‘ದೇಶದ್ರೋಹಿ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ಮಟ್ಟಹಾಕಲು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಅನ್ವಯಿಸುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಘಟಕ ಆರಂಭಿಸಬೇಕು. ಸನಾತನ ಧರ್ಮ, ಸಂಸ್ಕೃತಿ ಸದ್ವಿಚಾರಗಳಿಗೆ ಸದಾ ಮನ್ನಣೆ ನೀಡಬೇಕು, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕ್ರಮ ಕೈಗೊಳ್ಳಬೇಕು, ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು, ಕರಾವಳಿಯ ಪ್ರಾಕೃತಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಸಂಪನ್ಮೂಲಗಳಿಗೆ ಹಾನಿಯಾಗದಂತೆ ಔದ್ಯಮಿಕ, ಔದ್ಯೋಗಿಕ ಪ್ರಗತಿಗೆ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು.