‘ಗಣಿಗಾರಿಕೆ, ಅರಣ್ಯ ಹಾಗೂ ಪರಿಸರ ಸಂರಕ್ಷಣೆಯ ನೆಪವೊಡ್ಡಿ ಸಮುದಾಯದ ಕುಲಕಸುಬನ್ನೇ ನಿರ್ಬಂಧಿಸಲಾಗಿದೆ. ಹೀಗಾಗಿ ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಕಲ್ಲು–ಬಂಡೆ ಒಡೆದು ಜೀವನ ಸಾಗಿಸುತ್ತಿದ್ದ ಬಡವರ ಮೇಲೆ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಇದರಿಂದ ಅವರು ವರ್ಷಗಟ್ಟಲೇ ನ್ಯಾಯಾಲಯಕ್ಕೆ ಅಲೆಯುವಂತಾಗಿದೆ. ಹೀಗಾಗಿ ಪ್ರಕರಣಗಳನ್ನೆಲ್ಲಾ ಕೂಡಲೇ ಕೈಬಿಡಬೇಕು’ ಎಂದು ಆಗ್ರಹಿಸಿದರು.