<p><strong>ನವದೆಹಲಿ:</strong> ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿ, ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ಜಾಮೀನಿಗಾಗಿಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.</p>.<p>ಪ್ರಕರಣದ 36 ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ನಂತರ ಜಾಮೀನು ಕೋರಿ ಹೊಸದಾಗಿ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಮೂರ್ತಿ ಎಸ್.ಎ. ಬೋಬಡೆ ನೇತೃತ್ವದ ಪೀಠ ತಿಳಿಸಿತು.</p>.<p>ಪ್ರಮುಖ ಆರೋಪಿ, ಹತ್ಯೆಗೀಡಾಗಿರುವ ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕಳೆದ ಏಪ್ರಿಲ್ 23ರಂದು ವಜಾಗೊಳಿಸಿದ್ದ ಪೀಠವು, ಆರು ತಿಂಗಳೊಳಗೆ ಸಾಕ್ಷಿಗಳವಿಚಾರಣೆ ನಡೆಸುವಂತೆ ಅಧೀನ ನ್ಯಾಯಾಲಯಕ್ಕೆ ಸೂಚಿಸಿತ್ತು.</p>.<p>2016ರ ಜುಲೈ 28ರಂದು ಭಾಸ್ಕರ ಶೆಟ್ಟಿ ಅವರನ್ನು ಕೊಲೆ ಮಾಡಿ ಹೋಮಕುಂಡದಲ್ಲಿ ಹಾಕಿ ಸುಡಲಾಗಿತ್ತು. ಶೆಟ್ಟಿ ಅವರ ಪುತ್ರ ನವನೀತ್ ಶೆಟ್ಟಿ ಸಹ ಬಂಧನಕ್ಕೆ ಒಳಗಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿ, ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ಜಾಮೀನಿಗಾಗಿಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.</p>.<p>ಪ್ರಕರಣದ 36 ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ನಂತರ ಜಾಮೀನು ಕೋರಿ ಹೊಸದಾಗಿ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಮೂರ್ತಿ ಎಸ್.ಎ. ಬೋಬಡೆ ನೇತೃತ್ವದ ಪೀಠ ತಿಳಿಸಿತು.</p>.<p>ಪ್ರಮುಖ ಆರೋಪಿ, ಹತ್ಯೆಗೀಡಾಗಿರುವ ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕಳೆದ ಏಪ್ರಿಲ್ 23ರಂದು ವಜಾಗೊಳಿಸಿದ್ದ ಪೀಠವು, ಆರು ತಿಂಗಳೊಳಗೆ ಸಾಕ್ಷಿಗಳವಿಚಾರಣೆ ನಡೆಸುವಂತೆ ಅಧೀನ ನ್ಯಾಯಾಲಯಕ್ಕೆ ಸೂಚಿಸಿತ್ತು.</p>.<p>2016ರ ಜುಲೈ 28ರಂದು ಭಾಸ್ಕರ ಶೆಟ್ಟಿ ಅವರನ್ನು ಕೊಲೆ ಮಾಡಿ ಹೋಮಕುಂಡದಲ್ಲಿ ಹಾಕಿ ಸುಡಲಾಗಿತ್ತು. ಶೆಟ್ಟಿ ಅವರ ಪುತ್ರ ನವನೀತ್ ಶೆಟ್ಟಿ ಸಹ ಬಂಧನಕ್ಕೆ ಒಳಗಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>