಸೃಷ್ಟಿ ಮಾಡಿದ್ದೂ ಸಹ ವಿಶ್ವಕರ್ಮ ಮಹರ್ಷಿಗಳು. ವಿಶ್ವಕರ್ಮ ಸಮುದಾಯ ಕೇವಲ ಈ ರಾಜ್ಯಕ್ಕೆ ಸೀಮಿತವಾದ ಸಮುದಾಯವಲ್ಲ’ ಎಂದರು.</p>.<p>‘ಇತ್ತೀಚಿನ ದಿನಗಳಲ್ಲಿ ಅಂತರ್ಜಾತಿ ವಿವಾಹಗಳು ಹೆಚ್ಚಾಗುತ್ತಿವೆ. ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಲೂ ಅನೇಕ ಬದಲಾವಣೆಗಳು ಆಗುತ್ತಿವೆ. ಜನರು ಜಾತಿ, ಧರ್ಮಗಳನ್ನು ಮೀರಿ ಮದುವೆಯಾಗುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಸಿದ್ದಪ್ಪಾಜಿ ದೇವರು ಹಾಗೂ ನನಗೆ ಅವಿನಾಭಾವ ಸಂಬಂಧವಿದೆ. ಚಿಕ್ಕ ವಯಸ್ಸಿನಲ್ಲಿ ತಂದೆ ನಡೆಸಿಕೊಂಡು ಸಂಗಮದ ಮೂಲಕ ದೇವಸ್ಥಾನಕ್ಕೆ ಕರೆದುಕೊಂಡು ಹೋಗುತ್ತಿದ್ದರು. ಆ ದೇವಸ್ಥಾನದ ಅಭಿವೃದ್ಧಿಗೆ ಏನು ಮಾಡಬೇಕೆಂದು ಚರ್ಚೆ ನಡೆಸಲಾಗುವುದು’ ಎಂದರು.</p>.<p>‘ವಿಶ್ವಕರ್ಮ ಶ್ರೀಗಳ ಮಾರ್ಗದರ್ಶನದಲ್ಲಿ, ಕೆ.ಪಿ.ನಂಜುಂಡಿ ಅವರ ಮುಂದಾಳತ್ವದಲ್ಲಿ, ಬಸವರಾಜು ಅವರ ಅಧ್ಯಕ್ಷತೆಯಲ್ಲಿ ಮುಂದಿನ ಪೀಳಿಗೆಗೆ ಅಡಿಪಾಯ ಹಾಕಲು, ಸಮುದಾಯವನ್ನು ಒಗ್ಗೂಡಿಸಲು ಸಂಘಟನೆ ಮಾಡುತ್ತಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವಿಶ್ವಕರ್ಮ ಸಮುದಾಯವು ವಿಶ್ವಧರ್ಮ ಸಮುದಾಯವಾಗಿದೆ. ಮನುಷ್ಯನ ಬದುಕಿಗೆ ಅಗತ್ಯವಿರುವ ಎಲ್ಲ ಸಂಗತಿಗಳನ್ನು ವಿಶ್ವಕರ್ಮ ಸಮುದಾಯ ಒದಗಿಸುತ್ತದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಣ್ಣಿಸಿದರು.</p>.<p>ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಧು-ವರರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ಬಾಗಿಲು, ನೇಗಿಲು ವಿಶ್ವಕರ್ಮ ಸಮುದಾಯದ ಕೊಡುಗೆಯಾಗಿದೆ. ವಿಶ್ವದ ಯಾವುದೇ ದೇಶಕ್ಕೆ ಹೋದರೂ ಅಲ್ಲಿನ ಪ್ರತಿಮೆಗಳಿಂದ ಹಿಡಿದು, ಆಭರಣ ವಿನ್ಯಾಸ ಎಲ್ಲವೂ ವಿಶ್ವಕರ್ಮರ ಕೈಯಲ್ಲಿ ಅರಳುವ ಕಲೆಗಳಾಗಿವೆ. ಭೂಮಿಯನ್ನು ಸೃಷ್ಟಿ ಮಾಡಿದ್ದೂ ಸಹ ವಿಶ್ವಕರ್ಮ ಮಹರ್ಷಿಗಳು. ವಿಶ್ವಕರ್ಮ ಸಮುದಾಯ ಕೇವಲ ಈ ರಾಜ್ಯಕ್ಕೆ ಸೀಮಿತವಾದ ಸಮುದಾಯವಲ್ಲ’ ಎಂದರು.</p>.<p>‘ಇತ್ತೀಚಿನ ದಿನಗಳಲ್ಲಿ ಅಂತರ್ಜಾತಿ ವಿವಾಹಗಳು ಹೆಚ್ಚಾಗುತ್ತಿವೆ. ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಲೂ ಅನೇಕ ಬದಲಾವಣೆಗಳು ಆಗುತ್ತಿವೆ. ಜನರು ಜಾತಿ, ಧರ್ಮಗಳನ್ನು ಮೀರಿ ಮದುವೆಯಾಗುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಸಿದ್ದಪ್ಪಾಜಿ ದೇವರು ಹಾಗೂ ನನಗೆ ಅವಿನಾಭಾವ ಸಂಬಂಧವಿದೆ. ಚಿಕ್ಕ ವಯಸ್ಸಿನಲ್ಲಿ ತಂದೆ ನಡೆಸಿಕೊಂಡು ಸಂಗಮದ ಮೂಲಕ ದೇವಸ್ಥಾನಕ್ಕೆ ಕರೆದುಕೊಂಡು ಹೋಗುತ್ತಿದ್ದರು. ಆ ದೇವಸ್ಥಾನದ ಅಭಿವೃದ್ಧಿಗೆ ಏನು ಮಾಡಬೇಕೆಂದು ಚರ್ಚೆ ನಡೆಸಲಾಗುವುದು’ ಎಂದರು.</p>.<p>‘ವಿಶ್ವಕರ್ಮ ಶ್ರೀಗಳ ಮಾರ್ಗದರ್ಶನದಲ್ಲಿ, ಕೆ.ಪಿ.ನಂಜುಂಡಿ ಅವರ ಮುಂದಾಳತ್ವದಲ್ಲಿ, ಬಸವರಾಜು ಅವರ ಅಧ್ಯಕ್ಷತೆಯಲ್ಲಿ ಮುಂದಿನ ಪೀಳಿಗೆಗೆ ಅಡಿಪಾಯ ಹಾಕಲು, ಸಮುದಾಯವನ್ನು ಒಗ್ಗೂಡಿಸಲು ಸಂಘಟನೆ ಮಾಡುತ್ತಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>