‘ಸದಲಗಾದ ಶಿವಾನಂದ ಕರಂಗಳೆ ಅವರು ಆಶ್ರಯ ಮನೆಗೆ ಸಂಬಂಧಿಸಿದಂತೆ ಉತಾರ ಕೋರಿ ಅರ್ಜಿ ಸಲ್ಲಿಸಿದ್ದರು. ಇದಕ್ಕಾಗಿ ಬಿಲ್ ಕಲೆಕ್ಟರ್ ₹ 15ಸಾವಿರ ಲಂಚ ಕೇಳಿದ್ದರು. ಕೊನೆಗೆ ₹ 9ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಶಿವಾನಂದ ದೂರು ನೀಡಿದ್ದರು. ಇದನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಯಿತು. ಲಂಚದ ಹಣ ಪಡೆಯುವಾಗ ಸರ್ಕಾರಿ ನೌಕರನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಉತ್ತರ ವಲಯ ಎಸ್ಪಿ ಬಿ.ಎಸ್. ನೇಮಗೌಡ ತಿಳಿಸಿದ್ದಾರೆ.