ರಾಜ್ಯದಲ್ಲಿ ಚಳಿಗಾಲದಲ್ಲಿ ಕಾಣಸಿಗುತ್ತಿದ್ದ ವಲಸೆ ಪಕ್ಷಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಇದಕ್ಕೆ ಕಾರಣ, ಕಲ್ಲುಗಣಿಗಾರಿಕೆ, ಬೇಟೆಗಾರರ ಹಾವಳಿ, ಕೃಷಿಯಲ್ಲಿ ಹೆಚ್ಚು ರಾಸಾಯನಿಕ- ಕೀಟನಾಶಕ ಬಳಕೆ, ಕೆರೆಗಳ ಅಭಿವೃದ್ಧಿ ನೆಪದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಹಕ್ಕಿಗಳ ಸಂಖ್ಯೆ ಕಡಿಮೆಯಾಗಲು ಕಾರಣ ಎನ್ನುತ್ತಾರೆ ಪಕ್ಷಿತಜ್ಞರು.