<p>ಬೆಂಗಳೂರು: ಬಿಹಾರದಲ್ಲಿ ಉಚಿತವಾಗಿ 125 ಯೂನಿಟ್ ವಿದ್ಯುತ್ ನೀಡುವ ನಿತೀಶ್ ಕುಮಾರ್ ಅವರ ಘೋಷಣೆ ಕರ್ನಾಟಕ ಮಾದರಿಯಿಂದ ಪ್ರೇರೇಪಿತವಾಗಿದ್ದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.</p>.ಬಿಹಾರ | 125 ಯುನಿಟ್ವರೆಗೆ ಉಚಿತ ವಿದ್ಯುತ್: ನಿತೀಶ್ ಕುಮಾರ್ ಘೋಷಣೆ.<p>ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಜನರ ಕಲ್ಯಾಣದ ಪರವಾಗಿ ನಿಂತಿದೆ ಎಂದರು.</p><p>‘ಸ್ವಾತಂತ್ರ್ಯ ಬಳಿಕ ಇಂದಿನವರೆಗೆ, ಕೇಂದ್ರದಲ್ಲಿ ಅಥವಾ ರಾಜ್ಯದಲ್ಲಿ ಯಾವಾಗೆಲ್ಲಾ ಕಾಂಗ್ರೆಸ್ ಸರ್ಕಾರವಿತ್ತೋ ಆವಾಗೆಲ್ಲಾ ವಿವಿಧ ಯೋಜನೆಗಳನ್ನು ಜನರಿಗೆ ನೀಡಿದೆ’ ಎಂದು ಅವರು ನುಡಿದರು.</p>.ಚಿಕ್ಕಮಗಳೂರು | ಜಿಲ್ಲೆಯಲ್ಲಿ 4.75 ಕೋಟಿ ಮಹಿಳೆಯರು ಉಚಿತ ಪ್ರಯಾಣ.<p>‘ಐದು ಗ್ಯಾರಂಟಿಗಳನ್ನು ನೀಡುವ ಮೂಲಕ ಕರ್ನಾಟಕ ಈ ಪ್ರವೃತ್ತಿಯನ್ನು ಆರಂಭಿಸಿತು. ಕಾಂಗ್ರೆಸ್ ಜನರ ಕಲ್ಯಾಣಕ್ಕೆ ಇದನ್ನು ಮಾಡಿತು. ಆದರೆ ಬಿಜೆಪಿಯವರು ಇನ್ನೊಮ್ಮೆ ಅಧಿಕಾರಕ್ಕೆ ಬರಲು ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ ಹಾಗೂ ದೇಶದ ಇತರ ಕಡೆಗಳಲ್ಲಿ ಇದನ್ನು ಬಳಸಿತು’ ಎಂದು ದೂರಿದರು.</p><p>ಕರ್ನಾಟಕಕ್ಕೆ ಕಾಂಗ್ರೆಸ್ ಏನೆಲ್ಲಾ ನೀಡಿದೆಯೋ, ಇಡೀ ದೇಶ ಅದನ್ನು ಅನುಸರಿಸುತ್ತಿದೆ. ಹೀಗಾಗಿ ದೇಶದಲ್ಲಿ ಕರ್ನಾಟಕ ಮಾದರಿ ಇದೆ ಎಂದರು.</p><p>ಬಿಹಾರ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ಬಿಹಾರ ಮುಖ್ಯಮಂತ್ರಿ 125 ಯೂನಿಟ್ಗಳ ಉಚಿತ ವಿದ್ಯುತ್ ಯೋಜನೆ ಘೋಷಣೆ ಮಾಡಿದ್ದಾರೆ. ಆಗಸ್ಟ್ 1ರಿಂದ ಇದು ಜಾರಿಗೆ ಬರಲಿದ್ದು, 1.67 ಕೋಟಿ ಕುಟುಂಬಗಳಿಗೆ ಲಾಭವಾಗಲಿದೆ.</p> .ಐದು ಪಾಲಿಕೆ ರಚಿಸಿ ಶೀಘ್ರ ಚುನಾವಣೆ: ಡಿಕೆಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಿಹಾರದಲ್ಲಿ ಉಚಿತವಾಗಿ 125 ಯೂನಿಟ್ ವಿದ್ಯುತ್ ನೀಡುವ ನಿತೀಶ್ ಕುಮಾರ್ ಅವರ ಘೋಷಣೆ ಕರ್ನಾಟಕ ಮಾದರಿಯಿಂದ ಪ್ರೇರೇಪಿತವಾಗಿದ್ದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.</p>.ಬಿಹಾರ | 125 ಯುನಿಟ್ವರೆಗೆ ಉಚಿತ ವಿದ್ಯುತ್: ನಿತೀಶ್ ಕುಮಾರ್ ಘೋಷಣೆ.<p>ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಜನರ ಕಲ್ಯಾಣದ ಪರವಾಗಿ ನಿಂತಿದೆ ಎಂದರು.</p><p>‘ಸ್ವಾತಂತ್ರ್ಯ ಬಳಿಕ ಇಂದಿನವರೆಗೆ, ಕೇಂದ್ರದಲ್ಲಿ ಅಥವಾ ರಾಜ್ಯದಲ್ಲಿ ಯಾವಾಗೆಲ್ಲಾ ಕಾಂಗ್ರೆಸ್ ಸರ್ಕಾರವಿತ್ತೋ ಆವಾಗೆಲ್ಲಾ ವಿವಿಧ ಯೋಜನೆಗಳನ್ನು ಜನರಿಗೆ ನೀಡಿದೆ’ ಎಂದು ಅವರು ನುಡಿದರು.</p>.ಚಿಕ್ಕಮಗಳೂರು | ಜಿಲ್ಲೆಯಲ್ಲಿ 4.75 ಕೋಟಿ ಮಹಿಳೆಯರು ಉಚಿತ ಪ್ರಯಾಣ.<p>‘ಐದು ಗ್ಯಾರಂಟಿಗಳನ್ನು ನೀಡುವ ಮೂಲಕ ಕರ್ನಾಟಕ ಈ ಪ್ರವೃತ್ತಿಯನ್ನು ಆರಂಭಿಸಿತು. ಕಾಂಗ್ರೆಸ್ ಜನರ ಕಲ್ಯಾಣಕ್ಕೆ ಇದನ್ನು ಮಾಡಿತು. ಆದರೆ ಬಿಜೆಪಿಯವರು ಇನ್ನೊಮ್ಮೆ ಅಧಿಕಾರಕ್ಕೆ ಬರಲು ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ ಹಾಗೂ ದೇಶದ ಇತರ ಕಡೆಗಳಲ್ಲಿ ಇದನ್ನು ಬಳಸಿತು’ ಎಂದು ದೂರಿದರು.</p><p>ಕರ್ನಾಟಕಕ್ಕೆ ಕಾಂಗ್ರೆಸ್ ಏನೆಲ್ಲಾ ನೀಡಿದೆಯೋ, ಇಡೀ ದೇಶ ಅದನ್ನು ಅನುಸರಿಸುತ್ತಿದೆ. ಹೀಗಾಗಿ ದೇಶದಲ್ಲಿ ಕರ್ನಾಟಕ ಮಾದರಿ ಇದೆ ಎಂದರು.</p><p>ಬಿಹಾರ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ಬಿಹಾರ ಮುಖ್ಯಮಂತ್ರಿ 125 ಯೂನಿಟ್ಗಳ ಉಚಿತ ವಿದ್ಯುತ್ ಯೋಜನೆ ಘೋಷಣೆ ಮಾಡಿದ್ದಾರೆ. ಆಗಸ್ಟ್ 1ರಿಂದ ಇದು ಜಾರಿಗೆ ಬರಲಿದ್ದು, 1.67 ಕೋಟಿ ಕುಟುಂಬಗಳಿಗೆ ಲಾಭವಾಗಲಿದೆ.</p> .ಐದು ಪಾಲಿಕೆ ರಚಿಸಿ ಶೀಘ್ರ ಚುನಾವಣೆ: ಡಿಕೆಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>