<p>ಕನಕಪುರ: ಇಲ್ಲಿನ ಕಾಡು ಶಿವನಹಳ್ಳಿದೊಡ್ಡಿ ಗ್ರಾಮದ ಬಳಿಯಿರುವ ಕಾಡಿನಲ್ಲಿ ಕುರಿ, ಮೇಕೆ ಮೇಯಿಸುತ್ತಿದ ವ್ಯಕ್ತಿಯ ಮೇಲೆ ಕಾಡುಕೋಣ ಗುರುವಾರ ದಾಳಿ ನಡೆಸಿದ್ದು, ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. </p>.<p>ಉಯ್ಯಂಬಳ್ಳಿ ಹೋಬಳಿಯ ಕಾಡು ಶಿವನಹಳ್ಳಿದೊಡ್ಡಿ ಗ್ರಾಮದ ನಾಗನಾಯ್ಕ್ (65) ಮೃತಪಟ್ಟವರು. ಮೃತ ನಾಗನಾಯ್ಕ ಅವರ ಜತೆಗಿದ್ದ ಪಾಪಣ್ಣಿ ನಾಯ್ಕ್ ಅವರು ಕಾಡುಕೋಣ ದಾಳಿಯಿಂದ ತಪ್ಪಿಸಿಕೊಂಡು ಪಾರಾಗಿದ್ದಾರೆ. </p>.<p>ಮೃತ ನಾಗನಾಯ್ಕ್ ಮತ್ತು ಪಾಪಣ್ಣಿ ಇಬ್ಬರು ಕುರಿ, ಮೇಕೆ ಸಾಕಾಣಿಕೆ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದು, ಗುರುವಾರವೂ ಎಂದಿನಂತೆ ಕಾಡು ಶಿವನಹಳ್ಳಿ ದೊಡ್ಡಿಯ ಕಾಡಂಚಿನ ಜಮೀನಿ ನಲ್ಲಿ ಕುರಿ ಮೇಯಿಸಲು ಹೋಗಿದ್ದರು. ಈ ವೇಳೆ ಏಕಾಏಕಿ ಬಂದ ಕಾಡುಕೋಣವು ದಾಳಿ ನಡೆಸಿದ್ದು, ಪಾಪಣ್ಣಿ ಮರ ಏರಿ ಕುಳಿತಿದ್ದರಿಂದ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. </p>.<p>ನಾಗನಾಯ್ಕ್ ಅವರೂ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಕಾಡುಕೋಣವು ಕೊಂಬಿನಿಂದ ಅವರ ಹೊಟ್ಟೆಯ ಬಲಭಾಗಕ್ಕೆ ಬಲವಾಗಿ ತಿವಿದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟರು. </p>.<p>ಪಾಪಣ್ಣಿ ನಾಯ್ಕ್ ಗ್ರಾಮಕ್ಕೆ ಬಂದು ಗ್ರಾಮಸ್ಥರು ಮತ್ತು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪಿಎಸ್ಐ ಪಾಲಾಕ್ಷ, ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಶವವನ್ನು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು. </p>.<p>ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ಇಲ್ಲಿನ ಕಾಡು ಶಿವನಹಳ್ಳಿದೊಡ್ಡಿ ಗ್ರಾಮದ ಬಳಿಯಿರುವ ಕಾಡಿನಲ್ಲಿ ಕುರಿ, ಮೇಕೆ ಮೇಯಿಸುತ್ತಿದ ವ್ಯಕ್ತಿಯ ಮೇಲೆ ಕಾಡುಕೋಣ ಗುರುವಾರ ದಾಳಿ ನಡೆಸಿದ್ದು, ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. </p>.<p>ಉಯ್ಯಂಬಳ್ಳಿ ಹೋಬಳಿಯ ಕಾಡು ಶಿವನಹಳ್ಳಿದೊಡ್ಡಿ ಗ್ರಾಮದ ನಾಗನಾಯ್ಕ್ (65) ಮೃತಪಟ್ಟವರು. ಮೃತ ನಾಗನಾಯ್ಕ ಅವರ ಜತೆಗಿದ್ದ ಪಾಪಣ್ಣಿ ನಾಯ್ಕ್ ಅವರು ಕಾಡುಕೋಣ ದಾಳಿಯಿಂದ ತಪ್ಪಿಸಿಕೊಂಡು ಪಾರಾಗಿದ್ದಾರೆ. </p>.<p>ಮೃತ ನಾಗನಾಯ್ಕ್ ಮತ್ತು ಪಾಪಣ್ಣಿ ಇಬ್ಬರು ಕುರಿ, ಮೇಕೆ ಸಾಕಾಣಿಕೆ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದು, ಗುರುವಾರವೂ ಎಂದಿನಂತೆ ಕಾಡು ಶಿವನಹಳ್ಳಿ ದೊಡ್ಡಿಯ ಕಾಡಂಚಿನ ಜಮೀನಿ ನಲ್ಲಿ ಕುರಿ ಮೇಯಿಸಲು ಹೋಗಿದ್ದರು. ಈ ವೇಳೆ ಏಕಾಏಕಿ ಬಂದ ಕಾಡುಕೋಣವು ದಾಳಿ ನಡೆಸಿದ್ದು, ಪಾಪಣ್ಣಿ ಮರ ಏರಿ ಕುಳಿತಿದ್ದರಿಂದ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. </p>.<p>ನಾಗನಾಯ್ಕ್ ಅವರೂ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಕಾಡುಕೋಣವು ಕೊಂಬಿನಿಂದ ಅವರ ಹೊಟ್ಟೆಯ ಬಲಭಾಗಕ್ಕೆ ಬಲವಾಗಿ ತಿವಿದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟರು. </p>.<p>ಪಾಪಣ್ಣಿ ನಾಯ್ಕ್ ಗ್ರಾಮಕ್ಕೆ ಬಂದು ಗ್ರಾಮಸ್ಥರು ಮತ್ತು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪಿಎಸ್ಐ ಪಾಲಾಕ್ಷ, ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಶವವನ್ನು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು. </p>.<p>ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>