ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದ ಡೆಪ್ಯುಟಿ ಸಾಲಿಸಿಟರ್ ಜನರಲ್, ‘ಅರ್ಜಿದಾರರ ಸಹೋದರನ ವಿರುದ್ಧ ಗಂಭೀರ ಆರೋಪವಿದೆ. ಈ ಕಾರಣಕ್ಕಾಗಿ ಎಲ್ಒಸಿ ಹೊರಡಿಸಲಾಗಿದೆ. ಒಂದು ವೇಳೆ ಈ ಸುತ್ತೋಲೆಯನ್ನು ಹಿಂಪಡೆದಲ್ಲಿ ಅರ್ಜಿದಾರರು ವಿದೇಶಕ್ಕೆ ತೆರಳಲಿದ್ದು, ತನಿಖೆಗೆ ಸಹಕರಿಸದೇ ಇರಬಹುದು. ಹೀಗಾಗಿ ಎಲ್ಒಸಿ ರದ್ದು ಮಾಡಲಾಗದು‘ ಎಂದು ಪ್ರತಿಪಾದಿಸಿದ್ದರು.