<p><strong>ಉಡುಪಿ:</strong> ‘ಭಗವಾಧ್ವಜ ಹಾರಿಸಿ ಶೋಭಾಯಾತ್ರೆಗೆ ಚಾಲನೆ ನೀಡಿರುವ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ವಿರುದ್ಧ ಸರ್ಕಾರ ಕ್ರಮಕ್ಕೆ ಮುಂದಾದರೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಎಚ್ಚರಿಸಿದ್ದಾರೆ.</p><p>‘ಈ ಬೆಳವಣಿಗೆಗಳಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಜಿಲ್ಲೆಯ ಬಗ್ಗೆ ತೋರಿದ ನಿರ್ಲಕ್ಷ್ಯ ಧೋರಣೆಯೇ ಕಾರಣ. ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ರಾಜ್ಯ ಸರ್ಕಾರದ ಪ್ರತಿನಿಧಿಗಳು ಉಡುಪಿಯ ಪರ್ಯಾಯ ಶೋಭಾಯಾತ್ರೆಗೆ ಚಾಲನೆ ನೀಡುವುದು ಸಂಪ್ರದಾಯ. ಸಚಿವೆ ಈ ಬಾರಿಯ ಪರ್ಯಾಯ ಮಹೋತ್ಸವದ ಬಗ್ಗೆ ಒಂದೇ ಒಂದು ಪೂರ್ವ ಸಿದ್ಧತಾ ಸಭೆಯನ್ನೂ ನಡೆಸಲಿಲ್ಲ’ ಎಂದು ಅವರು ಹೇಳಿದ್ದಾರೆ.</p><p><strong>ನಿರ್ಲಿಪ್ತವಾಗಿರಬೇಕಿತ್ತು:</strong> ‘ಪರ್ಯಾಯ ಮೆರಣಿಗೆಗೆ ಚಾಲನೆ ನೀಡುವಾಗ ಜಿಲ್ಲಾಧಿಕಾರಿ ಅವರು ನಿರ್ಲಿಪ್ತವಾಗಿರಬೇಕಿತ್ತು. ಜಿಲ್ಲಾಧಿಕಾರಿಯಿಂದ ಯಾವ ಕೆಲಸ ಮಾಡಿಸಬೇಕು ಎಂಬುದು ಶಾಸಕ ಯಶ್ಪಾಲ್ ಸುವರ್ಣ ಅವರಿಗೂ ತಿಳಿದಿರಬೇಕಿತ್ತು’ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರತಿಕ್ರಿಯಿಸಿದ್ದಾರೆ.</p><p>‘ಹಿಂದೆ ಸಿಡಿಮದ್ದು ಸಿಡಿಸಿ ಪರ್ಯಾಯ ಮೆರವಣಿಗೆಗೆ ಚಾಲನೆ ನೀಡಲಾಗುತ್ತಿತ್ತು. ಈ ಸಲ ಜಿಲ್ಲಾಧಿಕಾರಿ ಅವರು ಭಗವಾಧ್ವಜ ಹಾರಿಸಿ ಚಾಲನೆ ನೀಡಿದ್ದಾರೆ. ಈ ಬಾರಿ ಮುಸ್ಲಿಮರು ಪರ್ಯಾಯಕ್ಕೆ ಹೊರೆಕಾಣಿಕೆ ಕೊಡುತ್ತೇವೆ ಅಂದಾಗ ಶಾಸಕರು ನಿರಾಕರಿಸಿದ್ದರು. ಸರ್ಕಾರ ಪರ್ಯಾಯಕ್ಕಾಗಿ ₹6 ಕೋಟಿ ಬಿಡುಗಡೆ ಮಾಡಿದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ‘ಭಗವಾಧ್ವಜ ಹಾರಿಸಿ ಶೋಭಾಯಾತ್ರೆಗೆ ಚಾಲನೆ ನೀಡಿರುವ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ವಿರುದ್ಧ ಸರ್ಕಾರ ಕ್ರಮಕ್ಕೆ ಮುಂದಾದರೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಎಚ್ಚರಿಸಿದ್ದಾರೆ.</p><p>‘ಈ ಬೆಳವಣಿಗೆಗಳಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಜಿಲ್ಲೆಯ ಬಗ್ಗೆ ತೋರಿದ ನಿರ್ಲಕ್ಷ್ಯ ಧೋರಣೆಯೇ ಕಾರಣ. ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ರಾಜ್ಯ ಸರ್ಕಾರದ ಪ್ರತಿನಿಧಿಗಳು ಉಡುಪಿಯ ಪರ್ಯಾಯ ಶೋಭಾಯಾತ್ರೆಗೆ ಚಾಲನೆ ನೀಡುವುದು ಸಂಪ್ರದಾಯ. ಸಚಿವೆ ಈ ಬಾರಿಯ ಪರ್ಯಾಯ ಮಹೋತ್ಸವದ ಬಗ್ಗೆ ಒಂದೇ ಒಂದು ಪೂರ್ವ ಸಿದ್ಧತಾ ಸಭೆಯನ್ನೂ ನಡೆಸಲಿಲ್ಲ’ ಎಂದು ಅವರು ಹೇಳಿದ್ದಾರೆ.</p><p><strong>ನಿರ್ಲಿಪ್ತವಾಗಿರಬೇಕಿತ್ತು:</strong> ‘ಪರ್ಯಾಯ ಮೆರಣಿಗೆಗೆ ಚಾಲನೆ ನೀಡುವಾಗ ಜಿಲ್ಲಾಧಿಕಾರಿ ಅವರು ನಿರ್ಲಿಪ್ತವಾಗಿರಬೇಕಿತ್ತು. ಜಿಲ್ಲಾಧಿಕಾರಿಯಿಂದ ಯಾವ ಕೆಲಸ ಮಾಡಿಸಬೇಕು ಎಂಬುದು ಶಾಸಕ ಯಶ್ಪಾಲ್ ಸುವರ್ಣ ಅವರಿಗೂ ತಿಳಿದಿರಬೇಕಿತ್ತು’ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರತಿಕ್ರಿಯಿಸಿದ್ದಾರೆ.</p><p>‘ಹಿಂದೆ ಸಿಡಿಮದ್ದು ಸಿಡಿಸಿ ಪರ್ಯಾಯ ಮೆರವಣಿಗೆಗೆ ಚಾಲನೆ ನೀಡಲಾಗುತ್ತಿತ್ತು. ಈ ಸಲ ಜಿಲ್ಲಾಧಿಕಾರಿ ಅವರು ಭಗವಾಧ್ವಜ ಹಾರಿಸಿ ಚಾಲನೆ ನೀಡಿದ್ದಾರೆ. ಈ ಬಾರಿ ಮುಸ್ಲಿಮರು ಪರ್ಯಾಯಕ್ಕೆ ಹೊರೆಕಾಣಿಕೆ ಕೊಡುತ್ತೇವೆ ಅಂದಾಗ ಶಾಸಕರು ನಿರಾಕರಿಸಿದ್ದರು. ಸರ್ಕಾರ ಪರ್ಯಾಯಕ್ಕಾಗಿ ₹6 ಕೋಟಿ ಬಿಡುಗಡೆ ಮಾಡಿದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>