ಇದರಿಂದಾಗಿ ಚಿಂತಾಮಣಿಯಲ್ಲಿ ಸ್ವಲ್ಪ ಸಮಯ ಪರಿಸ್ಥಿತಿ ಬಿಗುವಿನಿಂದ ಕೂಡಿತ್ತು. ಇದನ್ನು ಹೊರತುಪಡಿಸಿದರೆ, ಜಿಲ್ಲೆಯಲ್ಲಿ ಮುಷ್ಕರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ.ಸಿಪಿಎಂ, ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಜನವಾದಿ ಮಹಿಳಾ ಸಂಘಟನೆ ಜಿಲ್ಲೆಯಲ್ಲಿ ಬುಧವಾರ ಜಿಲ್ಲಾ ಬಂದ್ ನಡೆಸಲು ತೀರ್ಮಾನಿಸಿ ಪ್ರಚಾರ ಕೂಡ ನಡೆಸಿದ್ದವು.ಆದರೆ ಬಂದ್ ನಡೆಸಲು ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿತು.