ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇದು ₹2 ಲಕ್ಷ ಕೋಟಿಯ ಹಗರಣ. 27,000 ಎಕರೆ ಭೂಕಬಳಿಕೆಯಾಗಿದೆ. ಈ ಬಗ್ಗೆ ಅನ್ವರ್ ಮಾಣಿಪ್ಪಾಡಿ ಅವರು 7,000 ಪುಟಗಳ ವರದಿ ಸಲ್ಲಿಸಿದ್ದರು. ಕಾಂಗ್ರೆಸ್ ಸರ್ಕಾರ ಸದನದಲ್ಲಿ ವರದಿ ಮಂಡನೆಗೆ ಮೀನಮೇಷ ಎಣಿಸಿತ್ತು. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಸದನದಲ್ಲೇ ಹೇಳಿಕೆ ನೀಡಿದ್ದಾರೆ. ಒಂದು ವೇಳೆ ಸಿಬಿಐಗೆ ಒಪ್ಪಿಸದಿದ್ದರೆ ಜಮೀರ್ ಅವರನ್ನು ಸಂಪುಟದಿಂದ ಕೈಬಿಡಬೇಕು’ ಎಂದು ಆಗ್ರಹಿಸಿದರು.