<p><strong>ಬೆಳಗಾವಿ:</strong> 'ಹಣ ಪಡೆದು ಮುಖ್ಯಮಂತ್ರಿ ಪದವಿ ಕೊಡುವ ಸಂಸ್ಕೃತಿ ಬಿಜೆಪಿಯಲ್ಲಿದೆ ಹೊರತು; ನಮ್ಮಲ್ಲಿ ಇಲ್ಲ. ಕಾಂಗ್ರೆಸ್ ಸರ್ಕಾರವನ್ನು ಜನರೇ ಆವರಿಸಿದ್ದಾರೆ' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಪ್ರತಿಕ್ರಿಯಿಸಿದರು. </p>.CM ಅಭ್ಯರ್ಥಿಯಾಗಿ ಮಾಡಿದರೆ ಸಿಧು ರಾಜಕೀಯಕ್ಕೆ ಮರಳುತ್ತಾರೆ: ಪತ್ನಿ ನವಜೋತ್ ಕೌರ್.<p>'ಕಾಂಗ್ರೆಸ್ಸಿನಲ್ಲಿ ₹500 ಕೋಟಿ ಕೊಟ್ಟರೆ ಮುಖ್ಯಮಂತ್ರಿ ಮಾಡುತ್ತಾರೆ' ಎಂಬ ನವಜೋತ್ ಸಿಂಗ್ ಸಿದ್ದು ಪತ್ನಿ, ಮಾಜಿ ಸಚಿವೆ ನವಜೋತ್ ಅವರ ಹೇಳಿಕೆಗೆ ಅವರು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದರು.</p><p>'ನವಜೋತ್ ಅವರು ಕರ್ನಾಟಕದವರೇ? ಅವರು ಹೇಳಿದ್ದಾರೆ ಎಂಬುದಕ್ಕೆ ಬಿಜೆಪಿಯವರು ಏಕೆ ಮೈ ಉರಿ ಮಾಡಿಕೊಳ್ಳಬೇಕು?' ಎಂದು ಪ್ರಶ್ನಿಸಿದರು.</p><p>'ಉತ್ತರ ಕರ್ನಾಟಕ ಸಮಸ್ಯೆಗೆ ಪರಿಹಾರ ನೀಡುವುದೇ ನಮ್ಮ ಸರ್ಕಾರದ ಮುಖ್ಯ ಉದ್ದೇಶ. ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ. ಪ್ರತಿಪಕ್ಷ ಎಂಬ ಕಾರಣಕ್ಕೆ ಆರೋಪ ಮಾಡುವುದು ಬಿಜೆಪಿಯವರ ಚಟ' ಎಂದು ಹೇಳಿದರು.</p><p>'ಈಚೆಗೆ ಉಪಾಹಾರದ ನಂತರ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ನೀಡಿದ ಹೇಳಿಕೆಗಳನ್ನು ವಿರೋಧ ಪಕ್ಷದವರಿಗೆ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಅವರು ಇಡ್ಲಿ ತಿಂದರೋ ನಾಟಿಕೋಳಿ ತಿಂದರೋ ಎಂಬುದು ಬೇಕಾಗಿಲ್ಲ. ಬಿಜೆಪಿ ಸದನದಲ್ಲಿ ಪ್ರಶ್ನೆಗಳನ್ನು ಕೇಳಲಿ ನಾವು ಉತ್ತರ ಕೊಡಲು ಸಿದ್ದರಿದ್ದೇವೆ' ಎಂದರು.</p>.ಬೆಳಗಾವಿ | ವಿಧಾನಮಂಡಲ ಚಳಿಗಾಲದ ಅಧಿವೇಶನ: ಕಾಂಗ್ರೆಸ್ ವಲಯದಲ್ಲಿ ಹುರುಪು.<p>ವಿಧಾನ ಪರಿಷತ್ತಿನ ಮುಖ್ಯಸಚೇತಕ ಸಲೀಂ ಅಹ್ಮದ್, 'ನರೇಂದ್ರ ಮೋದಿ ಅವರು ರಾಜ್ಯಕ್ಕೆ ಏನೇನು ಅನ್ಯಾಯ ಮಾಡಿದ್ದಾರೆ ಎಂಬುದರ ಬಗ್ಗೆ ಬಿಜೆಪಿಯವರು ಮಾತನಾಡಲಿ ಎಂದು ತಿರುಗೇಟು ಕೊಟ್ಟರು.</p><p>ಸಭಾಪತಿ ಬಸವರಾಜ ಹೊರಟ್ಟಿ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, 'ಈ ಬಗ್ಗೆ ಸಿಎಂ, ಡಿಸಿಎಂ, ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಸವರಾಜ ಹೊರಟ್ಟಿ ಅವರ ಬದಲಾವಣೆ ಇಲ್ಲ. ಈ ಕುರಿತು ಚರ್ಚೆ ಆಗಿಲ್ಲ. ಪರಿಷತ್ತಿನಲ್ಲಿ ಕಾಂಗ್ರೆಸ್, ಬಿಜೆಪಿ ಸಮಬಲ ಇದೆ' ಎಂದರು.</p><p>'ಪರಿಷತ್ತಿನಲ್ಲಿ ಖಾಲಿ ಸ್ಥಾನ ಭರ್ತಿ ಮಾಡುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಸಚಿವನಾಗಬೇಕೋ, ಬೇಡವೋ ಎಂಬುದನ್ನೂ ಹೈಕಮಾಂಡ ನಿರ್ಧರಿಸುತ್ತದೆ' ಎಂದರು.</p>.ಕೊಲ್ಹಾಪುರದಲ್ಲಿ ಕರ್ನಾಟಕದ ಬಸ್ ಮೇಲೆ 'ಜೈ ಮಹಾರಾಷ್ಟ್ರ' ಸ್ಟಿಕ್ಕರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> 'ಹಣ ಪಡೆದು ಮುಖ್ಯಮಂತ್ರಿ ಪದವಿ ಕೊಡುವ ಸಂಸ್ಕೃತಿ ಬಿಜೆಪಿಯಲ್ಲಿದೆ ಹೊರತು; ನಮ್ಮಲ್ಲಿ ಇಲ್ಲ. ಕಾಂಗ್ರೆಸ್ ಸರ್ಕಾರವನ್ನು ಜನರೇ ಆವರಿಸಿದ್ದಾರೆ' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಪ್ರತಿಕ್ರಿಯಿಸಿದರು. </p>.CM ಅಭ್ಯರ್ಥಿಯಾಗಿ ಮಾಡಿದರೆ ಸಿಧು ರಾಜಕೀಯಕ್ಕೆ ಮರಳುತ್ತಾರೆ: ಪತ್ನಿ ನವಜೋತ್ ಕೌರ್.<p>'ಕಾಂಗ್ರೆಸ್ಸಿನಲ್ಲಿ ₹500 ಕೋಟಿ ಕೊಟ್ಟರೆ ಮುಖ್ಯಮಂತ್ರಿ ಮಾಡುತ್ತಾರೆ' ಎಂಬ ನವಜೋತ್ ಸಿಂಗ್ ಸಿದ್ದು ಪತ್ನಿ, ಮಾಜಿ ಸಚಿವೆ ನವಜೋತ್ ಅವರ ಹೇಳಿಕೆಗೆ ಅವರು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದರು.</p><p>'ನವಜೋತ್ ಅವರು ಕರ್ನಾಟಕದವರೇ? ಅವರು ಹೇಳಿದ್ದಾರೆ ಎಂಬುದಕ್ಕೆ ಬಿಜೆಪಿಯವರು ಏಕೆ ಮೈ ಉರಿ ಮಾಡಿಕೊಳ್ಳಬೇಕು?' ಎಂದು ಪ್ರಶ್ನಿಸಿದರು.</p><p>'ಉತ್ತರ ಕರ್ನಾಟಕ ಸಮಸ್ಯೆಗೆ ಪರಿಹಾರ ನೀಡುವುದೇ ನಮ್ಮ ಸರ್ಕಾರದ ಮುಖ್ಯ ಉದ್ದೇಶ. ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ. ಪ್ರತಿಪಕ್ಷ ಎಂಬ ಕಾರಣಕ್ಕೆ ಆರೋಪ ಮಾಡುವುದು ಬಿಜೆಪಿಯವರ ಚಟ' ಎಂದು ಹೇಳಿದರು.</p><p>'ಈಚೆಗೆ ಉಪಾಹಾರದ ನಂತರ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ನೀಡಿದ ಹೇಳಿಕೆಗಳನ್ನು ವಿರೋಧ ಪಕ್ಷದವರಿಗೆ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಅವರು ಇಡ್ಲಿ ತಿಂದರೋ ನಾಟಿಕೋಳಿ ತಿಂದರೋ ಎಂಬುದು ಬೇಕಾಗಿಲ್ಲ. ಬಿಜೆಪಿ ಸದನದಲ್ಲಿ ಪ್ರಶ್ನೆಗಳನ್ನು ಕೇಳಲಿ ನಾವು ಉತ್ತರ ಕೊಡಲು ಸಿದ್ದರಿದ್ದೇವೆ' ಎಂದರು.</p>.ಬೆಳಗಾವಿ | ವಿಧಾನಮಂಡಲ ಚಳಿಗಾಲದ ಅಧಿವೇಶನ: ಕಾಂಗ್ರೆಸ್ ವಲಯದಲ್ಲಿ ಹುರುಪು.<p>ವಿಧಾನ ಪರಿಷತ್ತಿನ ಮುಖ್ಯಸಚೇತಕ ಸಲೀಂ ಅಹ್ಮದ್, 'ನರೇಂದ್ರ ಮೋದಿ ಅವರು ರಾಜ್ಯಕ್ಕೆ ಏನೇನು ಅನ್ಯಾಯ ಮಾಡಿದ್ದಾರೆ ಎಂಬುದರ ಬಗ್ಗೆ ಬಿಜೆಪಿಯವರು ಮಾತನಾಡಲಿ ಎಂದು ತಿರುಗೇಟು ಕೊಟ್ಟರು.</p><p>ಸಭಾಪತಿ ಬಸವರಾಜ ಹೊರಟ್ಟಿ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, 'ಈ ಬಗ್ಗೆ ಸಿಎಂ, ಡಿಸಿಎಂ, ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಸವರಾಜ ಹೊರಟ್ಟಿ ಅವರ ಬದಲಾವಣೆ ಇಲ್ಲ. ಈ ಕುರಿತು ಚರ್ಚೆ ಆಗಿಲ್ಲ. ಪರಿಷತ್ತಿನಲ್ಲಿ ಕಾಂಗ್ರೆಸ್, ಬಿಜೆಪಿ ಸಮಬಲ ಇದೆ' ಎಂದರು.</p><p>'ಪರಿಷತ್ತಿನಲ್ಲಿ ಖಾಲಿ ಸ್ಥಾನ ಭರ್ತಿ ಮಾಡುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಸಚಿವನಾಗಬೇಕೋ, ಬೇಡವೋ ಎಂಬುದನ್ನೂ ಹೈಕಮಾಂಡ ನಿರ್ಧರಿಸುತ್ತದೆ' ಎಂದರು.</p>.ಕೊಲ್ಹಾಪುರದಲ್ಲಿ ಕರ್ನಾಟಕದ ಬಸ್ ಮೇಲೆ 'ಜೈ ಮಹಾರಾಷ್ಟ್ರ' ಸ್ಟಿಕ್ಕರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>