ಭಯೋತ್ಪಾದಕ ಕೃತ್ಯದ ಶಂಕಿತರನ್ನು ನಿರಪರಾಧಿಗಳು ಎಂದು ಹೇಳುವುದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಚಾಳಿ ಆಗಿದೆ. ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಬಿಜೆಪಿಗೂ ಸಂಬಂಧವಿದೆ ಎಂದು ಕೆಟ್ಟದಾಗಿ ಬಿಂಬಿಸಲು ಕಾಂಗ್ರೆಸ್ ಯತ್ನ ನಡೆಸಿತು. ಈ ಸ್ಫೋಟದ ತನಿಖೆಯ ದಾರಿ ತಪ್ಪಿಸಲು ಇನ್ನಿಲ್ಲದ ಪ್ರಯತ್ನ ನಡೆಸಿತು. ಉದ್ಯಮಗಳ ನಡುವಿನ ದ್ವೇಷದ ಘಟನೆ ಎಂಬುದಾಗಿ ಬಿಂಬಿಸಲೂ ಯತ್ನಿಸಿತು. ಆದರೆ, ಅವರ ಪ್ರಯತ್ನ ವಿಫಲವಾಯಿತು. ಆರೋಪಿಗಳಿಗೆ ಐಎಸ್ ಭಯೋತ್ಪಾದನಾ ಸಂಘಟನೆ ಜತೆ ಸಂಪರ್ಕ ಇರುವುದು ಬಯಲಾಗಿದೆ ಎಂದರು.