ಬೆಂಗಳೂರು: ‘ಎರಡು ಮಕ್ಕಳಿದ್ದವರಿಗೆ ಮಾತ್ರ ಸರ್ಕಾರದ ಸೌಲಭ್ಯಗಳನ್ನು ನೀಡುವ ಬಗ್ಗೆ ರಾಜ್ಯ ಸರ್ಕಾರ ಅಗತ್ಯ ನಿಯಮಗಳನ್ನು ರೂಪಿಸಬೇಕು ಎಂದು ಬಿಜೆಪಿ ಸದಸ್ಯ ಭಾರತಿ ಶೆಟ್ಟಿ ಆಗ್ರಹಿಸಿದ್ದಾರೆ.
ವಿಧಾನಪರಿಷತ್ನಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ‘ಸರ್ಕಾರಿ ಸವಲತ್ತುಗಳು ಮತ್ತು ಸಬ್ಸಿಡಿಗಳನ್ನು ಪಡೆದುಕೊಳ್ಳಲುಜನಸಂಖ್ಯೆ ಮಿತಿ ಹೇರುವುದು ಅಗತ್ಯವಿದೆ. ಉತ್ತರ ಪ್ರದೇಶ ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ’ ಎಂದರು.
ಇದಕ್ಕೆ ಸರ್ಕಾರದ ಪರ ಪ್ರತಿಕ್ರಿಯಿಸಿದ ನಗರಾಭಿವೃದ್ಧಿ ಸಚಿವಬೈರತಿ ಬಸವರಾಜ, ಈ ಬಗ್ಗೆ ಮುಖ್ಯಮಂತ್ರಿ ಅವರಿಂದ ಉತ್ತರ ಕೊಡಿಸುವುದಾಗಿ ಭರವಸೆ ನೀಡಿದರು.