<p>ಸಿರಿಗೆರೆ: ಭದ್ರಾ ಮೇಲ್ಡಂಡೆ ಯೋಜನೆಯ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಡ ಹಾಕುವ ಸಂಬಂಧ ತರಳಬಾಳು ಮಠದ ಶಿವಮೂರ್ತಿ ಸ್ವಾಮೀಜಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಕೇಂದ್ರದ ಸಚಿವರು ಹಾಗೂ ರಾಜಕೀಯ ಮುಖಂಡರ ಜೊತೆ ಸಮಾಲೋಚನೆ ನಡೆಸಿದ್ದಾರೆ.</p>.<p>ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಕೇಂದ್ರ ಸಚಿವ ವಿ. ಸೋಮಣ್ಣ, ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಬಿ.ವೈ. ರಾಘವೇಂದ್ರ ಜೊತೆ ಚರ್ಚಿಸಿದ್ದಾರೆ.</p>.<p>ದೆಹಲಿಯಲ್ಲಿ ನಡೆದ ನೀರಾವರಿ ತಾಂತ್ರಿಕ ಸಲಹಾ ಸಮಿತಿಯಲ್ಲಿ ಯೋಜನೆಯ ಪರಿಷ್ಕೃತ ಅಂದಾಜು ವೆಚ್ಚಕ್ಕೆ ಅನುಮೋದನೆ ದೊರೆತಿದೆ. ಇದು ಪಬ್ಲಿಕ್ ಇನ್ವೆಸ್ಟ್ಮೆಂಟ್ ಬೋರ್ಡ್ ಬಳಿಕ ಕೇಂದ್ರ ಸಚಿವ ಸಂಪುಟ ಸಭೆಯ ಮುಂದೆ ಬರಲಿದೆ. ಈ ಎರಡು ಮಜಲು ದಾಟಿದರೆ ಆಮೆವೇಗದಲ್ಲಿ ಸಾಗುತ್ತಿರುವ ಯೋಜನೆಗೆ ಬಲ ಬಂದು ಅದು ನಿಗದಿತ ವೇಳೆಗೆ ಕಾರ್ಯಾರಂಭವಾಗಲು ಸಾಧ್ಯವಾಗುತ್ತದೆ.</p>.<p>ಶ್ರೀಗಳ ಮಾರ್ಗದರ್ಶನವು ಕೇಂದ್ರೀಯ ಸಮಿತಿ ಅನುಮೋದನೆ ನೀಡಲು ಸಹಾಯಕವಾಯಿತು ಎಂದು ಯೋಜನೆಯ ಎಂಜಿನಿಯರೊಬ್ಬರು ತಿಳಿಸಿದ್ದಾರೆ.</p>.<p>ಪ್ರತಿಭಟನೆ, ಧರಣಿ, ಮುಷ್ಕರ ಕೈಬಿಟ್ಟು ನಮನ್ವಯ ಭಾವದಿಂದ ಯೋಜನೆ ಜಾರಿಗೆ ಎಲ್ಲರೂ ಸೇರಿ ಕೆಲಸ ಮಾಡೋಣ ಎಂದು ಸ್ವಾಮೀಜಿ ರೈತರಿಗೆ ಈಚೆಗೆ ಕಿವಿಮಾತು ಹೇಳಿದ್ದರು.</p>.<p>ಚಿತ್ರದುರ್ಗ ವರದಿ: ಭದ್ರಾ ಮೇಲ್ದಂಡೆ ಯೋಜನೆಗೆ ವೇಗ ನೀಡಲು ಮುಂದಾಗಿರುವ ಸಿರಿಗೆರೆ ಶ್ರೀ ನಡೆ ಸ್ವಾಗತಾರ್ಹ ಎಂದು ಭದ್ರಾ ಮೇಲ್ದಂಡೆ ಹೋರಾಟಗಾರ ಆರ್.ಶೇಷಣ್ಣ ಕುಮಾರ್ ತಿಳಿಸಿದ್ದಾರೆ.</p>.<p>ಯೋಜನೆಗೆ ಅನುದಾನ ಕೊಡುವಂತೆ ಮೊದಲ ಬಾರಿಗೆ ದೆಹಲಿಯಲ್ಲಿ ಧ್ವನಿ ಮೊಳಗಿಸಿರುವುದು ಜಿಲ್ಲೆಯ ಹೋರಾಟಗಾರರಲ್ಲಿ ಆಶಾಭಾವ ಮೂಡಿಸಿದೆ. ಜನರ ನಾಡಿಮಿಡಿತಕ್ಕೆ ಸದಾ ಸ್ಪಂದಿಸುವ ಸ್ವಾಮೀಜಿ, ದೀರ್ಘಕಾಲದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುವ ವಿಶ್ವಾಸ ಇದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-44-1092472422</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿರಿಗೆರೆ: ಭದ್ರಾ ಮೇಲ್ಡಂಡೆ ಯೋಜನೆಯ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಡ ಹಾಕುವ ಸಂಬಂಧ ತರಳಬಾಳು ಮಠದ ಶಿವಮೂರ್ತಿ ಸ್ವಾಮೀಜಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಕೇಂದ್ರದ ಸಚಿವರು ಹಾಗೂ ರಾಜಕೀಯ ಮುಖಂಡರ ಜೊತೆ ಸಮಾಲೋಚನೆ ನಡೆಸಿದ್ದಾರೆ.</p>.<p>ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಕೇಂದ್ರ ಸಚಿವ ವಿ. ಸೋಮಣ್ಣ, ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಬಿ.ವೈ. ರಾಘವೇಂದ್ರ ಜೊತೆ ಚರ್ಚಿಸಿದ್ದಾರೆ.</p>.<p>ದೆಹಲಿಯಲ್ಲಿ ನಡೆದ ನೀರಾವರಿ ತಾಂತ್ರಿಕ ಸಲಹಾ ಸಮಿತಿಯಲ್ಲಿ ಯೋಜನೆಯ ಪರಿಷ್ಕೃತ ಅಂದಾಜು ವೆಚ್ಚಕ್ಕೆ ಅನುಮೋದನೆ ದೊರೆತಿದೆ. ಇದು ಪಬ್ಲಿಕ್ ಇನ್ವೆಸ್ಟ್ಮೆಂಟ್ ಬೋರ್ಡ್ ಬಳಿಕ ಕೇಂದ್ರ ಸಚಿವ ಸಂಪುಟ ಸಭೆಯ ಮುಂದೆ ಬರಲಿದೆ. ಈ ಎರಡು ಮಜಲು ದಾಟಿದರೆ ಆಮೆವೇಗದಲ್ಲಿ ಸಾಗುತ್ತಿರುವ ಯೋಜನೆಗೆ ಬಲ ಬಂದು ಅದು ನಿಗದಿತ ವೇಳೆಗೆ ಕಾರ್ಯಾರಂಭವಾಗಲು ಸಾಧ್ಯವಾಗುತ್ತದೆ.</p>.<p>ಶ್ರೀಗಳ ಮಾರ್ಗದರ್ಶನವು ಕೇಂದ್ರೀಯ ಸಮಿತಿ ಅನುಮೋದನೆ ನೀಡಲು ಸಹಾಯಕವಾಯಿತು ಎಂದು ಯೋಜನೆಯ ಎಂಜಿನಿಯರೊಬ್ಬರು ತಿಳಿಸಿದ್ದಾರೆ.</p>.<p>ಪ್ರತಿಭಟನೆ, ಧರಣಿ, ಮುಷ್ಕರ ಕೈಬಿಟ್ಟು ನಮನ್ವಯ ಭಾವದಿಂದ ಯೋಜನೆ ಜಾರಿಗೆ ಎಲ್ಲರೂ ಸೇರಿ ಕೆಲಸ ಮಾಡೋಣ ಎಂದು ಸ್ವಾಮೀಜಿ ರೈತರಿಗೆ ಈಚೆಗೆ ಕಿವಿಮಾತು ಹೇಳಿದ್ದರು.</p>.<p>ಚಿತ್ರದುರ್ಗ ವರದಿ: ಭದ್ರಾ ಮೇಲ್ದಂಡೆ ಯೋಜನೆಗೆ ವೇಗ ನೀಡಲು ಮುಂದಾಗಿರುವ ಸಿರಿಗೆರೆ ಶ್ರೀ ನಡೆ ಸ್ವಾಗತಾರ್ಹ ಎಂದು ಭದ್ರಾ ಮೇಲ್ದಂಡೆ ಹೋರಾಟಗಾರ ಆರ್.ಶೇಷಣ್ಣ ಕುಮಾರ್ ತಿಳಿಸಿದ್ದಾರೆ.</p>.<p>ಯೋಜನೆಗೆ ಅನುದಾನ ಕೊಡುವಂತೆ ಮೊದಲ ಬಾರಿಗೆ ದೆಹಲಿಯಲ್ಲಿ ಧ್ವನಿ ಮೊಳಗಿಸಿರುವುದು ಜಿಲ್ಲೆಯ ಹೋರಾಟಗಾರರಲ್ಲಿ ಆಶಾಭಾವ ಮೂಡಿಸಿದೆ. ಜನರ ನಾಡಿಮಿಡಿತಕ್ಕೆ ಸದಾ ಸ್ಪಂದಿಸುವ ಸ್ವಾಮೀಜಿ, ದೀರ್ಘಕಾಲದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುವ ವಿಶ್ವಾಸ ಇದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-44-1092472422</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>