ಸಂಬಂಧಿಕರ ಆಕ್ರೋಶ: ಸೇತುವೆ ದುರಸ್ತಿ ಮಾಡಿದ್ದರೆ, ಅಥವಾ ಅಡ್ಡಲಾಗಿ ಮಣ್ಣನ್ನು ಸುರಿದಿದ್ದರೆ ಈ ಅವಘಡ ಸಂಭವಿಸುತ್ತಿರಲಿಲ್ಲ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಅಕ್ರೋಶ ವ್ಯಕ್ತಪಡಿಸಿದರು. ಶವವನ್ನು ತೆಗೆಯಲು ಬಿಡುವುದಿಲ್ಲ ಎಂದು ಪ್ರತಿರೋಧವೊಡ್ಡಿದರು. ನಂತರ ಪೊಲೀಸರು ಮನವೊಲಿಸಿ ಕೊಣನೂರಿನ ಆಸ್ಪತ್ರೆಗೆ ಸಾಗಿಸಿದರು.