ಜೆಡಿಎಸ್ ಪಕ್ಷದ ರಾಜ್ಯ ಸಂಸದೀಯ ಮಂಡಳಿ ಸಭೆ ಗುರುವಾರ ಇಲ್ಲಿ ನಡೆಯಲಿದ್ದರೂ, ಉಪಚುನಾವಣೆಯ ಎಲ್ಲಾ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಾಧ್ಯತೆ ತೀರಾ ಕಡಿಮೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅನರ್ಹ ಶಾಸಕರ ಬಗ್ಗೆ ಸುಪ್ರೀಂ ಕೋರ್ಟ್ನಿಂದ ಇನ್ನೂ ಯಾವುದೇ ತೀರ್ಮಾನ ಪ್ರಕಟವಾಗದ ಕಾರಣ ಕೆಲವು ದಿನ ಕಾದು ನೋಡುವ ತಂತ್ರವನ್ನು ಪಕ್ಷದ ನಾಯಕರು ಮಾಡಿದ್ದಾರೆ.