ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ, ‘ಮೊಟ್ಟೆ ಹೊಡೆದಿದ್ದಾರೆ ಎನ್ನಲಾದ ಸಂಪತ್ ಎಂಬ ವ್ಯಕ್ತಿಯು ನನ್ನೊಡನೆ ಫೋಟೊ ತೆಗೆಸಿಕೊಂಡಿದ್ದು, ಆತ ಬಿಜೆಪಿ ಕಾರ್ಯಕರ್ತ ಎಂದು ಕಾಂಗ್ರೆಸ್ ಹೇಳಿದೆ. ಆದರೆ, ಇದು ಸತ್ಯಕ್ಕೆ ದೂರ. ನನ್ನೊಡನೆ ಅನೇಕ ಕಾಂಗ್ರೆಸ್ ಕಾರ್ಯಕರ್ತರೂ ಚಿತ್ರ ತೆಗೆಸಿಕೊಂಡಿದ್ದಾರೆ. ಹಾಗೆಂದು, ಅವರೆಲ್ಲ ನಮ್ಮ ಪಕ್ಷದ ಕಾರ್ಯಕರ್ತರು ಆಗಲು ಸಾಧ್ಯವಿಲ್ಲ’ ಎಂದರು.