<p><strong>ಕಲಬುರ್ಗಿ:</strong> ‘ಗುಲಬರ್ಗಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮಮತಕ್ಷೇತ್ರವನ್ನು ಬಿಟ್ಟು ಅಲ್ಲಾಡುತ್ತಿಲ್ಲ. ಈ ರೀತಿಯ ಅನುಭವ ಇಡೀ ದೇಶದಲ್ಲಿ ನಮಗೆ ಎಲ್ಲೂ ಆಗಿಲ್ಲ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಪಿ. ಮುರಳೀಧರರಾವ್ ಹೇಳಿದರು.</p>.<p>ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನರೇಂದ್ರ ಮೋದಿ, ಅಮಿತ್ ಶಾ ಅವರು ದೇಶದಾದ್ಯಂತ ಚುನಾವಣಾ ಪ್ರಚಾರ ರ್ಯಾಲಿಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ, ಖರ್ಗೆ ಕ್ಷೇತ್ರ ಬಿಟ್ಟು ಕದಲುತ್ತಿಲ್ಲ’ ಎಂದು ಪುನರುಚ್ಚರಿಸಿದರು.</p>.<p>‘ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಮುಖ್ಯಮಂತ್ರಿ ಆಗಿದ್ದಾರೆ. ತಮ್ಮ ಪುತ್ರನನ್ನು ಗೆಲ್ಲಿಸಿಕೊಳ್ಳಲು ತಮ್ಮ ಕುಟುಂಬದೊಂದಿಗೆ ಪ್ರಚಾರದಲ್ಲಿ ನಿರತರಾಗಿದ್ದರು. ಖರ್ಗೆ ಕಲಬುರ್ಗಿಗೆ ಸೀಮಿತರಾಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಮಹಾಘಟಬಂಧನ್ ಹೇಗೆ ಯಶಸ್ವಿಯಾಗುತ್ತದೆ’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.</p>.<p><strong>ಸಾಷ್ಟಾಂಗ ನಮಸ್ಕಾರ:</strong> ನಗರದ ಯರಗೋಳಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಗುಲಬರ್ಗಾ ದಕ್ಷಿಣ ಮಂಡಲ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅಭ್ಯರ್ಥಿ ಡಾ.ಉಮೇಶ ಜಾಧವ ಅವರು ಶಿರಸಾಷ್ಟಾಂಗ ನಮಸ್ಕಾರ ಹಾಕಿ, ತಮ್ಮನ್ನು ಗೆಲ್ಲಿಸುವಂತೆ ಕಳಕಳಿಯ ಮನವಿ ಮಾಡಿಕೊಂಡರು.</p>.<p>ಈಚೆಗೆ ನಡೆದ ವೀರಶೈವ ಲಿಂಗಾಯತ ಸಮಾವೇಶದಲ್ಲೂ ಜಾಧವ ಶಿರಸಾಷ್ಟಾಂಗ ನಮಸ್ಕಾರ ಹಾಕಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ‘ಗುಲಬರ್ಗಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮಮತಕ್ಷೇತ್ರವನ್ನು ಬಿಟ್ಟು ಅಲ್ಲಾಡುತ್ತಿಲ್ಲ. ಈ ರೀತಿಯ ಅನುಭವ ಇಡೀ ದೇಶದಲ್ಲಿ ನಮಗೆ ಎಲ್ಲೂ ಆಗಿಲ್ಲ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಪಿ. ಮುರಳೀಧರರಾವ್ ಹೇಳಿದರು.</p>.<p>ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನರೇಂದ್ರ ಮೋದಿ, ಅಮಿತ್ ಶಾ ಅವರು ದೇಶದಾದ್ಯಂತ ಚುನಾವಣಾ ಪ್ರಚಾರ ರ್ಯಾಲಿಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ, ಖರ್ಗೆ ಕ್ಷೇತ್ರ ಬಿಟ್ಟು ಕದಲುತ್ತಿಲ್ಲ’ ಎಂದು ಪುನರುಚ್ಚರಿಸಿದರು.</p>.<p>‘ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಮುಖ್ಯಮಂತ್ರಿ ಆಗಿದ್ದಾರೆ. ತಮ್ಮ ಪುತ್ರನನ್ನು ಗೆಲ್ಲಿಸಿಕೊಳ್ಳಲು ತಮ್ಮ ಕುಟುಂಬದೊಂದಿಗೆ ಪ್ರಚಾರದಲ್ಲಿ ನಿರತರಾಗಿದ್ದರು. ಖರ್ಗೆ ಕಲಬುರ್ಗಿಗೆ ಸೀಮಿತರಾಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಮಹಾಘಟಬಂಧನ್ ಹೇಗೆ ಯಶಸ್ವಿಯಾಗುತ್ತದೆ’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.</p>.<p><strong>ಸಾಷ್ಟಾಂಗ ನಮಸ್ಕಾರ:</strong> ನಗರದ ಯರಗೋಳಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಗುಲಬರ್ಗಾ ದಕ್ಷಿಣ ಮಂಡಲ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅಭ್ಯರ್ಥಿ ಡಾ.ಉಮೇಶ ಜಾಧವ ಅವರು ಶಿರಸಾಷ್ಟಾಂಗ ನಮಸ್ಕಾರ ಹಾಕಿ, ತಮ್ಮನ್ನು ಗೆಲ್ಲಿಸುವಂತೆ ಕಳಕಳಿಯ ಮನವಿ ಮಾಡಿಕೊಂಡರು.</p>.<p>ಈಚೆಗೆ ನಡೆದ ವೀರಶೈವ ಲಿಂಗಾಯತ ಸಮಾವೇಶದಲ್ಲೂ ಜಾಧವ ಶಿರಸಾಷ್ಟಾಂಗ ನಮಸ್ಕಾರ ಹಾಕಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>