‘ಹುತಾತ್ಮ ದಿನದ ಅಂಗವಾಗಿ ಕಾಲೇಜು ಹಾಗೂ ವಿವಿಧ ಬಡಾವಣೆಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಭಗತ್ ಸಿಂಗ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಜೊತೆಗೆ ಅವರ ಜೀವನ ಮತ್ತು ಹೋರಾಟದ ಹಾದಿಯ ಕುರಿತು ಚರ್ಚೆ ಏರ್ಪಡಿಸಲಾಗಿತ್ತು. ಮೈಸೂರು ಬ್ಯಾಂಕ್ ವೃತ್ತದಲ್ಲಿ ಈ ಮಹಾನ್ ಚೇತನರ ಕುರಿತ ಸೂಕ್ತಿ ಹಾಗೂ ಛಾಯಾಚಿತ್ರ ಪ್ರದರ್ಶನ ಮತ್ತು ಪುಸ್ತಕ ಮಾರಾಟ ಹಮ್ಮಿಕೊಳ್ಳಲಾಗಿತ್ತು. ಆ ಮೂಲಕ ಅವರ ವಿಚಾರಧಾರೆಗಳನ್ನು ಎಲ್ಲಾ ವರ್ಗದವರಿಗೂ ಪಸರಿಸುವ ಕೆಲಸ ಮಾಡಿದ್ದೇವೆ’ ಎಂದು ಸಂಘಟನೆಯ ಕಾರ್ಯದರ್ಶಿ ಎ.ಶಾಂತ ಹೇಳಿದರು.