<p><strong>ಉಡುಪಿ: </strong>ಕೋವಿಡ್ ಸೋಂಕು ತಗುಲಿದ ಬಳಿಕ ಬಹಳ ಹೆದರಿದ್ದೆ. ಗರ್ಭಿಣಿಯಾಗಿದ್ದರಿಂದ ಆತಂಕ ಹೆಚ್ಚಾಗಿಯೇ ಇತ್ತು. ಚಿಕಿತ್ಸೆಗೆ ದಾಖಲಾದ ಬಳಿಕ ವೈದ್ಯರ ಹಾಗೂ ಶುಶ್ರೂಷಕರ ಶ್ರಮದಿಂದ ಸಂಪೂರ್ಣ ಗುಣಮುಖಳಾಗಿದ್ದೇನೆ. ಸಾಧ್ಯವಾದರೆ, ಹೆರಿಗೆ ಮಾಡಿಸಿಕೊಳ್ಳಲು ಉಡುಪಿಗೇ ಬರುತ್ತೇನೆ. ಇಲ್ಲಿನ ಆಸ್ಪತ್ರೆ ಸಿಬ್ಬಂದಿಗೆ ಹಾಗೂ ಜಿಲ್ಲಾಡಳಿತಕ್ಕೆ ಧನ್ಯವಾದ..</p>.<p>ಹೀಗೆ, ಕೋವಿಡ್ ಸೋಂಕಿಗೆ ತುತ್ತಾಗಿ ಗುಣಮುಖರಾದ ಬಳಿಕ ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಂದರ್ಭ ಭಟ್ಕಳದ ಮಹಿಳೆ ಮಾಧ್ಯಮದ ಎದುರು ಭಾವುಕರಾದರು.</p>.<p>ಉಡುಪಿಯಲ್ಲಿ ಸಿಕ್ಕ ವೈದ್ಯಕೀಯ ನೆರವನ್ನು ಮರೆಯುವುದಿಲ್ಲ. ವೈದ್ಯರ ಸೇವೆ ಹಾಗೂ ಪರಿಶ್ರಮಕ್ಕೆ ಬೆಲೆ ಕಟ್ಟಲಾಗದು. ಆಸ್ಪತ್ರೆಯಲ್ಲಿದ್ದಷ್ಟು ದಿನ ಮನೆಯಲ್ಲಿಯೇ ಇದ್ದಂತಹ ಅನುಭವವಾಯಿತು. ಪ್ರತಿದಿನ ನನ್ನ ಆರೋಗ್ಯದ ಬಗ್ಗೆ ಬಹಳ ಕಾಳಜಿ ವಹಿಸಿದರು ಎಂದರು.</p>.<p>ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ‘ಉಡುಪಿಗೆ ಶುಕ್ರವಾರ ಶುಭ ದಿನ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕೋವಿಡ್ ಸೋಂಕಿತ ಗರ್ಭಿಣಿಗೆ ಅಲ್ಲಿ ಅಗತ್ಯ ಚಿಕಿತ್ಸೆ ಸಿಗದಿದ್ದಾಗ,ಉಡುಪಿಗೆ ಕರೆತಂದು ಚಿಕಿತ್ಸೆ ಕೊಡಲಾಯಿತು. ಮಹಿಳೆ ಸೋಂಕಿನಿಂದ ಗುಣಮುಖರಾಗಿದ್ದು, ಅವರ ಜಿಲ್ಲೆಗೆ ಸಂಭ್ರಮದಿಂದ ಬೀಳ್ಕೊಟ್ಟಿದ್ದೇವೆ’ ಎಂದರು.</p>.<p>ನೆರೆ ಜಿಲ್ಲೆಯ ಸೋಂಕಿತ ಮಹಿಳೆಯನ್ನು ಉಡುಪಿಗೆ ಕರೆತರುವ ನಿರ್ಧಾರಕ್ಕೆ ಜಿಲ್ಲಾಡಳಿತ ಮೊದಲು ಒಪ್ಪಿರಲಿಲ್ಲ. ಕಾರಣ, ಕೋವಿಡ್ ಆಸ್ಪತ್ರೆಯಲ್ಲಿ ಜಿಲ್ಲೆಯ ಸೋಂಕಿತರಿಗೆ ಮಾತ್ರ ಚಿಕಿತ್ಸೆ ನೀಡುವುದಾಗಿ ಡಾ.ಟಿಎಂಎ ಪೈ ಆಸ್ಪತ್ರೆಯ ಜತೆ ಜಿಲ್ಲಾಡಳಿತ ಒಪ್ಪಂದ ಮಾಡಿಕೊಂಡಿತ್ತು.</p>.<p>ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಗಳ ಸೂಚನೆ ಮೇರೆಗೆ ಮಹಿಳೆಯನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಯಿತು. ಮಹಿಳೆಯ ಎರಡೂ ವರದಿಗಳು ನೆಗೆಟಿವ್ ಬಂದಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದೇವೆ. ಡಾ.ಶಶಿಕಿರಣ್ ನೇತೃತ್ವದ ತಂಡಕ್ಕೆ ಜಿಲ್ಲಾಡಳಿತ ಅಭಿನಂದನೆ ಸಲ್ಲಿಸುತ್ತದೆ ಎಂದರು.</p>.<p><strong>ಸಾಂಪ್ರದಾಯಿಕ ಬೀಳ್ಕೊಡುಗೆ:</strong>ಗುಣಮುಖರಾದ ಗರ್ಭಿಣಿಗೆ ಉಡುಪಿ ಮಲ್ಲಿಗೆ, ಹೂ–ಹಣ್ಣು, ಸಿಹಿ ತಿನಿಸುಗಳನ್ನು ನೀಡಿ ಸಾಂಪ್ರದಾಯಿಕವಾಗಿ ಬೀಳ್ಕೊಡಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್, ಎಸ್ಪಿ ವಿಷ್ಣುವರ್ಧನ್, ಡಿಎಚ್ಒ ಸುಧೀರ್ ಚಂದ್ರ ಸೂಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ಶುಭ ಹಾರೈಸಿ ಮಹಿಳೆಯನ್ನು ಭಟ್ಕಳಕ್ಕೆ ಕಳುಹಿಸಿದರು.</p>.<p><strong>ದಾಖಲಾಗಿದ್ದು ಯಾವಾಗ</strong><br />ಮಹಿಳೆಯು ಏ.9ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. 21ರಂದು ಮೊದಲ ಪರೀಕ್ಷಾ ವರದಿ ನೆಗೆಟಿವ್ ಬಂದಿತ್ತು. 23ರಂದು ಎರಡನೇ ಪರೀಕ್ಷಾ ವರದಿ ಕೂಡ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ 24 ಡಿಸ್ಚಾರ್ಜ್ ಮಾಡಲಾಯಿತು.</p>.<p>ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಡಾ. ಪ್ರೇಮಾನಂದ್, ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಕೋವಿಡ್ ಆಸ್ಪತ್ರೆಯ ಡಾ. ಶಶಿ ಕಿರಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಕೋವಿಡ್ ಸೋಂಕು ತಗುಲಿದ ಬಳಿಕ ಬಹಳ ಹೆದರಿದ್ದೆ. ಗರ್ಭಿಣಿಯಾಗಿದ್ದರಿಂದ ಆತಂಕ ಹೆಚ್ಚಾಗಿಯೇ ಇತ್ತು. ಚಿಕಿತ್ಸೆಗೆ ದಾಖಲಾದ ಬಳಿಕ ವೈದ್ಯರ ಹಾಗೂ ಶುಶ್ರೂಷಕರ ಶ್ರಮದಿಂದ ಸಂಪೂರ್ಣ ಗುಣಮುಖಳಾಗಿದ್ದೇನೆ. ಸಾಧ್ಯವಾದರೆ, ಹೆರಿಗೆ ಮಾಡಿಸಿಕೊಳ್ಳಲು ಉಡುಪಿಗೇ ಬರುತ್ತೇನೆ. ಇಲ್ಲಿನ ಆಸ್ಪತ್ರೆ ಸಿಬ್ಬಂದಿಗೆ ಹಾಗೂ ಜಿಲ್ಲಾಡಳಿತಕ್ಕೆ ಧನ್ಯವಾದ..</p>.<p>ಹೀಗೆ, ಕೋವಿಡ್ ಸೋಂಕಿಗೆ ತುತ್ತಾಗಿ ಗುಣಮುಖರಾದ ಬಳಿಕ ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಂದರ್ಭ ಭಟ್ಕಳದ ಮಹಿಳೆ ಮಾಧ್ಯಮದ ಎದುರು ಭಾವುಕರಾದರು.</p>.<p>ಉಡುಪಿಯಲ್ಲಿ ಸಿಕ್ಕ ವೈದ್ಯಕೀಯ ನೆರವನ್ನು ಮರೆಯುವುದಿಲ್ಲ. ವೈದ್ಯರ ಸೇವೆ ಹಾಗೂ ಪರಿಶ್ರಮಕ್ಕೆ ಬೆಲೆ ಕಟ್ಟಲಾಗದು. ಆಸ್ಪತ್ರೆಯಲ್ಲಿದ್ದಷ್ಟು ದಿನ ಮನೆಯಲ್ಲಿಯೇ ಇದ್ದಂತಹ ಅನುಭವವಾಯಿತು. ಪ್ರತಿದಿನ ನನ್ನ ಆರೋಗ್ಯದ ಬಗ್ಗೆ ಬಹಳ ಕಾಳಜಿ ವಹಿಸಿದರು ಎಂದರು.</p>.<p>ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ‘ಉಡುಪಿಗೆ ಶುಕ್ರವಾರ ಶುಭ ದಿನ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕೋವಿಡ್ ಸೋಂಕಿತ ಗರ್ಭಿಣಿಗೆ ಅಲ್ಲಿ ಅಗತ್ಯ ಚಿಕಿತ್ಸೆ ಸಿಗದಿದ್ದಾಗ,ಉಡುಪಿಗೆ ಕರೆತಂದು ಚಿಕಿತ್ಸೆ ಕೊಡಲಾಯಿತು. ಮಹಿಳೆ ಸೋಂಕಿನಿಂದ ಗುಣಮುಖರಾಗಿದ್ದು, ಅವರ ಜಿಲ್ಲೆಗೆ ಸಂಭ್ರಮದಿಂದ ಬೀಳ್ಕೊಟ್ಟಿದ್ದೇವೆ’ ಎಂದರು.</p>.<p>ನೆರೆ ಜಿಲ್ಲೆಯ ಸೋಂಕಿತ ಮಹಿಳೆಯನ್ನು ಉಡುಪಿಗೆ ಕರೆತರುವ ನಿರ್ಧಾರಕ್ಕೆ ಜಿಲ್ಲಾಡಳಿತ ಮೊದಲು ಒಪ್ಪಿರಲಿಲ್ಲ. ಕಾರಣ, ಕೋವಿಡ್ ಆಸ್ಪತ್ರೆಯಲ್ಲಿ ಜಿಲ್ಲೆಯ ಸೋಂಕಿತರಿಗೆ ಮಾತ್ರ ಚಿಕಿತ್ಸೆ ನೀಡುವುದಾಗಿ ಡಾ.ಟಿಎಂಎ ಪೈ ಆಸ್ಪತ್ರೆಯ ಜತೆ ಜಿಲ್ಲಾಡಳಿತ ಒಪ್ಪಂದ ಮಾಡಿಕೊಂಡಿತ್ತು.</p>.<p>ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಗಳ ಸೂಚನೆ ಮೇರೆಗೆ ಮಹಿಳೆಯನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಯಿತು. ಮಹಿಳೆಯ ಎರಡೂ ವರದಿಗಳು ನೆಗೆಟಿವ್ ಬಂದಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದೇವೆ. ಡಾ.ಶಶಿಕಿರಣ್ ನೇತೃತ್ವದ ತಂಡಕ್ಕೆ ಜಿಲ್ಲಾಡಳಿತ ಅಭಿನಂದನೆ ಸಲ್ಲಿಸುತ್ತದೆ ಎಂದರು.</p>.<p><strong>ಸಾಂಪ್ರದಾಯಿಕ ಬೀಳ್ಕೊಡುಗೆ:</strong>ಗುಣಮುಖರಾದ ಗರ್ಭಿಣಿಗೆ ಉಡುಪಿ ಮಲ್ಲಿಗೆ, ಹೂ–ಹಣ್ಣು, ಸಿಹಿ ತಿನಿಸುಗಳನ್ನು ನೀಡಿ ಸಾಂಪ್ರದಾಯಿಕವಾಗಿ ಬೀಳ್ಕೊಡಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್, ಎಸ್ಪಿ ವಿಷ್ಣುವರ್ಧನ್, ಡಿಎಚ್ಒ ಸುಧೀರ್ ಚಂದ್ರ ಸೂಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು ಶುಭ ಹಾರೈಸಿ ಮಹಿಳೆಯನ್ನು ಭಟ್ಕಳಕ್ಕೆ ಕಳುಹಿಸಿದರು.</p>.<p><strong>ದಾಖಲಾಗಿದ್ದು ಯಾವಾಗ</strong><br />ಮಹಿಳೆಯು ಏ.9ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. 21ರಂದು ಮೊದಲ ಪರೀಕ್ಷಾ ವರದಿ ನೆಗೆಟಿವ್ ಬಂದಿತ್ತು. 23ರಂದು ಎರಡನೇ ಪರೀಕ್ಷಾ ವರದಿ ಕೂಡ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ 24 ಡಿಸ್ಚಾರ್ಜ್ ಮಾಡಲಾಯಿತು.</p>.<p>ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಡಾ. ಪ್ರೇಮಾನಂದ್, ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಕೋವಿಡ್ ಆಸ್ಪತ್ರೆಯ ಡಾ. ಶಶಿ ಕಿರಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>