‘ಉಪಚುನಾವಣೆ ಮುಗಿದ ನಂತರ ರೈತರಿಗೆ ಋಣಮುಕ್ತ ಪತ್ರ ನೀಡುವುದಾಗಿ ಕುಮಾರಸ್ವಾಮಿ ಮಂಡ್ಯದಲ್ಲಿ ಹೇಳಿದ್ದಾರೆ. ಇದು ನೀತಿಸಂಹಿತೆ ಉಲ್ಲಂಘನೆಯಾಗಿರುವುದರಿಂದ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು’ ಎಂದು ರಾಜ್ಯ ಘಟಕದ ಸಹ ವಕ್ತಾರ ಎ.ಎಚ್.ಆನಂದ್ ಹಾಗೂ ಬಿಜೆಪಿ ಚುನಾವಣಾ ಆಯೋಗದ ಸಂಪರ್ಕ ವಿಭಾಗದ ಸಂಚಾಲಕ ದತ್ತಗುರು ಹೆಗಡೆ ಒತ್ತಾಯಿಸಿದರು.