<p>ಬೆಂಗಳೂರು:‘ಬಿಡದಿ ಟೌನ್ಶಿಪ್ ಕುರಿತ ಚರ್ಚೆಗೆ ಡಿ.ಕೆ.ಶಿವಕುಮಾರ್ ಅವರು ಸವಾಲು ಹಾಕಿದ್ದರು. ನಾನು ಚರ್ಚೆಗೆ ಸಿದ್ಧನಿದ್ದೇನೆ’ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ಬಿಡದಿ ಚರ್ಚೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಸಿದ್ಧ ನಿದ್ದೇನೆ.ಅವರಿಗೆ ಬಿಡುವಿಲ್ಲ ರೇಟ್ ಫಿಕ್ಸ್, ವಸೂಲಿ ಫಿಕ್ಸ್ ಮಾಡುತ್ತಿದ್ದಾರೆ. ಬಿಡುವು ಮಾಡಿಕೊಂಡು ಚರ್ಚೆಗೆ ಬರಲಿ’ ಎಂದು ಹೇಳಿದರು.</p>.<p>ಇದಕ್ಕೂ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ನಾಯಕರ ಜತೆ ಕುಮಾರಸ್ವಾಮಿ ಸಭೆ ನಡೆಸಿದರು. ಜಿಬಿಎ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.</p>.<p>ಜಾಹ್ನವಿ ಜೆಡಿಎಸ್ ಸೇರ್ಪಡೆ: ಬಿಗ್ಬಾಸ್–12 ರಿಯಾಲಿಟಿ ಷೋ ಮಾಜಿ ಸ್ಪರ್ಧಿ, ಟಿ.ವಿ ನಿರೂಪಕಿ ಜಾಹ್ನವಿ ಅವರು ಭಾನುವಾರ ಜೆಡಿಎಸ್ ಪಕ್ಷಕ್ಕೆ ಸೇರಿದರು.</p>.<p>ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಧ್ವಜ ನೀಡಿ, ಜಾಹ್ನವಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.</p>.<p>ಜೆಡಿಎಸ್ ಮಹಿಳಾ ಘಟಕವನ್ನು ಬಲಪಡಿಸುವ ಸಲುವಾಗಿ ಜಾಹ್ನವಿ ಅವರನ್ನು ಪಕ್ಷಕ್ಕೆ ಕರೆತರಲಾಗಿದೆ. ಜೆಡಿಎಸ್ನ ಸಿದ್ಧಾಂತಗಳ ಬಗ್ಗೆ ಒಲವಿರುವ ಕಾರಣಕ್ಕೆ ಜಾಹ್ನವಿ ಅವರೂ ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಜೆಡಿಎಸ್ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಘಟಕದ ಅಧ್ಯಕ್ಷ ರಮೇಶ್ಗೌಡ, ಮಹಿಳಾ ಘಟಕದ ಅಧ್ಯಕ್ಷ ರಶ್ಮಿ ರಾಮೇಗೌಡ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-51-228432395</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು:‘ಬಿಡದಿ ಟೌನ್ಶಿಪ್ ಕುರಿತ ಚರ್ಚೆಗೆ ಡಿ.ಕೆ.ಶಿವಕುಮಾರ್ ಅವರು ಸವಾಲು ಹಾಕಿದ್ದರು. ನಾನು ಚರ್ಚೆಗೆ ಸಿದ್ಧನಿದ್ದೇನೆ’ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ಬಿಡದಿ ಚರ್ಚೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಸಿದ್ಧ ನಿದ್ದೇನೆ.ಅವರಿಗೆ ಬಿಡುವಿಲ್ಲ ರೇಟ್ ಫಿಕ್ಸ್, ವಸೂಲಿ ಫಿಕ್ಸ್ ಮಾಡುತ್ತಿದ್ದಾರೆ. ಬಿಡುವು ಮಾಡಿಕೊಂಡು ಚರ್ಚೆಗೆ ಬರಲಿ’ ಎಂದು ಹೇಳಿದರು.</p>.<p>ಇದಕ್ಕೂ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ನಾಯಕರ ಜತೆ ಕುಮಾರಸ್ವಾಮಿ ಸಭೆ ನಡೆಸಿದರು. ಜಿಬಿಎ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.</p>.<p>ಜಾಹ್ನವಿ ಜೆಡಿಎಸ್ ಸೇರ್ಪಡೆ: ಬಿಗ್ಬಾಸ್–12 ರಿಯಾಲಿಟಿ ಷೋ ಮಾಜಿ ಸ್ಪರ್ಧಿ, ಟಿ.ವಿ ನಿರೂಪಕಿ ಜಾಹ್ನವಿ ಅವರು ಭಾನುವಾರ ಜೆಡಿಎಸ್ ಪಕ್ಷಕ್ಕೆ ಸೇರಿದರು.</p>.<p>ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಧ್ವಜ ನೀಡಿ, ಜಾಹ್ನವಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.</p>.<p>ಜೆಡಿಎಸ್ ಮಹಿಳಾ ಘಟಕವನ್ನು ಬಲಪಡಿಸುವ ಸಲುವಾಗಿ ಜಾಹ್ನವಿ ಅವರನ್ನು ಪಕ್ಷಕ್ಕೆ ಕರೆತರಲಾಗಿದೆ. ಜೆಡಿಎಸ್ನ ಸಿದ್ಧಾಂತಗಳ ಬಗ್ಗೆ ಒಲವಿರುವ ಕಾರಣಕ್ಕೆ ಜಾಹ್ನವಿ ಅವರೂ ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಜೆಡಿಎಸ್ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಘಟಕದ ಅಧ್ಯಕ್ಷ ರಮೇಶ್ಗೌಡ, ಮಹಿಳಾ ಘಟಕದ ಅಧ್ಯಕ್ಷ ರಶ್ಮಿ ರಾಮೇಗೌಡ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-51-228432395</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>