<p><strong>ಬೆಂಗಳೂರು:</strong>‘ಆಪರೇಷನ್ ಕಮಲದ ಆಡಿಯೊ ಪ್ರಕರಣದ ತನಿಖೆ ಹೊಣೆಯನ್ನು ಯಾವುದೇ ಕಾರಣಕ್ಕೂ ವಿಶೇಷ ತನಿಖಾ ತಂಡಕ್ಕೆ ಒಪ್ಪಿಸಬಾರದು. ಒಂದು ವೇಳೆ ಒಪ್ಪಿಸಿದರೆ, 2008ರಿಂದ ಇಲ್ಲಿವರೆಗೆ ನಡೆದಿರುವ ಎಲ್ಲ ಪ್ರಕರಣಗಳನ್ನೂ ತನಿಖಾ ವ್ಯಾಪ್ತಿಗೆ ಸೇರಿಸಬೇಕು’ ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.</p>.<p>ವಿಧಾನಸಭೆಯಲ್ಲಿ ಆಡಿಯೊ ವಿಷಯವಾಗಿ ಮಂಗಳವಾರ ಎರಡನೇ ದಿನವೂ ಪರ–ವಿರೋಧ ಚರ್ಚೆಗಳು ನಡೆದವು.</p>.<p>ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯರು, ‘ಎಸ್ಐಟಿ ತನಿಖೆಯಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಈ ಪ್ರಕರಣವನ್ನು ಸದನ ಸಮಿತಿಗೆ ಒಪ್ಪಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಭಾಧ್ಯಕ್ಷರಾದ ಕೆ.ಆರ್.ರಮೇಶ್ ಕುಮಾರ್ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರಿಗೆ ಅಭಿಪ್ರಾಯ ತಿಳಿಸಲು ಅವಕಾಶ ಕಲ್ಪಿಸಿದರು.</p>.<p>ತನಿಖೆಯನ್ನು ಎಸ್ಐಟಿಗೆ ವಹಿಸದೆ ಸದನ ಸಮಿತಿ ರಚಿಸಿ ಅದಕ್ಕೆ ನೀಡಬೇಕು. 15 ದಿನದಲ್ಲೇ ಬೇಕಿದ್ದರೆ ವರದಿ ತರಿಸಿಕೊಳ್ಳಿ ಎಂದು ಬಿಜೆಪಿಯ ಶಾಸಕರಾದ ಮಾಧುಸ್ವಾಮಿ, ಎಸ್.ಸುರೇಶ್ಕುಮಾರ್ ಸೇರಿದಂತೆ ಇತರ ಸದಸ್ಯರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ಆಪರೇಷನ್ ಕಮಲದ ಆಡಿಯೊ ಪ್ರಕರಣದ ತನಿಖೆ ಹೊಣೆಯನ್ನು ಯಾವುದೇ ಕಾರಣಕ್ಕೂ ವಿಶೇಷ ತನಿಖಾ ತಂಡಕ್ಕೆ ಒಪ್ಪಿಸಬಾರದು. ಒಂದು ವೇಳೆ ಒಪ್ಪಿಸಿದರೆ, 2008ರಿಂದ ಇಲ್ಲಿವರೆಗೆ ನಡೆದಿರುವ ಎಲ್ಲ ಪ್ರಕರಣಗಳನ್ನೂ ತನಿಖಾ ವ್ಯಾಪ್ತಿಗೆ ಸೇರಿಸಬೇಕು’ ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.</p>.<p>ವಿಧಾನಸಭೆಯಲ್ಲಿ ಆಡಿಯೊ ವಿಷಯವಾಗಿ ಮಂಗಳವಾರ ಎರಡನೇ ದಿನವೂ ಪರ–ವಿರೋಧ ಚರ್ಚೆಗಳು ನಡೆದವು.</p>.<p>ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯರು, ‘ಎಸ್ಐಟಿ ತನಿಖೆಯಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಈ ಪ್ರಕರಣವನ್ನು ಸದನ ಸಮಿತಿಗೆ ಒಪ್ಪಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಭಾಧ್ಯಕ್ಷರಾದ ಕೆ.ಆರ್.ರಮೇಶ್ ಕುಮಾರ್ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರಿಗೆ ಅಭಿಪ್ರಾಯ ತಿಳಿಸಲು ಅವಕಾಶ ಕಲ್ಪಿಸಿದರು.</p>.<p>ತನಿಖೆಯನ್ನು ಎಸ್ಐಟಿಗೆ ವಹಿಸದೆ ಸದನ ಸಮಿತಿ ರಚಿಸಿ ಅದಕ್ಕೆ ನೀಡಬೇಕು. 15 ದಿನದಲ್ಲೇ ಬೇಕಿದ್ದರೆ ವರದಿ ತರಿಸಿಕೊಳ್ಳಿ ಎಂದು ಬಿಜೆಪಿಯ ಶಾಸಕರಾದ ಮಾಧುಸ್ವಾಮಿ, ಎಸ್.ಸುರೇಶ್ಕುಮಾರ್ ಸೇರಿದಂತೆ ಇತರ ಸದಸ್ಯರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>