<p><strong>ಬೆಂಗಳೂರು:</strong> ಪೆಟ್ರೋಲ್, ಡೀಸೆಲ್ ಬೆಲೆ ಗಗನಚುಂಬಿಯಾಗಿರುವುದಕ್ಕೆ ದೇಶದಾದ್ಯಂತ ಬಂದ್ ಆಚರಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಕ್ಕೂ ಈ ಬಂದ್ ಬಿಸಿ ತಟ್ಟಿದ್ದು, ಬೆಲೆ ಏರಿಕೆಗೆ ಯಾರು ಹೊಣೆಗಾರರು ಎನ್ನುವ ಚರ್ಚೆ ಅಲ್ಲಿ ಕಾವು ಪಡೆದುಕೊಂಡಿದೆ.</p>.<p>‘ಪೆಟ್ರೋಲ್ ದರದ ವಿರುದ್ಧ ಬ೦ದ್ ಮಾಡ್ದೀವಿ ಅ೦ತ ಕಾ೦ಗ್ರೇಸನವರೇ ಬೀಗಬೇಡಿ. 2013ರಲ್ಲಿ ಪೆಟ್ರೋಲ್ ದರ ₹80 ದಾಟಿದ್ದನ್ನು ನೋಡಿದ್ದೇವೆ...’ ಎಂದು ಪ್ರಶಾಂತ್ ಎನ್ನುವವರು ಟ್ವೀಟ್ ಮಾಡಿದ್ದಾರೆ.</p>.<p>ಪೆಟ್ರೋಲ್ ಬೆಲೆ ಏರಿಕೆ ಬಗ್ಗೆಕಾಂಗ್ರೆಸ್ ಸಾಮಾಜಿಕ ಮಾಧ್ಯಮಗಳ ನಿರ್ವಹಣೆ ಉಸ್ತುವರಿ ವಹಿಸಿರುವ ರಮ್ಯಾ ಸರಣಿ ಟ್ವೀಟ್ಗಳನ್ನು ಮಾಡಿದ್ದು, ಎನ್ಡಿಎ ಅಧಿಕಾರಕ್ಕೆ ಬಂದ ನಂತರ ತೈಲ ಬೆಲೆ ಹೆಚ್ಚಾಗಿದೆ ಎಂಬುದನ್ನು ಪ್ರತಿಪಾದಿಸಿದ್ದಾರೆ.</p>.<p>‘ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಕೇವಲ ಅದಕ್ಕಷ್ಟೇ ಸೀಮಿತವಾಗಿರುವುದಿಲ್ಲ. ಸಾರಿಗೆ, ಸರಕು ಸಾಗಣೆ, ಆಹಾರ ಪದಾರ್ಥಗಳು... ಹೀಗೆ ಕೊಂಡಿಯಂತೆ ಎಲ್ಲಾ ಪದಾರ್ಥಗಳ ಬೆಲೆ ಏರುತ್ತದೆ’ ಎಂದು ಗೀತಾ ಎನ್ನುವವರು ಫೇಸ್ಬುಕ್ನಲ್ಲಿಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>‘ಅವತ್ತು ದುಡಿದು ಅವತ್ತಿನ ಜೀವನ ನಡೆಸುವ ಸಣ್ಣಪುಟ್ಟ ಅಂಗಡಿಗಳು-ಹೋಟೆಲ್ಗಳನ್ನು ಮುಚ್ಚಿಸಿ, ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಮಹಿಮೆಯ ‘ಇಂದಿರಾ ಕ್ಯಾಂಟೀನ್’ಗಳನ್ನು ಬಿಟ್ಟಿರುವುದು ಡಬಲ್ ಸ್ಟ್ಯಾಂಡರ್ಡ್ ಅಲ್ಲವೇ?’ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಬರೆದುಕೊಂಡಿರುವ ಪೋಸ್ಟ್ವಿರೋಧಿಸಿ ಅನೇಕರು ಕಮೆಂಟ್ ಹಾಕಿದ್ದಾರೆ.</p>.<p>‘ಸಾರ್ ನಿಮ್ಮದು ಕೇವಲ ಪ್ರಶ್ನೆಗಳೇ ಹೊರತು ಉತ್ತರಗಳಿಲ್ಲ.... ಕಾಂಗ್ರೆಸ್ನವರು ಲೋಕಲ್ ಕಳ್ಳರು. ನಿಮ್ಮ ಪಕ್ಷದವರು ಸ್ಟ್ಯಾಂಡರ್ಡ್ ಕಳ್ಳರು’ ಎಂದು ಗೋವಿಂದ ರಾಜ್ ಪ್ರತಿಕ್ರಿಯಿಸಿದ್ದಾರೆ.</p>.<p>‘ಪ್ರತಿಭಟನೆ, ಬಂದ್ಗಳನ್ನು ತಮ್ಮ ಪಕ್ಷದವರು ನಾಲ್ಕೈದು ವರ್ಷಗಳ ಹಿಂದೆ ಮಾಡಿದ್ದಾಗ, ಇದೇ ರೀತಿ ಸೂಕ್ಮತೆಯಿಂದ ಪ್ರತಿಕ್ರಿಯಿಸಬಹುದಿತ್ತಲ್ಲಾ? ಏಕಿಂತಹ ಡಬಲ್ ಸ್ಟ್ಯಾಂಡರ್ಡ್ ಸೆಲೆಕ್ಟಿವಿಸಮ್?’ ಎಂದು ಪ್ರಸಾದ್ ಮೂರ್ತಿ ಪ್ರಶ್ನಿಸಿದ್ದಾರೆ.</p>.<p>ಅಜಿತ್ ಡಾನಿಲ್ ಎನ್ನುವವರು ಕಮಲದ ಮೇಲೆ‘ನಿಮ್ಮ ತಪ್ಪಿಗೆ ನೀವು ಬೆಲೆ ತೆರುತ್ತಿದ್ದೀರಿ’ ಎನ್ನುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.</p>.<p>‘ಪೆಟ್ರೋಲ್ ಬೆಲೆ ಹೆಚ್ಚಾಯ್ತು ಅರ್ಚಾಡ್ತರೆ.<br />ಆರ್ಥಿಕತೆ ಗೊತ್ತಿಲ್ದೋರು ಕಿರ್ಚಾಡ್ತರೆ.<br />ಗೊತ್ತಿರೋರು ಬಾಯಿ ಮುಚ್ಕೊಂಡ್ ಕೂತಿರ್ತಾರೆ.<br />ಹೇಗೋ ಮಾಡಿ ಜನರ ದಾರಿ ತಪ್ಪಿಸ್ತಾರೆ.<br />ಹಾಗೋ-ಹೀಗೊ ಮಾಡಿ ಖುರ್ಚಿ ಹಿಡ್ಕೋತಾರೆ.<br />ಅಧಿಕಾರ ಹಿಡಿದ್ಮೇಲೆ ಎಲ್ಲಾ ಮರ್ತೋಗ್ತಾರೆ.<br />ಸಾಮಾನ್ಯ ಜನ ಮಾತ್ರ ಬಾಯ್ ಬಾಯ್ ಬಡ್ಕೋತಾರೆ’ </p>.<p>–ಹೀಗೆಂದು ಜಗದೀಶ್ ಎನ್ನುವವರು ಟ್ವೀಟ್ ಮಾಡಿದ್ದಾರೆ.</p>.<p><strong>ಟ್ರೋಲ್ಗಳು ಸದ್ದು</strong></p>.<p>ಬಂದ್ ಕುರಿತ ಟ್ರೋಲ್ಗಳೂ ಸದ್ದು ಮಾಡುತ್ತಿದ್ದು,‘ಬೆಂಗಳೂರಿನಲ್ಲಿ ಬಹಳಷ್ಟು ಬಾರಿ ಕೇಳುವ ಪ್ರಶ್ನೆಯೆಂದರೆ... ಇವತ್ತು ಬಂದ್ ಇದಿಯಾ?’ , ‘ಯಾವುದರ ಬೆಲೆ ಹೆಚ್ಚಾದರೂ ಒಂದೇ ಪರಿಹಾರ ಬಂದ್’.. ಎಂಬ ಟ್ರೋಲ್ಗಳು ವಾಟ್ಸ್ಆ್ಯಪ್ಗಳಲ್ಲಿ ಹರಿದಾಡುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೆಟ್ರೋಲ್, ಡೀಸೆಲ್ ಬೆಲೆ ಗಗನಚುಂಬಿಯಾಗಿರುವುದಕ್ಕೆ ದೇಶದಾದ್ಯಂತ ಬಂದ್ ಆಚರಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಕ್ಕೂ ಈ ಬಂದ್ ಬಿಸಿ ತಟ್ಟಿದ್ದು, ಬೆಲೆ ಏರಿಕೆಗೆ ಯಾರು ಹೊಣೆಗಾರರು ಎನ್ನುವ ಚರ್ಚೆ ಅಲ್ಲಿ ಕಾವು ಪಡೆದುಕೊಂಡಿದೆ.</p>.<p>‘ಪೆಟ್ರೋಲ್ ದರದ ವಿರುದ್ಧ ಬ೦ದ್ ಮಾಡ್ದೀವಿ ಅ೦ತ ಕಾ೦ಗ್ರೇಸನವರೇ ಬೀಗಬೇಡಿ. 2013ರಲ್ಲಿ ಪೆಟ್ರೋಲ್ ದರ ₹80 ದಾಟಿದ್ದನ್ನು ನೋಡಿದ್ದೇವೆ...’ ಎಂದು ಪ್ರಶಾಂತ್ ಎನ್ನುವವರು ಟ್ವೀಟ್ ಮಾಡಿದ್ದಾರೆ.</p>.<p>ಪೆಟ್ರೋಲ್ ಬೆಲೆ ಏರಿಕೆ ಬಗ್ಗೆಕಾಂಗ್ರೆಸ್ ಸಾಮಾಜಿಕ ಮಾಧ್ಯಮಗಳ ನಿರ್ವಹಣೆ ಉಸ್ತುವರಿ ವಹಿಸಿರುವ ರಮ್ಯಾ ಸರಣಿ ಟ್ವೀಟ್ಗಳನ್ನು ಮಾಡಿದ್ದು, ಎನ್ಡಿಎ ಅಧಿಕಾರಕ್ಕೆ ಬಂದ ನಂತರ ತೈಲ ಬೆಲೆ ಹೆಚ್ಚಾಗಿದೆ ಎಂಬುದನ್ನು ಪ್ರತಿಪಾದಿಸಿದ್ದಾರೆ.</p>.<p>‘ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಕೇವಲ ಅದಕ್ಕಷ್ಟೇ ಸೀಮಿತವಾಗಿರುವುದಿಲ್ಲ. ಸಾರಿಗೆ, ಸರಕು ಸಾಗಣೆ, ಆಹಾರ ಪದಾರ್ಥಗಳು... ಹೀಗೆ ಕೊಂಡಿಯಂತೆ ಎಲ್ಲಾ ಪದಾರ್ಥಗಳ ಬೆಲೆ ಏರುತ್ತದೆ’ ಎಂದು ಗೀತಾ ಎನ್ನುವವರು ಫೇಸ್ಬುಕ್ನಲ್ಲಿಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p>‘ಅವತ್ತು ದುಡಿದು ಅವತ್ತಿನ ಜೀವನ ನಡೆಸುವ ಸಣ್ಣಪುಟ್ಟ ಅಂಗಡಿಗಳು-ಹೋಟೆಲ್ಗಳನ್ನು ಮುಚ್ಚಿಸಿ, ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಮಹಿಮೆಯ ‘ಇಂದಿರಾ ಕ್ಯಾಂಟೀನ್’ಗಳನ್ನು ಬಿಟ್ಟಿರುವುದು ಡಬಲ್ ಸ್ಟ್ಯಾಂಡರ್ಡ್ ಅಲ್ಲವೇ?’ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಬರೆದುಕೊಂಡಿರುವ ಪೋಸ್ಟ್ವಿರೋಧಿಸಿ ಅನೇಕರು ಕಮೆಂಟ್ ಹಾಕಿದ್ದಾರೆ.</p>.<p>‘ಸಾರ್ ನಿಮ್ಮದು ಕೇವಲ ಪ್ರಶ್ನೆಗಳೇ ಹೊರತು ಉತ್ತರಗಳಿಲ್ಲ.... ಕಾಂಗ್ರೆಸ್ನವರು ಲೋಕಲ್ ಕಳ್ಳರು. ನಿಮ್ಮ ಪಕ್ಷದವರು ಸ್ಟ್ಯಾಂಡರ್ಡ್ ಕಳ್ಳರು’ ಎಂದು ಗೋವಿಂದ ರಾಜ್ ಪ್ರತಿಕ್ರಿಯಿಸಿದ್ದಾರೆ.</p>.<p>‘ಪ್ರತಿಭಟನೆ, ಬಂದ್ಗಳನ್ನು ತಮ್ಮ ಪಕ್ಷದವರು ನಾಲ್ಕೈದು ವರ್ಷಗಳ ಹಿಂದೆ ಮಾಡಿದ್ದಾಗ, ಇದೇ ರೀತಿ ಸೂಕ್ಮತೆಯಿಂದ ಪ್ರತಿಕ್ರಿಯಿಸಬಹುದಿತ್ತಲ್ಲಾ? ಏಕಿಂತಹ ಡಬಲ್ ಸ್ಟ್ಯಾಂಡರ್ಡ್ ಸೆಲೆಕ್ಟಿವಿಸಮ್?’ ಎಂದು ಪ್ರಸಾದ್ ಮೂರ್ತಿ ಪ್ರಶ್ನಿಸಿದ್ದಾರೆ.</p>.<p>ಅಜಿತ್ ಡಾನಿಲ್ ಎನ್ನುವವರು ಕಮಲದ ಮೇಲೆ‘ನಿಮ್ಮ ತಪ್ಪಿಗೆ ನೀವು ಬೆಲೆ ತೆರುತ್ತಿದ್ದೀರಿ’ ಎನ್ನುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.</p>.<p>‘ಪೆಟ್ರೋಲ್ ಬೆಲೆ ಹೆಚ್ಚಾಯ್ತು ಅರ್ಚಾಡ್ತರೆ.<br />ಆರ್ಥಿಕತೆ ಗೊತ್ತಿಲ್ದೋರು ಕಿರ್ಚಾಡ್ತರೆ.<br />ಗೊತ್ತಿರೋರು ಬಾಯಿ ಮುಚ್ಕೊಂಡ್ ಕೂತಿರ್ತಾರೆ.<br />ಹೇಗೋ ಮಾಡಿ ಜನರ ದಾರಿ ತಪ್ಪಿಸ್ತಾರೆ.<br />ಹಾಗೋ-ಹೀಗೊ ಮಾಡಿ ಖುರ್ಚಿ ಹಿಡ್ಕೋತಾರೆ.<br />ಅಧಿಕಾರ ಹಿಡಿದ್ಮೇಲೆ ಎಲ್ಲಾ ಮರ್ತೋಗ್ತಾರೆ.<br />ಸಾಮಾನ್ಯ ಜನ ಮಾತ್ರ ಬಾಯ್ ಬಾಯ್ ಬಡ್ಕೋತಾರೆ’ </p>.<p>–ಹೀಗೆಂದು ಜಗದೀಶ್ ಎನ್ನುವವರು ಟ್ವೀಟ್ ಮಾಡಿದ್ದಾರೆ.</p>.<p><strong>ಟ್ರೋಲ್ಗಳು ಸದ್ದು</strong></p>.<p>ಬಂದ್ ಕುರಿತ ಟ್ರೋಲ್ಗಳೂ ಸದ್ದು ಮಾಡುತ್ತಿದ್ದು,‘ಬೆಂಗಳೂರಿನಲ್ಲಿ ಬಹಳಷ್ಟು ಬಾರಿ ಕೇಳುವ ಪ್ರಶ್ನೆಯೆಂದರೆ... ಇವತ್ತು ಬಂದ್ ಇದಿಯಾ?’ , ‘ಯಾವುದರ ಬೆಲೆ ಹೆಚ್ಚಾದರೂ ಒಂದೇ ಪರಿಹಾರ ಬಂದ್’.. ಎಂಬ ಟ್ರೋಲ್ಗಳು ವಾಟ್ಸ್ಆ್ಯಪ್ಗಳಲ್ಲಿ ಹರಿದಾಡುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>