<p><strong>ಬೆಂಗಳೂರು:</strong> ಸಾಲುಮರದ ತಿಮ್ಮಕ್ಕ ಅವರ ಸ್ಮರಣಾರ್ಥ ಪೀಣ್ಯದ ಶಾಲೆಯಲ್ಲಿ ಭಾರತಿದರ್ಶ್ ಫೌಂಡೇಷನ್ ವತಿಯಿಂದ ಆಲದ ಸಸಿ ನೆಡುವಿಕೆ ಮತ್ತು ಶಾಲಾ ಮಕ್ಕಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ಗುರುವಾರ ನಡೆಯಿತು.</p>.<p>ಎಲ್.ಬಿ.ಎಸ್. ಆಟೊಮೇಷನ್ ಸಿಸ್ಟಮ್ ಮಾಲೀಕ ಎನ್.ಕೆ. ಬಸವರಾಜ, ಪಿ.ಎಂ. ಲೀಲಾವತಿ, ಭೂಷಣ್, ಮೋನಿಕಾ ಪ್ರಮೋದ್ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಸಾಲುಮರದ ತಿಮ್ಮಕ್ಕ ಅವರ ಬದುಕಿನ ಸಾಧನೆಯನ್ನು ನೆನಪಿಸಿಕೊಂಡು, ಆಲದ ಸಸಿಗೆ ನೀರು ಹಾಕಿ ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು. 500ಕ್ಕೂ ಹೆಚ್ಚು ಮಕ್ಕಳಿಗೆ ದಂತ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಯಿತು.</p>.<p>‘ಸಾಲುಮರದ ತಿಮ್ಮಕ್ಕ ಅವರ ನೆನಪಿನಲ್ಲಿ ಮುಂದಿನ ಎರಡು ವರ್ಷಗಳಲ್ಲಿ 10 ಸಾವಿರ ಆಲದ ಸಸಿಗಳನ್ನು ನೆಡುವ ಗುರಿಯಿದೆ’ ಎಂದೂ ಭಾರತಿದರ್ಶ್ ಫೌಂಡೇಷನ್ನ ಶೈಲೇಂದ್ರ ಪಾಟೀಲ್ ಹೇಳಿದರು.</p>.<p>‘ಉಚಿತವಾಗಿ ಶಸ್ತ್ರಚಿಕಿತ್ಸೆ, ವೃದ್ಧಾಶ್ರಮ ಸೌಲಭ್ಯ, ಬಡ ಮಕ್ಕಳಿಗೆ ಉಚಿತ ಶಿಕ್ಷಣ, ಬಡ ರೋಗಿಗಳಿಗೆ ಉಚಿತ ಆಂಬುಲೆನ್ಸ್ ವ್ಯವಸ್ಥೆ, ಕುಡಿಯುವ ನೀರು, ಪ್ಲಾಸ್ಟಿಕ್ ಮುಕ್ತ ಬೆಂಗಳೂರು, ವಿಕಲಾಂಗ ಮಕ್ಕಳ ಸಮಸ್ಯೆ, ಉಚಿತ ಕಾನೂನು ಸಲಹೆಗಾಗಿ ನಮ್ಮ ಜಾಲ ತಾಣವನ್ನು contact@bharathidarshfoundation.com ಸಂಪರ್ಕಿಸಬಹುದು’ ಎಂದೂ ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಮಂಜುನಾಥ್, ನರಸಮ್ಮ, ಎಂ. ಮುನಿರಾಜು ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾಲುಮರದ ತಿಮ್ಮಕ್ಕ ಅವರ ಸ್ಮರಣಾರ್ಥ ಪೀಣ್ಯದ ಶಾಲೆಯಲ್ಲಿ ಭಾರತಿದರ್ಶ್ ಫೌಂಡೇಷನ್ ವತಿಯಿಂದ ಆಲದ ಸಸಿ ನೆಡುವಿಕೆ ಮತ್ತು ಶಾಲಾ ಮಕ್ಕಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ಗುರುವಾರ ನಡೆಯಿತು.</p>.<p>ಎಲ್.ಬಿ.ಎಸ್. ಆಟೊಮೇಷನ್ ಸಿಸ್ಟಮ್ ಮಾಲೀಕ ಎನ್.ಕೆ. ಬಸವರಾಜ, ಪಿ.ಎಂ. ಲೀಲಾವತಿ, ಭೂಷಣ್, ಮೋನಿಕಾ ಪ್ರಮೋದ್ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಸಾಲುಮರದ ತಿಮ್ಮಕ್ಕ ಅವರ ಬದುಕಿನ ಸಾಧನೆಯನ್ನು ನೆನಪಿಸಿಕೊಂಡು, ಆಲದ ಸಸಿಗೆ ನೀರು ಹಾಕಿ ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು. 500ಕ್ಕೂ ಹೆಚ್ಚು ಮಕ್ಕಳಿಗೆ ದಂತ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಯಿತು.</p>.<p>‘ಸಾಲುಮರದ ತಿಮ್ಮಕ್ಕ ಅವರ ನೆನಪಿನಲ್ಲಿ ಮುಂದಿನ ಎರಡು ವರ್ಷಗಳಲ್ಲಿ 10 ಸಾವಿರ ಆಲದ ಸಸಿಗಳನ್ನು ನೆಡುವ ಗುರಿಯಿದೆ’ ಎಂದೂ ಭಾರತಿದರ್ಶ್ ಫೌಂಡೇಷನ್ನ ಶೈಲೇಂದ್ರ ಪಾಟೀಲ್ ಹೇಳಿದರು.</p>.<p>‘ಉಚಿತವಾಗಿ ಶಸ್ತ್ರಚಿಕಿತ್ಸೆ, ವೃದ್ಧಾಶ್ರಮ ಸೌಲಭ್ಯ, ಬಡ ಮಕ್ಕಳಿಗೆ ಉಚಿತ ಶಿಕ್ಷಣ, ಬಡ ರೋಗಿಗಳಿಗೆ ಉಚಿತ ಆಂಬುಲೆನ್ಸ್ ವ್ಯವಸ್ಥೆ, ಕುಡಿಯುವ ನೀರು, ಪ್ಲಾಸ್ಟಿಕ್ ಮುಕ್ತ ಬೆಂಗಳೂರು, ವಿಕಲಾಂಗ ಮಕ್ಕಳ ಸಮಸ್ಯೆ, ಉಚಿತ ಕಾನೂನು ಸಲಹೆಗಾಗಿ ನಮ್ಮ ಜಾಲ ತಾಣವನ್ನು contact@bharathidarshfoundation.com ಸಂಪರ್ಕಿಸಬಹುದು’ ಎಂದೂ ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಮಂಜುನಾಥ್, ನರಸಮ್ಮ, ಎಂ. ಮುನಿರಾಜು ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>