<p><strong>ಬೆಂಗಳೂರು</strong>: ಮೈಸೂರು ‘ಮುಡಾ’, ವಾಲ್ಮೀಕಿ ನಿಗಮದ ಹಗರಣ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿಚಾರವನ್ನು ವಿಧಾನಮಂಡಲ ಅಧಿವೇಶನಲ್ಲಿ ಪ್ರಸ್ತಾಪ ಮಾಡಲು ಗುರುವಾರ ನಡೆದ ಬಿಜೆಪಿ ಪ್ರಮುಖರ ಸಮಿತಿ ಸಭೆ ನಿರ್ಧಾರ ತೆಗೆದುಕೊಂಡಿದೆ.</p>.<p>ಈ ಕುರಿತು ಮಾಹಿತಿ ನೀಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ‘ಮುಡಾ ಹಗರಣ ಸಂಬಂಧ ರಾಜೀನಾಮೆ ನೀಡುವುದು ಅಥವಾ ಭಂಡತನದಿಂದ ಸಮರ್ಥನೆ ಮಾಡಿಕೊಳ್ಳುವುದಷ್ಟೇ ಮುಖ್ಯಮಂತ್ರಿ ಮುಂದಿದೆ. ಸಾರ್ವಜನಿಕವಾಗಿ ಬೆತ್ತಲಾದರೂ, ಅದಕ್ಕೂ ಸಮರ್ಥನೆ ಕೊಡುವುದಾದರೆ ಇನ್ನೇನು ಹೇಳಲು ಸಾಧ್ಯ’ ಎಂದು ಪ್ರಶ್ನಿಸಿದರು.</p>.<p>‘ಮೈಸೂರಿನ ಜನರೇ ಇದೊಂದು ಮಹಾಮೋಸ ಎಂದು ಹೇಳುತ್ತಿದ್ದಾರೆ. ಭೂಮಿ ಖರೀದಿ ಬಳಿಕ ಇವರ ಭಾಮೈದ ಜಿಪಿಎ ಮಾಡಿಕೊಂಡಿದ್ದರು. ಅಲ್ಲಿಂದಲೇ ಅಪರಾಧ, ಅಲ್ಲಿಂದಲೇ ಮೋಸ ನಡೆದಿದೆ. ಯಾರದೋ ಆಸ್ತಿಯನ್ನು ಇನ್ಯಾರೋ ಜಿಪಿಎ ಮಾಡಿಸಿಕೊಳ್ಳುವ ಮೂಲಕ ಹಗರಣ ನಡೆದಿದೆ’ ಎಂದರು.</p>.<p>‘224 ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆ ಬಲಪಡಿಸುವುದು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಕೆಳಹಂತದ ಸಿದ್ಧತೆ ನಡೆಸಲು ನಿರ್ಧರಿಸಲಾಗಿದೆ. ಸಹಕಾರಿ ಕ್ಷೇತ್ರದ ಚುನಾವಣೆಗೆ ತಂಡಗಳ ರಚನೆ, ಮೇಲ್ವಿಚಾರಣೆ, ಮಾರ್ಗದರ್ಶನ ಸೇರಿದಂತೆ ಹಲವು ವಿಷಯಗಳನ್ನು ಸಮಿತಿ ಸಭೆಯಲ್ಲಿ ಚರ್ಚೆ ನಡೆಸಿದ್ದೇವೆ’ ವಿವರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೈಸೂರು ‘ಮುಡಾ’, ವಾಲ್ಮೀಕಿ ನಿಗಮದ ಹಗರಣ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿಚಾರವನ್ನು ವಿಧಾನಮಂಡಲ ಅಧಿವೇಶನಲ್ಲಿ ಪ್ರಸ್ತಾಪ ಮಾಡಲು ಗುರುವಾರ ನಡೆದ ಬಿಜೆಪಿ ಪ್ರಮುಖರ ಸಮಿತಿ ಸಭೆ ನಿರ್ಧಾರ ತೆಗೆದುಕೊಂಡಿದೆ.</p>.<p>ಈ ಕುರಿತು ಮಾಹಿತಿ ನೀಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ‘ಮುಡಾ ಹಗರಣ ಸಂಬಂಧ ರಾಜೀನಾಮೆ ನೀಡುವುದು ಅಥವಾ ಭಂಡತನದಿಂದ ಸಮರ್ಥನೆ ಮಾಡಿಕೊಳ್ಳುವುದಷ್ಟೇ ಮುಖ್ಯಮಂತ್ರಿ ಮುಂದಿದೆ. ಸಾರ್ವಜನಿಕವಾಗಿ ಬೆತ್ತಲಾದರೂ, ಅದಕ್ಕೂ ಸಮರ್ಥನೆ ಕೊಡುವುದಾದರೆ ಇನ್ನೇನು ಹೇಳಲು ಸಾಧ್ಯ’ ಎಂದು ಪ್ರಶ್ನಿಸಿದರು.</p>.<p>‘ಮೈಸೂರಿನ ಜನರೇ ಇದೊಂದು ಮಹಾಮೋಸ ಎಂದು ಹೇಳುತ್ತಿದ್ದಾರೆ. ಭೂಮಿ ಖರೀದಿ ಬಳಿಕ ಇವರ ಭಾಮೈದ ಜಿಪಿಎ ಮಾಡಿಕೊಂಡಿದ್ದರು. ಅಲ್ಲಿಂದಲೇ ಅಪರಾಧ, ಅಲ್ಲಿಂದಲೇ ಮೋಸ ನಡೆದಿದೆ. ಯಾರದೋ ಆಸ್ತಿಯನ್ನು ಇನ್ಯಾರೋ ಜಿಪಿಎ ಮಾಡಿಸಿಕೊಳ್ಳುವ ಮೂಲಕ ಹಗರಣ ನಡೆದಿದೆ’ ಎಂದರು.</p>.<p>‘224 ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆ ಬಲಪಡಿಸುವುದು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಕೆಳಹಂತದ ಸಿದ್ಧತೆ ನಡೆಸಲು ನಿರ್ಧರಿಸಲಾಗಿದೆ. ಸಹಕಾರಿ ಕ್ಷೇತ್ರದ ಚುನಾವಣೆಗೆ ತಂಡಗಳ ರಚನೆ, ಮೇಲ್ವಿಚಾರಣೆ, ಮಾರ್ಗದರ್ಶನ ಸೇರಿದಂತೆ ಹಲವು ವಿಷಯಗಳನ್ನು ಸಮಿತಿ ಸಭೆಯಲ್ಲಿ ಚರ್ಚೆ ನಡೆಸಿದ್ದೇವೆ’ ವಿವರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>