ಅರ್ಜಿದಾರರ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ, ‘ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಹಲ್ಲೆ ಮತ್ತು ಅವರ ಸೇವೆಗೆ ತಡೆಯೊಡ್ಡುವುದು ಮುಂದುವರಿದಿದೆ. ಈ ಕುರಿತು ಸಂಬಂಧಿಸಿದವರಿಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಹಾಗಾಗಿ, ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಅಡ್ಡಿ ಉಂಟು ಮಾಡುವವರ ವಿರುದ್ಧ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಬೇಕು’ ಎಂದು ಕೋರಿದರು.