<p><strong>ಬೆಂಗಳೂರು:</strong> ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ಬೆಂಗಳೂರು ಜಿಲ್ಲಾ ಸಮಿತಿ ವತಿಯಿಂದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ಸಿಂಗ್, ಸುಖ್ದೇವ್ ಹಾಗೂ ರಾಜ್ಗುರು ಅವರ 91ನೇ ಹುತಾತ್ಮ ದಿನವನ್ನು ಮಂಗಳವಾರ ಆಚರಿಸಲಾಯಿತು.</p>.<p>‘ಹುತಾತ್ಮ ದಿನದ ಅಂಗವಾಗಿ ಕಾಲೇಜು ಹಾಗೂ ವಿವಿಧ ಬಡಾವಣೆಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಭಗತ್ ಸಿಂಗ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಜೊತೆಗೆ ಅವರ ಜೀವನ ಮತ್ತು ಹೋರಾಟದ ಹಾದಿಯ ಕುರಿತು ಚರ್ಚೆ ಏರ್ಪಡಿಸಲಾಗಿತ್ತು. ಮೈಸೂರು ಬ್ಯಾಂಕ್ ವೃತ್ತದಲ್ಲಿ ಈ ಮಹಾನ್ ಚೇತನರ ಕುರಿತ ಸೂಕ್ತಿ ಹಾಗೂ ಛಾಯಾಚಿತ್ರ ಪ್ರದರ್ಶನ ಮತ್ತು ಪುಸ್ತಕ ಮಾರಾಟ ಹಮ್ಮಿಕೊಳ್ಳಲಾಗಿತ್ತು. ಆ ಮೂಲಕ ಅವರ ವಿಚಾರಧಾರೆಗಳನ್ನು ಎಲ್ಲಾ ವರ್ಗದವರಿಗೂ ಪಸರಿಸುವ ಕೆಲಸ ಮಾಡಿದ್ದೇವೆ’ ಎಂದು ಸಂಘಟನೆಯ ಕಾರ್ಯದರ್ಶಿ ಎ.ಶಾಂತ ಹೇಳಿದರು.</p>.<p>ಸದಸ್ಯರಾದ ರುಕ್ಮಿಣಿ ಹಾಗೂ ಸಿಂಧೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ಬೆಂಗಳೂರು ಜಿಲ್ಲಾ ಸಮಿತಿ ವತಿಯಿಂದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ಸಿಂಗ್, ಸುಖ್ದೇವ್ ಹಾಗೂ ರಾಜ್ಗುರು ಅವರ 91ನೇ ಹುತಾತ್ಮ ದಿನವನ್ನು ಮಂಗಳವಾರ ಆಚರಿಸಲಾಯಿತು.</p>.<p>‘ಹುತಾತ್ಮ ದಿನದ ಅಂಗವಾಗಿ ಕಾಲೇಜು ಹಾಗೂ ವಿವಿಧ ಬಡಾವಣೆಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಭಗತ್ ಸಿಂಗ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಜೊತೆಗೆ ಅವರ ಜೀವನ ಮತ್ತು ಹೋರಾಟದ ಹಾದಿಯ ಕುರಿತು ಚರ್ಚೆ ಏರ್ಪಡಿಸಲಾಗಿತ್ತು. ಮೈಸೂರು ಬ್ಯಾಂಕ್ ವೃತ್ತದಲ್ಲಿ ಈ ಮಹಾನ್ ಚೇತನರ ಕುರಿತ ಸೂಕ್ತಿ ಹಾಗೂ ಛಾಯಾಚಿತ್ರ ಪ್ರದರ್ಶನ ಮತ್ತು ಪುಸ್ತಕ ಮಾರಾಟ ಹಮ್ಮಿಕೊಳ್ಳಲಾಗಿತ್ತು. ಆ ಮೂಲಕ ಅವರ ವಿಚಾರಧಾರೆಗಳನ್ನು ಎಲ್ಲಾ ವರ್ಗದವರಿಗೂ ಪಸರಿಸುವ ಕೆಲಸ ಮಾಡಿದ್ದೇವೆ’ ಎಂದು ಸಂಘಟನೆಯ ಕಾರ್ಯದರ್ಶಿ ಎ.ಶಾಂತ ಹೇಳಿದರು.</p>.<p>ಸದಸ್ಯರಾದ ರುಕ್ಮಿಣಿ ಹಾಗೂ ಸಿಂಧೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>