<p>ಬೆಂಗಳೂರು: ‘ವನ್ಯಜೀವಿ ದಾಳಿಯ ಭೀತಿಯೊಂದಿಗೆ ನಿತ್ಯ ಬದುಕು ಸಾಗಿಸುತ್ತಿರುವ ಬೆಳಗಾವಿ ಜಿಲ್ಲೆ ಭೀಮಗಢ ವನ್ಯಜೀವಿ ಧಾಮದ ಒಳಗೆ ಇದ್ದ ತಾಳೆವಾಡಿಯ ಗವಳಿ ಗ್ರಾಮದ 27 ಕುಟುಂಬಗಳು ಸ್ವ ಇಚ್ಛೆಯಿಂದ ಸ್ಥಳಾಂತರಕ್ಕೆ ಸಮ್ಮತಿಸಿದ್ದಾರೆ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.</p><p>ಸ್ವಯಂಪ್ರೇರಿತರಾಗಿ ಸಮಾಜದ ಮುಖ್ಯ ವಾಹಿನಿ ಸೇರಲು ಬಯಸಿ ಬಂದಿರುವ 27 ಕುಟುಂಬಗಳಿಗೆ ಮೇ 17ರಂದು ಮೊದಲ ಹಂತದಲ್ಲಿ ತಲಾ ₹10 ಲಕ್ಷ ಚೆಕ್ ವಿತರಿಸಲಾಗುವುದು. ಕುಟುಂಬಗಳು ಸ್ಥಳಾಂತರ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕ ಪ್ರತಿ ಕುಟುಂಬದ ಘಟಕಕ್ಕೆ ಉಳಿದ ₹5 ಲಕ್ಷ ಚೆಕ್ ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p><p>ಕಳೆದ ಡಿಸೆಂಬರ್ನಲ್ಲಿ ಬೆಳಗಾವಿ ಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದ ವೇಳೆ, ಈ ಪ್ರದೇಶಕ್ಕೆ ಭೇಟಿ ನೀಡಿ ಅರಣ್ಯವಾಸಿ ಗಳೊಂದಿಗೆ ಸಂವಾದ ನಡೆಸಿದಾಗ ಸ್ವಯಂ ಪ್ರೇರಿತವಾಗಿ ಕಾಡಿನಿಂದ ಹೊರಬರುವ ಇಂಗಿತ<br>ವ್ಯಕ್ತಪಡಿಸಿದ್ದರು. ನಂತರ ಅವರ ಸ್ಥಳಾಂತರಕ್ಕೆ ಗ್ರಾಮಸಭೆಯಲ್ಲಿ ನಿರ್ಣಯ ಇತ್ಯಾದಿ ಪ್ರಕ್ರಿಯೆಯನ್ನು ಅರಣ್ಯ ಅಧಿಕಾರಿಗಳು ನಡೆಸಿದ್ದರು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ವನ್ಯಜೀವಿ ದಾಳಿಯ ಭೀತಿಯೊಂದಿಗೆ ನಿತ್ಯ ಬದುಕು ಸಾಗಿಸುತ್ತಿರುವ ಬೆಳಗಾವಿ ಜಿಲ್ಲೆ ಭೀಮಗಢ ವನ್ಯಜೀವಿ ಧಾಮದ ಒಳಗೆ ಇದ್ದ ತಾಳೆವಾಡಿಯ ಗವಳಿ ಗ್ರಾಮದ 27 ಕುಟುಂಬಗಳು ಸ್ವ ಇಚ್ಛೆಯಿಂದ ಸ್ಥಳಾಂತರಕ್ಕೆ ಸಮ್ಮತಿಸಿದ್ದಾರೆ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.</p><p>ಸ್ವಯಂಪ್ರೇರಿತರಾಗಿ ಸಮಾಜದ ಮುಖ್ಯ ವಾಹಿನಿ ಸೇರಲು ಬಯಸಿ ಬಂದಿರುವ 27 ಕುಟುಂಬಗಳಿಗೆ ಮೇ 17ರಂದು ಮೊದಲ ಹಂತದಲ್ಲಿ ತಲಾ ₹10 ಲಕ್ಷ ಚೆಕ್ ವಿತರಿಸಲಾಗುವುದು. ಕುಟುಂಬಗಳು ಸ್ಥಳಾಂತರ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕ ಪ್ರತಿ ಕುಟುಂಬದ ಘಟಕಕ್ಕೆ ಉಳಿದ ₹5 ಲಕ್ಷ ಚೆಕ್ ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p><p>ಕಳೆದ ಡಿಸೆಂಬರ್ನಲ್ಲಿ ಬೆಳಗಾವಿ ಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದ ವೇಳೆ, ಈ ಪ್ರದೇಶಕ್ಕೆ ಭೇಟಿ ನೀಡಿ ಅರಣ್ಯವಾಸಿ ಗಳೊಂದಿಗೆ ಸಂವಾದ ನಡೆಸಿದಾಗ ಸ್ವಯಂ ಪ್ರೇರಿತವಾಗಿ ಕಾಡಿನಿಂದ ಹೊರಬರುವ ಇಂಗಿತ<br>ವ್ಯಕ್ತಪಡಿಸಿದ್ದರು. ನಂತರ ಅವರ ಸ್ಥಳಾಂತರಕ್ಕೆ ಗ್ರಾಮಸಭೆಯಲ್ಲಿ ನಿರ್ಣಯ ಇತ್ಯಾದಿ ಪ್ರಕ್ರಿಯೆಯನ್ನು ಅರಣ್ಯ ಅಧಿಕಾರಿಗಳು ನಡೆಸಿದ್ದರು ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>