<p><strong>ಬೆಂಗಳೂರು:</strong> ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ) ಅಧಿಕಾರಿಗಳ ಕಾರ್ಯನಿರ್ವಹಣೆಗಾಗಿ ಬಾಡಿಗೆ ವಾಹನ ಪಡೆದುಕೊಳ್ಳಲು ಕರೆಯಲಾಗಿದ್ದ ಟೆಂಡರ್ಗಳನ್ನು ಕಾರಣವಿಲ್ಲದೆ ರದ್ದುಪಡಿಸಿ ಹೊಸ ಟೆಂಡರ್ ಕರೆಯಲಾಗಿದೆ’ ಎಂದು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಬೆಸ್ಕಾಂಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>ಈ ಸಂಬಂಧ ಆರ್.ಟಿ.ನಗರ ಮನೋರಾಯನ ಪಾಳ್ಯದ ಅಶ್ವತ್ಥ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ಕೆಲ ಕಾಲ ವಿಚಾರಣೆ ಆಲಿಸಿದ ನ್ಯಾಯಪೀಠ, ರಾಜ್ಯ ಇಂಧನ ಇಲಾಖೆ ಸೇರಿದಂತೆ ಇತರೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿತು.</p>.<p>ಏನಿದು ಅರ್ಜಿ?: ಬೆಸ್ಕಾಂ ಅಧಿಕಾರಿಗಳ ಸಂಚಾರಕ್ಕೆ 2 ವರ್ಷದ ಅವಧಿಗೆ 593 ವಾಹನಗಳನ್ನು ಬಾಡಿಗೆ ಸೇವೆ ಪಡೆದುಕೊಳ್ಳಲು ₹52.28 ಕೋಟಿ ಮೊತ್ತದ ಟೆಂಡರ್ ಹಾಗೂ ಬೆಸ್ಕಾಂ ವ್ಯಾಪ್ತಿಯ ಸರ್ವಿಸ್ ಸ್ಟೇಷನ್ಗಳ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ 531 ವಾಹನಗಳನ್ನು ಬಾಡಿಗೆ ಪಡೆದುಕೊಳ್ಳಲು ₹63.08 ಕೋಟಿ ಮೊತ್ತದ ಪ್ರತ್ಯೇಕ ಟೆಂಡರ್ ಅನ್ನು 2021-22ರಲ್ಲಿ ಕರೆಯಲಾಗಿತ್ತು.</p>.<p>‘ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ತಾಂತ್ರಿಕ ನಿರ್ದೇಶಕರು ತಮ್ಮವರಿಗೆ ಅನುಕೂಲ ಮಾಡಿಕೊಡಲು 19 ಪ್ಯಾಕೇಜ್ಗಳಲ್ಲಿ ಈ ಟೆಂಡರ್ ಕರೆದಿದ್ದರು. ಉದ್ದೇಶ ಈಡೇರದೇ ಹೋದಾಗ ಕರೆಯಲಾಗಿದ್ದ ಟೆಂಡರ್ ಅನ್ನು ವಿನಾಕಾರಣ ರದ್ದುಪಡಿಸಿ 2025ರ ಜೂನ್ನಿಂದ ಡಿಸೆಂಬರ್ ತನಕ 5 ಬಾರಿ ಹೊಸದಾಗಿ ಟೆಂಡರ್ ಕರೆಯಲಾಗಿದೆ. ಇದು ರಾಜ್ಯದ ಬೊಕ್ಕಸಕ್ಕೆ ಹೊರೆಯಾಗಲಿದೆ. ಆದ್ದರಿಂದ, ಟೆಂಡರ್ ಪ್ರಕ್ರಿಯೆಗೆ ತಡೆ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ) ಅಧಿಕಾರಿಗಳ ಕಾರ್ಯನಿರ್ವಹಣೆಗಾಗಿ ಬಾಡಿಗೆ ವಾಹನ ಪಡೆದುಕೊಳ್ಳಲು ಕರೆಯಲಾಗಿದ್ದ ಟೆಂಡರ್ಗಳನ್ನು ಕಾರಣವಿಲ್ಲದೆ ರದ್ದುಪಡಿಸಿ ಹೊಸ ಟೆಂಡರ್ ಕರೆಯಲಾಗಿದೆ’ ಎಂದು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಬೆಸ್ಕಾಂಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>ಈ ಸಂಬಂಧ ಆರ್.ಟಿ.ನಗರ ಮನೋರಾಯನ ಪಾಳ್ಯದ ಅಶ್ವತ್ಥ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>ಕೆಲ ಕಾಲ ವಿಚಾರಣೆ ಆಲಿಸಿದ ನ್ಯಾಯಪೀಠ, ರಾಜ್ಯ ಇಂಧನ ಇಲಾಖೆ ಸೇರಿದಂತೆ ಇತರೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿತು.</p>.<p>ಏನಿದು ಅರ್ಜಿ?: ಬೆಸ್ಕಾಂ ಅಧಿಕಾರಿಗಳ ಸಂಚಾರಕ್ಕೆ 2 ವರ್ಷದ ಅವಧಿಗೆ 593 ವಾಹನಗಳನ್ನು ಬಾಡಿಗೆ ಸೇವೆ ಪಡೆದುಕೊಳ್ಳಲು ₹52.28 ಕೋಟಿ ಮೊತ್ತದ ಟೆಂಡರ್ ಹಾಗೂ ಬೆಸ್ಕಾಂ ವ್ಯಾಪ್ತಿಯ ಸರ್ವಿಸ್ ಸ್ಟೇಷನ್ಗಳ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ 531 ವಾಹನಗಳನ್ನು ಬಾಡಿಗೆ ಪಡೆದುಕೊಳ್ಳಲು ₹63.08 ಕೋಟಿ ಮೊತ್ತದ ಪ್ರತ್ಯೇಕ ಟೆಂಡರ್ ಅನ್ನು 2021-22ರಲ್ಲಿ ಕರೆಯಲಾಗಿತ್ತು.</p>.<p>‘ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ತಾಂತ್ರಿಕ ನಿರ್ದೇಶಕರು ತಮ್ಮವರಿಗೆ ಅನುಕೂಲ ಮಾಡಿಕೊಡಲು 19 ಪ್ಯಾಕೇಜ್ಗಳಲ್ಲಿ ಈ ಟೆಂಡರ್ ಕರೆದಿದ್ದರು. ಉದ್ದೇಶ ಈಡೇರದೇ ಹೋದಾಗ ಕರೆಯಲಾಗಿದ್ದ ಟೆಂಡರ್ ಅನ್ನು ವಿನಾಕಾರಣ ರದ್ದುಪಡಿಸಿ 2025ರ ಜೂನ್ನಿಂದ ಡಿಸೆಂಬರ್ ತನಕ 5 ಬಾರಿ ಹೊಸದಾಗಿ ಟೆಂಡರ್ ಕರೆಯಲಾಗಿದೆ. ಇದು ರಾಜ್ಯದ ಬೊಕ್ಕಸಕ್ಕೆ ಹೊರೆಯಾಗಲಿದೆ. ಆದ್ದರಿಂದ, ಟೆಂಡರ್ ಪ್ರಕ್ರಿಯೆಗೆ ತಡೆ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>