<p><strong>ನವದೆಹಲಿ</strong>: ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇತರರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.</p>.<p>ಈ ಪ್ರಕರಣದ ಮರು ವಿಚಾರಣೆ ನಡೆಸಬೇಕು ಎಂದು ಕೋರಿ ಸಮಾಜ ಪರಿವರ್ತನ ಟ್ರಸ್ಟ್ ಸಲ್ಲಿಸಿದ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ವಿಜಯ್ ಬಿಷ್ಣೋಯ್ ಪೀಠವು, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡಿದೆ.</p>.<p>ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಹಾಗೂ ದೇವದತ್ ಕಾಮತ್ ಅವರು ಸಮಾಜ ಪರಿವರ್ತನ ಟ್ರಸ್ಟ್ನ ಅರ್ಜಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಅರ್ಜಿದಾರರು ಪ್ರಾಥಮಿಕ ಮಾಹಿತಿದಾರರು ಅಲ್ಲ. ಅವರಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಅರ್ಜಿಯನ್ನು ಮಾನ್ಯ ಮಾಡಬಾರದು’ ಎಂದು ಕೋರಿದರು.</p>.<p>ಈ ಪ್ರಾಥಮಿಕ ಆಕ್ಷೇಪಣೆಯನ್ನು ಮುಂದಿನ ವಿಚಾರಣೆ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದು ಪೀಠ ಭರವಸೆ ನೀಡಿತು.</p>.<p>ಬೆನ್ನಿಗಾನಹಳ್ಳಿಯ 4 ಎಕರೆ 20 ಗುಂಟೆ ಜಮೀನನ್ನು ಡಿನೋಟಿಫಿಕೇಷನ್ ಮಾಡಲಾಗಿತ್ತು. ಈ ಜಾಗವನ್ನು ಶ್ರೀನಿವಾಸ್ ಎಂಬವರಿಂದ ಶಿವಕುಮಾರ್ ಖರೀದಿಸಿದ್ದರು. ಈ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು.</p>.<p>ಪ್ರಕರಣದಲ್ಲಿ ಶಿವಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್ 2015ರಲ್ಲಿ ದೋಷಮುಕ್ತಗೊಳಿಸಿತ್ತು. ಬಳಿಕ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಕೆಯಾಗಿತ್ತು.</p>.<p>ಈ ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಬೇಕು ಎಂದು ಸಮಾಜ ಪರಿವರ್ತನ ಟ್ರಸ್ಟ್ ಅರ್ಜಿ ಸಲ್ಲಿಸಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-4-567628389</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇತರರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.</p>.<p>ಈ ಪ್ರಕರಣದ ಮರು ವಿಚಾರಣೆ ನಡೆಸಬೇಕು ಎಂದು ಕೋರಿ ಸಮಾಜ ಪರಿವರ್ತನ ಟ್ರಸ್ಟ್ ಸಲ್ಲಿಸಿದ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ವಿಜಯ್ ಬಿಷ್ಣೋಯ್ ಪೀಠವು, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡಿದೆ.</p>.<p>ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಹಾಗೂ ದೇವದತ್ ಕಾಮತ್ ಅವರು ಸಮಾಜ ಪರಿವರ್ತನ ಟ್ರಸ್ಟ್ನ ಅರ್ಜಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಅರ್ಜಿದಾರರು ಪ್ರಾಥಮಿಕ ಮಾಹಿತಿದಾರರು ಅಲ್ಲ. ಅವರಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಅರ್ಜಿಯನ್ನು ಮಾನ್ಯ ಮಾಡಬಾರದು’ ಎಂದು ಕೋರಿದರು.</p>.<p>ಈ ಪ್ರಾಥಮಿಕ ಆಕ್ಷೇಪಣೆಯನ್ನು ಮುಂದಿನ ವಿಚಾರಣೆ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದು ಪೀಠ ಭರವಸೆ ನೀಡಿತು.</p>.<p>ಬೆನ್ನಿಗಾನಹಳ್ಳಿಯ 4 ಎಕರೆ 20 ಗುಂಟೆ ಜಮೀನನ್ನು ಡಿನೋಟಿಫಿಕೇಷನ್ ಮಾಡಲಾಗಿತ್ತು. ಈ ಜಾಗವನ್ನು ಶ್ರೀನಿವಾಸ್ ಎಂಬವರಿಂದ ಶಿವಕುಮಾರ್ ಖರೀದಿಸಿದ್ದರು. ಈ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು.</p>.<p>ಪ್ರಕರಣದಲ್ಲಿ ಶಿವಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್ 2015ರಲ್ಲಿ ದೋಷಮುಕ್ತಗೊಳಿಸಿತ್ತು. ಬಳಿಕ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಕೆಯಾಗಿತ್ತು.</p>.<p>ಈ ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಬೇಕು ಎಂದು ಸಮಾಜ ಪರಿವರ್ತನ ಟ್ರಸ್ಟ್ ಅರ್ಜಿ ಸಲ್ಲಿಸಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-4-567628389</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>