‘ಪ್ರಜಾವಾಣಿ’ಯ ಮಂಗಳವಾರದ ಸಂಚಿಕೆಯಲ್ಲಿ ಪ್ರಕಟವಾದ ‘ಸ್ವಚ್ಛವಾಗಲು ಬಿಜೆಪಿಯತ್ತ ನಾಯಕರ ದೌಡು’ ವರದಿಯ ಸಹಿತ ‘X’ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಕಂಪನಿಗಳು ಭ್ರಷ್ಟಾಚಾರದ ಆರೋಪ ಹೊತ್ತಿದ್ದರೆ ಚುನಾವಣಾ ಬಾಂಡ್ ಖರೀದಿಸುವ ಮೂಲಕ ಶುದ್ಧರಾಗಬಹುದು! ರಾಜಕಾರಣಿಗಳು ಭ್ರಷ್ಟರಾಗಿದ್ದರೆ ಬಿಜೆಪಿ ಸೇರುವ ಮೂಲಕ ಪವಿತ್ರರಾಗಬಹುದು!’ ಎಂದು ಲೇವಡಿ ಮಾಡಿದೆ.